Connect with us

ಟಾಪ್ ನ್ಯೂಸ್

ಸಿಎಂ ಸಿದ್ದರಾಮಯ್ಯ ಮಾತು ಹಾಸ್ಯಾಸ್ಪದ | ಬಿಜೆಪಿ ಮುಖಂಡ ಡಾ.ಬಾಬು ರಾಜೇಂದ್ರ ನಾಯ್ಕ್ ವ್ಯಂಗ್ಯ

ವಿಜಯಪುರ : ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು” ಎಂಬಂತೆ ಕೇಂದ್ರ ಸರ್ಕಾರ ವರ್ತಿಸುತ್ತದೆ ಎಂದಿರುವ ಮಾತು ತೀರಾ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಮುಖಂಡ, ವಿಜಯಪುರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿ ಡಾ.ಬಾಬು ರಾಜೇಂದ್ರ ನಾಯ್ಕ್ ವ್ಯಂಗ್ಯವಾಡಿದ್ದಾರೆ. ದುಡಿಯಲು ಮನಸ್ಸಿದ್ದ ಕನ್ನಡಿಗ ಯುವಜನತೆಯನ್ನು ನಿರುದ್ಯೋಗಿಗಳನ್ನಾಗಿಸಿ, ಭತ್ಯೆ ಕೊಡುತ್ತೇವೆ ಎಂದು ಭರವಸೆ ನೀಡಿ, ಅವರನ್ನು ಸೋಮಾರಿಗಳನ್ನಾಗಿಸಲು ಪ್ರಯತ್ನಿಸಿದ್ದು ಯಾರು ಸಿದ್ದರಾಮಯ್ಯನವರೇ? ಎಂದು ಪ್ರಶ್ನೆ ಮಾಡಿದ್ದಾರೆ.

ನಮ್ಮ ವಿಜಯಪುರ ಜಿಲ್ಲೆಯ ದೊಡ್ಡ ಸಂಖ್ಯೆಯ ಯುವ ಜನತೆ ಗುಳೆ ಹೋಗುತ್ತಿದ್ದಾರೆ. ಬೆಂಗಳೂರು ಕೇಂದ್ರಿತ ಅಭಿವೃದ್ಧಿ ಬಗ್ಗೆ ಮಾತನಾಡುವ ಸರ್ಕಾರಕ್ಕೆ, ನಮ್ಮ ಉತ್ತರ ಕರ್ನಾಟಕಕ್ಕೆ ಅವಕಾಶಗಳನ್ನು ನೀಡಬೇಕೆಂಬ ಕನಿಷ್ಠ ಇಚ್ಛಾಶಕ್ತಿಯೂ ಇಲ್ಲ ಎಂದು ಕಿಡಿಕಾರಿದ್ದಾರೆ. ಕರ್ನಾಟಕಕ್ಕೆ ಹಿಂದಿನ ಯುಪಿಎ ಸರ್ಕಾರ ಕೊಡುತ್ತಿದ್ದುದಕ್ಕಿಂತಲೂ ಹೆಚ್ಚಿನ ಕೊಡುಗೆಗಳನ್ನು ಇಂದಿನ ಕೇಂದ್ರ ಸರ್ಕಾರ ನೀಡುತ್ತಿದೆ. ಆದರೆ, ರಾಜ್ಯ ಸರ್ಕಾರ ಮಾತ್ರ ಉತ್ತರ ಕರ್ನಾಟಕಕ್ಕೆ ದಿವ್ಯ ನಿರ್ಲಕ್ಷ್ಯ ತೋರಿ, ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಾಬು ರಾಜೇಂದ್ರ ನಾಯ್ಕ್ ಆಕ್ರೋಶ ವ್ಯಕ್ತಪಡಿಸಿದ್ರು.

