ರೈಸಿಂಗ್ ಕನ್ನಡ :
ಮಂಗಳೂರು :
ಕೊರೊನಾ ತನ್ನ ಕದಂಬ ಬಾಹುಗಳನ್ನ ಎಲ್ಲೆಡೆ ವಿಸ್ತರಿಸುತ್ತಿದೆ. ದಕ್ಷಿಣ ಕನ್ನಡದಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಪೊಲೀಸ್ ಸಿಬ್ಬಂದಿಗೂ ಇದೀಗ ಕೊರೊನಾ ಸೋಂಕಾಗಿದೆ. ಆದ್ರೆ, ಇಲಾಖೆ ಮಾತ್ರ ಈ ಬಗ್ಗೆ ತಲೆಕೆಡಿಸಿಕೊಂಡಿಲ್ಲ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಇಲಾಖೆ ಈ ವಿಚಾರದಲ್ಲಿ ನಿರ್ಲಕ್ಷ್ಯ ತೋರುತ್ತಿದೆ ಅನ್ನೋ ಆರೋಪ ಕೇಳಿ ಬಂದಿದೆ.
ಹೌದು ಜೂನ್ 24 ರಂದು ಉಳ್ಳಾಲ ಪೊಲೀಸ್ ಠಾಣೆಯ ಪಿಎಸ್ಐಗೆ ಕೊರೊನಾ ಪಾಸಿಟಿವ್ ಬಂದಿತ್ತು. ಆದರೆ ಪಿಎಸ್ಐ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದ ಸಿಬ್ಬಂದಿಗಳಿಗೆ ಕ್ವಾರಂಟೈನ್ ಮಾಡೇ ಇಲ್ಲ. ಈ ವಿಚಾರದಲ್ಲಿ ಇಲಾಖೆ ನಿರ್ಲಕ್ಷ್ಯ ಮಾಡುತ್ತಿದೆ ಎಂದು ನೊಂದ ಸಿಬ್ಬಂದಿಗಳು ಹೇಳಿದ್ದಾರೆ ಮತ್ತು ಠಾಣೆಯ ಸಿಬ್ಬಂದಿಗಳಿಗು ಯಾವುದೇ ಅರೋಗ್ಯ ತಪಾಸಣೇ ಮಾಡದೆ ಡ್ಯೂಟಿಗೆ ಕರೆಸುತ್ತಿದ್ದಾರಂತೆ.
ಅಷ್ಟೇ ಯಾಕೆ, ಎಸ್ಎಸ್ಎಲ್ಸಿ ಮಕ್ಕಳ ಪರೀಕ್ಷಾ ಕೇಂದ್ರಗಳ ಬಳಿ ಡ್ಯೂಟಿಗೂ ಹಾಕಿದ್ದಾರೆ. ನಮ್ಮ ಜೊತೆಯಲ್ಲೇ ಮಕ್ಕಳಿಗೂ ಸಂಕಷ್ಟ ಎದುರಾದ್ರೆ ಏನು ಮಾಡೋದು ಅನ್ನೋ ಗೊಂದಲ ನೊಂದ ಪೊಲೀಸರದ್ದಾಗಿದೆ. ಪೊಲೀಸ್ ಇಲಾಖೆಗೂ ಸಾಕಷ್ಟು ಸಂಕಷ್ಟಗಳಿರಬಹುದು ನಿಜ, ಹಾಗಂತ, ಸೋಂಕಿತ ಪಿಎಸ್ಐ ಜೊತೆ ಪ್ರಾಥಮಿಕ ಸಂಪರ್ಕ ಹೊಂದಿದ್ದವರನ್ನೂ ಕ್ವಾರಂಟೈನ್ ಮಾಡದೆ ಇರೋದು ನಿಜಕ್ಕೂ ಬೇಸರದ ಸಂಗತಿಯೇ ಸರಿ. ಇನ್ನಾದ್ರೂ ಇಲಾಖೆ ಮತ್ತು ಜಿಲ್ಲಾಡಳಿತ ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?