ಮಂಗಳೂರು : ಮಂಗಳೂರು ಮಹಾನಗರ ಪಾಲಿಕೆ ಟಿಕೆಟ್ ಫೈಟ್ ಜೋರಾಗಿದ್ದು, ಕಾಂಗ್ರೆಸ್ನಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಟಿಕೆಟ್ಗಾಗಿ ಶಾಸಕ ಮೊಯಿದ್ದೀನ್ ಭಾವ ಹಾಗೂ ಗುಲ್ಝಾರ್ ಬಾನು ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ.
ಈ ಹಿಂದೆ ಸುರತ್ಕಲ್ ವಾರ್ಡ್ನಿಂದ ಸ್ಪರ್ಧಿಸಿ, ಗುಲ್ಝಾರ್ ಬಾನು ಸೋತಿದ್ರು. ಮತ್ತೆ ಟಿಕೆಟ್ ನೀಡುವ ಭರವಸೆಯನ್ನ ಮೊಯಿದ್ದೀನ್ ಭಾವ ನೀಡಿದ್ರು. ಆದ್ರೆ, ಈ ಬಾರಿ ಗುಲ್ಝಾರ್ ಬಾನುಗೆ ಟಿಕೆಟ್ ನೀಡದ ಕಾರಣ, ಬೆಂಬಲಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರಿಂದಾಗಿ ಗುಲ್ಝಾರ್ ಬಾನು ಪುತ್ರ ಹಾಗೂ ಮೊಯಿದ್ದೀನ್ ಭಾವ ನಡುವೆ ಮಾತಿನ ಚಕಮಕಿ ನಡೆದಿದೆ.
ಈ ಮಧ್ಯೆ, ಕಾಂಗ್ರೆಸ್ನಿಂದ ಟಿಕೆಟ್ ಸಿಗದ ಆಶಾ ಡಿಸಿಲ್ವಾ ಬಿಜೆಪಿಗೆ ಹಾರಿದ್ದಾರೆ. ಮಂಗಳೂರಿನ 39ನೇ ವಾರ್ಡ್ ಫಳ್ನೀರಿನಿಂದ ಆಶಾ ಡಿಸಿಲ್ವಾ ಬಿಜೆಪಿ ಅಭ್ಯರ್ಥಿ ಆಗಿದ್ದಾರೆ.
ಒಟ್ಟಿನಲ್ಲಿ ಮಂಗಳೂರು ಪಾಲಿಕೆ ಚುನಾವಣೆ ಕೂಡ ಕಾಂಗ್ರೆಸ್ಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ರಾಜ್ಯ ಮಟ್ಟದಲ್ಲೇ ಅಲ್ಲದೆ, ಸ್ಥಳೀಯ ಮಟ್ಟದಲ್ಲೂ ಭಿನ್ನಮತ ಜೋರಾಗಿದ್ದು, ಮಾರಾಮಾರಿಗೆ ಕಾರಣವಾಗಿದೆ. ಕಾಂಗ್ರೆಸ್ ನಾಯಕರು ಇದನ್ನ ಹೇಗೆ ಶಮನ ಮಾಡ್ತಾರೋ ಏನೋ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?