Featured
ತುಂಬಿದ ಕೃಷ್ಣೆಗೆ ಸಿಎಂ ಯಡಿಯೂರಪ್ಪ ಬಾಗಿನ ಸಮರ್ಪಣೆ:ಸಚಿವರೊಂದಿಗೆ ವೈಮಾನಿಕ ಸಮೀಕ್ಷೆ

ರೈಸಿಂಗ್ ಕನ್ನಡ :
ವಿಜಯಪುರ:
ಸಿಎಂ ಬಿ.ಎಸ್.ಯಡಿಯೂರಪ್ಪ ವಿಜಯಪುರ ಜಿಲ್ಲೆಯ ಅಲಮಟ್ಟಿ ಜಲಾಶಯಕ್ಕೆ ಬಾಗಿನ ಸಮರ್ಪಿಸಿದರು.
ಬಾಗಿನ ಅರ್ಪಿಸುವುದಕ್ಕೂ ಮುನ್ನಾ ಯಡಿಯೂರಪ್ಪ ಅವರು ಹೆಲಿಕಾಪ್ಟರ್ ನಲ್ಲಿ ಬಾಗಲಕೋಟೆ, ಬೆಳಗಾವಿ ಮತ್ತು ವಿಜಯಪುರ ಜಿಲ್ಲಾ ವ್ಯಾಪ್ತಿಯಲ್ಲಿ ಕೃಷ್ಣಾ, ಘಟಪ್ರಭಾ ಮತ್ತು ಮಲಪ್ರಭಾ ನದಿಗಳ ಪ್ರವಾಹದಿಂದ ಬಾಧಿತವಾದ ಪ್ರದೇಶಗಳನ್ನು ವೈಮಾನಿಕ ಸಮೀಕ್ಷೆ ನಡೆಸಿದರು.
ಆಲಮಟ್ಟಿ ಕೆಬಿಜಿಎನ್ಎಲ್ ಸಭಾಂಗಣದಲ್ಲಿ ಮೂರು ಜಿಲ್ಲೆಗಳ ಅಧಿಕಾರಿಗಳು, ಸಚಿವರು, ಶಾಸಕರು ಹಾಗೂ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿದರು. ಮುಖ್ಯಮಂತ್ರಿ ಆಲಮಟ್ಟಿಗೆ ಭೇಟಿ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಕೋವಿಡ್ ಹಿನ್ನೆಲೆಯಲ್ಲಿ ಸಭೆಗೆ ಪ್ರತಿಯೊಬ್ಬರ ಆರೋಗ್ಯ ತಪಾಸಣೆ ಮಾಡಿ ಒಳಬಿಡಲಾಯಿತು.
ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ, ಕಂದಾಯ ಸಚಿವ ಆರ್.ಅಶೋಕ್, ವಿಧಾನ ಪರಿಷತ್ ವಿರೋಧಪಕ್ಷದ ನಾಯಕ ಎಸ್.ಆರ್.ಪಾಟೀಲ, ಶಾಸಕರಾದ ಮುರುಗೇಶ ನಿರಾಣಿ, ಸಿದ್ದು ಸವದಿ, ಎ.ಎಸ್.ಪಾಟೀಲ ನಡಹಳ್ಳಿ, ವೀರಣ್ಣ ಚರಂತಿಮಠ, ದೊಡ್ಡನಗೌಡ ಪಾಟೀಲ, ಸಂಸದ ಶಿವಕುಮಾರ್ ಉದಾಸಿ ಇದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?