ಬೆಂಗಳೂರು
ಕೆಫೆ ಬ್ಲ್ಯಾಸ್ಟ್: ಮೂವರಿಗೆ ಕಿವಿ ಕೇಳುತ್ತಿಲ್ಲ ಎಂದ ವೈದ್ಯರು!
ಬೆಂಗಳೂರಿನ ಕುಂದಲಹಳ್ಳಿ ಸಮೀಪವಿರುವ ಪ್ರತಿಷ್ಟಿತ ರಾಮೇಶ್ವರಂ ಕೆಫೆ ಬ್ಲ್ಯಾಸ್ಟ್ ನಲ್ಲಿ 9 ಮಂದಿ ಗಾಯಗೊಂಡಿದ್ದಾರೆ. ಅವರ ಪೈಕಿ ಮೂವರು ಬ್ರೂಕ್ ಫೀಲ್ಡ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಪೋಟದ ತೀವ್ರತೆಗೆ ಮಹಿಳೆಯೊಬ್ಬರಿಗೆ ಶೇಖಡ 40 ಪರ್ಸೆಂಟ್ ಸುಟ್ಟ ಗಾಯವಾಗಿದೆ. ಇನ್ನುಳಿದ ಇಬ್ಬರಿಗೆ ಕಿವಿ ಪರದೆಗೆ ಸ್ವಲ್ಪ ಹಾನಿಯಾಗಿದೆ ಎಂದು ಆಸ್ಪತ್ರೆಯ ವೈದ್ಯ ಡಾ.ಪ್ರದೀಪ್ ಕುಮಾರ್ ತಿಳಿಸಿದ್ದಾರೆ.
ಇನ್ನು ಸ್ಫೋಟದಲ್ಲಿ ಗಾಯಗೊಂಡಿರುವ ಮಹಿಳೆ ಮುಖ ಸುಟ್ಟು ಹೋಗಿದ್ದು, ಪ್ಲಾಸ್ಟಿಕ್ ಸರ್ಜರಿ ಮಾಡಬೇಕಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಡಿಮೆ ಪ್ರಮಾಣದಲ್ಲಿ ಬ್ಲ್ಯಾಸ್ಟ್ ಆಗಿರೋದ್ರಿಂದ ಹೆಚ್ಚಿನ ಹಾನಿ ಸಂಭವಿಸಿಲ್ಲ. ಗಾಯಾಳುಗಳನ್ನು ಅವರು ಧರಿಸಿದ್ದ ಬಟ್ಟೆಗಳೇ ರಕ್ಷಿಸಿವೆ ಎಂದು ವೈದ್ಯರು ತಿಳಿಸಿದ್ದಾರೆ. ಅಲ್ಲದೇ ಗಾಯಾಳುಗಳು ಧರಿಸಿದ್ದ ಬಟ್ಟೆಯನ್ನ ಎಫ್ ಎಸ್ ಎಲ್ಗೆ ಕಳಿಸಿಕೊಡಲಾಗಿದೆ. ಇನ್ನು ಮೂರು ಜನರಿಗೂ ಸ್ಫೋಟದ ಶಬ್ಧದಿಂದ ಕಿವಿಯ ಭಾಗಕ್ಕೆ ಹಾನಿಯಾಗಿದೆ. ಸಿಟಿ ಸ್ಕ್ಯಾನ್ ಮಾಡಿದ್ದು, ಚಿಕಿತ್ಸೆ ಮುಂದುವರೆಯುತ್ತಿದೆ ಎಂದು ತಿಳಿಸಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?