“ಕೂತು ತಿನ್ನುವವನಿಗೆ ಮೃಷ್ಟಾನ್ನ ಕೊಟ್ಟು, ದುಡಿಯುವ ಮಗನಿಗೆ ಬರೆ ಎಳೆದರು” ಎಂದು ಸಿದ್ದರಾಮಯ್ಯನವರು ಹೇಳಿರುವುದು ನಮ್ಮ ವಿಜಯಪುರಕ್ಕೆ ಸೂಕ್ತವಾಗಿದೆ. ನಮ್ಮ ಪಾಲಿಗೆ ಬರೆಗಳ ಮೇಲೆ ಬರೆಗಳು ಬೀಳುತ್ತಿವೆಯೇ ಹೊರತು, ಅಭಿವೃದ್ಧಿ ಮಾತ್ರ ಕಾಣುತ್ತಿಲ್ಲ! ನಮ್ಮ ಮೇಲೆ ಬರೆ ಎಳೆಯುವುದನ್ನು ನಿಲ್ಲಿಸಿ, ಇನ್ನಾದರೂ ಉತ್ತರ ಕರ್ನಾಟಕದ ಕಡೆ ಕಣ್ಣು ಹಾಯಿಸಿ ಮುಖ್ಯಮಂತ್ರಿಗಳೇ ಎಂದು ಬಾಬು ರಾಜೇಂದ್ರ ನಾಯ್ಕ್ ಒತ್ತಾಯಿಸಿದ್ದಾರೆ.

ಅಷ್ಟೇ ಅಲ್ಲದೆ, ಸಿದ್ದರಾಮಯ್ಯನವರ ಆರೋಪಗಳು ಸತ್ಯಕ್ಕೆ ದೂರವಾಗಿದ್ದು, ಹಿಂದೆ ಯಾವ ಸರ್ಕಾರವೂ ನೀಡದಷ್ಟು ಅನುದಾನವನ್ನು ಕೇಂದ್ರ ಸರ್ಕಾರ, ಕರ್ನಾಟಕಕ್ಕೆ ನೀಡ್ತಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ರಾಜ್ಯಕ್ಕೆ ಹತ್ತು ವರ್ಷಗಳ ಅವಧಿಯಲ್ಲಿ ತೆರಿಗೆ ಹಂಚಿಕೆಯಾಗಿ 66 ಸಾವಿರ ಕೋಟಿ ರೂಪಾಯಿ ಬಂದಿತ್ತು. ಆದರೆ ಬಿಜೆಪಿ ಸರ್ಕಾರ ಕಳೆದ ಹತ್ತು ವರ್ಷಗಳಲ್ಲಿ 2.36 ಲಕ್ಷ ಕೋಟೆ ರೂಪಾಯಿ ನೀಡಿದೆ. ಯುಪಿಎ 86 ಸಾವಿರ ಕೋಟಿ ರೂಪಾಯಿ ಅನುದಾನ ನೀಡಿದ್ದರೆ, ಬಿಜೆಪಿ ಸರ್ಕಾರ 2.82 ಲಕ್ಷ ಕೋಟಿ ನೀಡಿದೆ. ಇದರಿಂದ ತೆರಿಗೆ ಮತ್ತು ಅನುದಾನ ಹಂಚಿಕೆ ಎರಡೂ 240 %ಗೂ ಹೆಚ್ಚಿ‌ನ ಹೆಚ್ಚಳ ಕಂಡಿವೆ. ಈ ಸತ್ಯವನ್ನು ಯಾಕೆ ಸಿದ್ದರಾಮಯ್ಯನವರು ಮರೆಮಾಚುತ್ತಿದ್ದಾರೆ ಎಂದು ಪ್ರಶ್ನೆ ಮಾಡಿದ್ರು.

ರಾಜ್ಯದಲ್ಲಿ ಆಡಳಿತ ನಡೆಸುವುದನ್ನು ಬಿಟ್ಟು, ಅನವಶ್ಯಕ ಭಾಗ್ಯಗಳಿಗೆ ಖರ್ಚು ಮಾಡಿ, ಈಗ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿರುವುದು ರಾಜ್ಯ ಸರ್ಕಾರದ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದು ಬಿಜೆಪಿ ಮುಖಂಡ ಬಾಬು ರಾಜೇಂದ್ರ ನಾಯ್ಕ್ ವಾಗ್ದಾಳಿ ನಡೆಸಿದ್ರು.

Advertisement
ಬೆಂಗಳೂರು1 year ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್1 year ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು1 year ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು1 year ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು1 year ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು1 year ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು1 year ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು1 year ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು1 year ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured6 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured6 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured6 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured1 year ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