Featured
ಮುಖ್ಯಮಂತ್ರಿ ಯಡಿಯೂರಪ್ಪಗೆ ಗ್ಯಾರೆಂಟಿ ಖೆಡ್ಡಾ..! ಯಾಕೆ ಗೊತ್ತಾ..? ಈ ಸ್ಟೋರಿ ಓದಿ..!

ಬೆಂಗಳೂರು : ಏನೇನೋ ಸರ್ಕಸ್ ಮಾಡಿ ಸಿಎಂ ಆದ ಯಡಿಯೂರಪ್ಪಗೆ ಬಿಜೆಪಿ ನಾಯಕರೇ ಖೆಡ್ಡಾ ತೋಡಿದ್ದಾರೆ. ಯೆಸ್, ರಾಜ್ಯ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಅನ್ನೋದು ಮತ್ತೊಮ್ಮೆ ಬಯಲಾಗಿದೆ. ಮುಖಂಡರೇ ಅಲ್ಲ, ಕಾರ್ಯಕರ್ತರಲ್ಲೂ ಸಮನ್ವಯತೆ. ವಿಶೇಷ ಅಂದ್ರೆ, ನಳೀನ್ ಕುಮಾರ್ ಕಟೀಲ್ ಬಿಜೆಪಿ ರಾಜ್ಯಾಧ್ಯಕ್ಷರಾದ ಬಳಿಕ ಬಿಜೆಪಿ ಕಚೇರಿಯಲ್ಲಿ ಆಂತರಿಕ ಕಿತ್ತಾಟ ಜೋರಾಗಿದೆ. ಇದಕ್ಕೆ ಪುಷ್ಠಿ ಕೊಟ್ಟಿದೆ ಬಿಜೆಪಿ ಕಚೇರಿಯಲ್ಲೇ ಕಾರ್ಯನಿರ್ವಹಿಸುತ್ತಿದ್ದ ಬಿಎಸ್ವೈ ಬೆಂಬಲಿಗ, ಕಾರ್ಯಕರ್ತರೊಬ್ಬರ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.
ಯಡಿಯೂರಪ್ಪ ಬೆಂಬಲಿಗ, ಕಾರ್ಯಕರ್ತನ ಮೇಲೆ ಹಲ್ಲೆ ಮಾಡಿದ್ದಾರಂತೆ. ಕೊರಳಪಟ್ಟಿ ಹಿಡಿದು ಕಚೇರಿಯಿಂದ ಹೊರಹಾಕಲಾಗಿದೆಯಂತೆ. ಅಷ್ಟೇ ಅಲ್ದೆ, ಕಪಾಳ ಮೋಕ್ಷ ಮಾಡಿ ಕಚೇರಿಗೆ ಬರದಂತೆ ಧಮ್ಕಿ ಹಾಕಲಾಗಿದೆಯಂತೆ. ಘಟಾನುಘಟಿ ನಾಯಕರ ಉಪಸ್ಥಿತಿಯಲ್ಲೇ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಈ ಘಟನೆ ಕಳೆದ ವಾರ ನಡೆದಿದೆ ಎನ್ನಲಾಗಿದೆ.
ಈ ನಡುವೆ, ಯಡಿಯೂರಪ್ಪ ಬೆಂಬಲಿಗರಾಗಿದ್ದ 9 ಸಿಬ್ಬಂದಿಗೆ ಬಿಜೆಪಿ ಕಚೇರಿಯಿಂದ ಗೇಟ್ ಪಾಸ್ ನೀಡಲಾಗಿದೆ. ಕಂಪ್ಯೂಟರ್ ಆಪರೇಟರ್, ಫೋಟೋಗ್ರಾಫರ್, ವಿಡಿಯೋಗ್ರಾಫರ್ ಸೇರಿದಂತೆ ಇತರರಿಗೆ ಗೇಟ್ ಪಾಸ್ ನೀಡಲಾಗಿದೆಯಂತೆ. ಕಚೇರಿಯಲ್ಲಿ ನಡೀತಿರೋ ರಾಜಕೀಯದಿಂದ ಬೇಸತ್ತಿರೋ ಸಿಬ್ಬಂದಿ ಸಿಎಂ ಯಡಿಯೂರಪ್ಪ ಹಾಗೂ ಪುತ್ರ ಬಿ.ವೈ. ವಿಜಯೇಂದ್ರಗೆ ದೂರು ಕೂಡ ನೀಡಿದ್ದಾರೆ ಎನ್ನಲಾಗಿದೆ.
ಇದೆಲ್ಲವನ್ನೂ ನೋಡ್ತಿದ್ರೆ, ಮುಂದಿನ ದಿನಗಳಲ್ಲಿ ಯಡಿಯೂರಪ್ಪ ಅವರನ್ನೂ ಸಿಎಂ ಸ್ಥಾನದಿಂದ ಕೆಳಗೆ ಇಳಿಸೋ ಸಾಧ್ಯತೆ ತಳ್ಳಿ ಹಾಕುವಂತಿಲ್ಲ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?