Featured
ಜಮ್ಮುಕಾಶ್ಮೀರದಿಂದ 10ಸಾವಿರ ಪ್ಯಾರಾಮಿಲಿಟರಿ ಫೋರ್ಸ್ ವಾಪಾಸ್- ಕೇಂದ್ರ ಸರ್ಕಾರದಿಂದ ಆದೇಶ

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಜಮ್ಮು ಕಾಶ್ಮೀರದ ಕಣಿವೆಯ ಪರಿಸ್ಥಿತಿಯನ್ನು ಹತೋಟಿಗೆ ತರಲು ನಿಯೋಜಿಸಲಾಗಿದ್ದ 10,000 ಪ್ಯಾರಾಮಿಲಿಟರಿ ಪಡೆಗಳನ್ನು ಕೇಂದ್ರ ಸರ್ಕಾರ ವಾಪಾಸ್ ಕರೆಸಿಕೊಂಡಿದೆ. ಸುಮಾರು 10,000 ಅರೆಸೈನಿಕ ಪಡೆಗಳನ್ನು ತಕ್ಷಣವೇ ಹಿಂಪಡೆಯಲು ಕೇಂದ್ರ ಆದೇಶಿಸಿದ್ದು ಗೃಹ ಸಚಿವಾಲಯ ಸದ್ಯ ಕಣಿವೆಯಲ್ಲಿರುವ ಪರಿಸ್ಥಿತಿಯನ್ನು ಪರಿಶೀಲಿಸಿ ಈ ಕ್ರಮ ಕೈಗೊಂಡಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ವರ್ಷದ ಹಿಂದೆ ಆರ್ಟಿಕಲ್ 370ಯನ್ನು ಕೇಂದ್ರ ಸರ್ಕಾರ ರದ್ದುಗೊಳಿಸಿತ್ತು. ಈ ವೇಳೆ ಸುರಕ್ಷತೆ ದೃಷ್ಟಿಯಿಂದ ಪ್ಯಾರಾಮಿಲಿಟರಿ ಪಡೆಗಳನ್ನು ನಿಯೋಜನೆ ಮಾಡಲಾಗಿತ್ತು. ಈಗ ತಕ್ಷಣದಿಂದ ಜಾರಿಗೆ ಬರುವಂತೆ 100 ಸೇನಾ ತುಕಡಿಗಳನ್ನು ವಾಪಸ್ ಪಡೆಯಲು ನಿರ್ಧರಿಸಲಾಗಿದೆ.
ಈ ನಡುವೆ ಇನ್ನೂ 300 ತುಕಡಿಗಳು ಜಮ್ಮು ಕಾಶ್ಮೀರದಲ್ಲಿ ಬೀಡು ಬಿಟ್ಟಿವೆ. ಇವುಗಳನ್ನು ಕೂಡ ಶೀಘ್ರದಲ್ಲೇ ವಾಪಾಸ್ ಕರೆಸಿಕೊಳ್ಳುವ ಚರ್ಚೆ ನಡೆಯುತ್ತಿದೆ. ಆರ್ಟಿಕಲ್ 370 ರದ್ದಾದ ಬಳಿಕ ಜಮ್ಮುಕಾಶ್ಮೀರವನ್ನು ದೇಶದ ಇತರೆ ರಾಜ್ಯಗಳಂತೆ ಸಾಮಾನ್ಯ ರಾಜ್ಯವೆಂದು ಘೋಷಿಸಲಾಗಿದೆ. ಲಡಾಕ್ ಅನ್ನು ಕೇಂದ್ರಾಡಳಿತ ಪ್ರದೇಶವೆಂದು ವಿಭಜಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?