Uncategorized
ಸಿದ್ದರಾಮಯ್ಯಗೆ ಬಹಿರಂಗ ಸವಾಲು – ದಾಖಲೆ ಸಮೇತ ಬಂದು ಮಾತಾಡಿ ಎಂದ ಸಿಎಂ ಬಿಎಸ್ ಯಡಿಯೂರಪ್ಪ

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾಗೆ ಸಂಬಂಧಿಸಿದಂತೆ, ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಯಾವುದೇ ಹಗರಣ ನಡೆದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಿಎಂ ಬಿಎಸ್ವೈ, ಸಿದ್ದರಾಮಯ್ಯನವರು ವಿಧಾನಸೌಧಕ್ಕೆ ಬಂದು ಎಲ್ಲಾ ದಾಖಲೆಗಳನ್ನೂ ಪರಿಶೀಲಿಸಬಹುದು ಎಂದು ಆಹ್ವಾನಿಸಿದ್ದಾರೆ.
ಯಾವುದೇ ದಾಖಲೆಗಳನ್ನೂ ಇಟ್ಟುಕೊಳ್ಳದೇ ಹಲವು ದಿನಗಳಿಂದ ಸಿದ್ದರಾಮಯ್ಯನವರು ಅನಾವಶ್ಯಕವಾಗಿ ಟೀಕೆ ಮಾಡುತ್ತಿದ್ದಾರೆ, ಇಷ್ಟು ದಿನ ಅವರ ಟೀಕೆಗಳನ್ನು ಕೇಳಿಕೊಂಡು ಮೌನವಾಗಿದ್ದೆ, ಬೇಕಾದ್ರೆ, ಅವರೇ ಬಂದು ಅಂಕಿ-ಅಂಶಗಳನ್ನು ಪರಿಶೀಲಿಸಲಿ ಎಂದಿದ್ದಾರೆ.
ಒಂದು ವೇಳೆ ಖರೀದಿಯಲ್ಲಿ ಯಾವುದೇ ಲೋಪದೋಷಗಳು ಕಂಡುಬಂದರೆ, ಅಧಿಕಾರಿಗಳಾಗಿ, ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳದೇ ಬಿಡುವುದಿಲ್ಲ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?