ರೈಸಿಂಗ್ ಕನ್ನಡ, ಉತ್ತರ ಕನ್ನಡ :
ಸಿಎಂ ಆದ ಮೊದಲ ದಿನವೇ ಚುರುಕಾಗಿದ್ದ ಬೊಮ್ಮಾಯಿ, ಎರಡನೇ ದಿನ ಗುರುವಾರ ಉತ್ತರ ಕನ್ನಡ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಯಲ್ಲಾಪರ ತಾಲೂಕಿನ ಕಳಚೆ ಗ್ರಾಮ, ಅರಬೈಲು ಘಟ್ಟ, ಗುಳ್ಳಾಪುರ ಸೇರಿ ಹಲವು ಪ್ರದೇಶದಲ್ಲಿ ಸಿಎಂ ಪರಿಶೀಲನೆ ನಡೆಸಿದ್ರು. ಈ ವೇಳೆ ಸಿಎಂ ಬಳಿ ತಮ್ಮ ಸಮಸ್ಯೆ ಹೇಳುತ್ತಾ ಮಕ್ಕಳು ಕಣ್ಣೀರಿಟ್ರು. ಪ್ರವಾಹದಿಂದಾಗಿ ಶಾಲೆಗೂ ಹೋಗಕ್ಕಾಗ್ತಿಲ್ಲ. ಇಂಟರ್ನೆಟ್ ಸಮಸ್ಯೆಯಿಂದ ಆನ್ಲೈನ್ ಕ್ಲಾಸ್ಗೆ ಸಮಸ್ಯೆ ಆಗ್ತಿದೆ ಅಂತಾ ವಿದ್ಯಾರ್ಥಿಗಳು ಸಿಎಂ ಬಳಿ ಕಣ್ಣೀರಿಟ್ರು.
ಪ್ರವಾಹದಿಂದಾಗಿ ಬದುಕು ಕಳೆದುಕೊಂಡಿದ್ದ ಸಂತ್ರಸ್ತರಿಗೆ ಸೂಕ್ತ ಪರಿಹಾರ ನೀಡೋದಾಗಿ ಸಿಎಂ ಭರಸವೆ ನೀಡಿದ್ರು. ಬಳಿಕ ತಾಲೂಕು ಆಸ್ಪತ್ರೆ ಬಳಿಯಿರೋ ಕೋವಿಡ್ ಸೆಂಟರ್ಗೂ ಸಿಎಂ ಬೊಮ್ಮಾಯಿ ಭೇಟಿ ನೀಡಿ ಪರಿಶೀಲಿಸಿದ್ರು. ಈ ವೇಳೆ ಸಿಎಂಗೆ ಶಾಸಕ ಶಿವರಾಂ ಹೆಬ್ಬಾರ್, ಡಿಸಿ ಮುಲ್ಲಯ್ ಮುಹಿಲನ್ ಸಾಥ್ ನೀಡಿದ್ರು.
ಬಳಿಕ ಸ್ಥಳೀಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಿಎಂ ಅಂಕೋಲಾ ತಾಲೂಕು ಕಚೇರಿಯಲ್ಲಿ ಪ್ರಧಾನಿ ಮೋದಿ ಜೊತೆಗಿನ ವಿಡಿಯೋ ಕಾನ್ಫರೆನ್ಸ್ನಲ್ಲಿ ಭಾಗಿಯಾಗಿದ್ರು. ಈ ವೇಳೆ ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ಮೋದಿಗೆ ಮಾಹಿತಿ ನೀಡಿದ್ರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?