ಬೆಂಗಳೂರು
ಕೆಫೆ ಬ್ಲಾಸ್ಟ್ ಕೇಸ್: ಸಿಸಿಬಿ ವಶದಲ್ಲಿ ಶಂಕಿತ

Bengalore : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಓರ್ವ ಶಂಕಿತನನ್ನ ಸಿಸಿಬಿ ವಶಕ್ಕೆ ಪಡೆದಿದೆ. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಅನುಮಾನಸ್ಪದ ವ್ಯಕ್ತಿಯನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಕೃತ್ಯ ನಡೆಸಿ ಬೆಂಗಳೂರು ಗಡಿ ದಾಟಿ ಹೋಗುವ ಮುನ್ನವೇ ಶಂಕಿತ ಜಾಡು ಹಿಡಿದು ವಶಕ್ಕೆ ಪಡೆದು ನಿಗೂಢ ಸ್ಥಳದಲ್ಲಿ ವಿಚಾರಣೆ ಮಾಡುತ್ತಿದ್ದಾರೆ. ಕೃತ್ಯ ನಡೆದ ಸ್ಥಳ ಮತ್ತು ಸುತ್ತಮುತ್ತಲ ಸುಮಾರು ನೂರಕ್ಕೂ ಹೆಚ್ಚು ಸಿಸಿಟಿವಿಗಳನ್ನ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದೆ.
ರಾಮೇಶ್ವರಂ ಕೆಫೆಯಲ್ಲಿ ಸುಧಾರಿತ ಸ್ಫೋಟಕ ಬಳಸಿಯೇ ಬ್ಲಾಸ್ಟ್ ಮಾಡಿರೋದು ಕನ್ಫರ್ಮ್ ಆಗಿದೆ. ಇದೀಗ ಸಿಸಿಬಿ ವಿಚಾರಣೆಗೆ ಒಳಪಡಿಸಿರೋ ವ್ಯಕ್ತಿಯೇ ಬಾಂಬ್ ಇಟ್ಟ ಆರೋಪಿಯಾ ಎಂದು ಸಿಸಿಬಿ ಟೀಮ್ ವಿಚಾರಣೆ ಚುರುಕುಗೊಳಿಸಿದೆ. ಚರ್ಚ್ ಸ್ಟ್ರೀಟ್ ಬ್ಲಾಸ್ಟ್ ಬಳಿಕ ಬೆಂಗಳೂರಿನಲ್ಲಿ ನಡೆದ ಸ್ಫೋಟ ಪ್ರಕರಣ ಇದಾಗಿದ್ದು, ಸಿಲಿಕಾನ್ ಸಿಟಿ ನಾಗರಿಕರ ಆತಂಕಕ್ಕೆ ಕಾರಣವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?