ಬೆಂಗಳೂರಿನ ಜೆ.ಪಿ ನಗರದ ಆರ್ ಬಿ ಐ ಲೇಔಟ್ ನಲ್ಲಿರೋ ಬಿಬಿಎಂಪಿ ಆಟದ ಮೈದಾನದಲ್ಲಿ ಕರಾವಳಿಗರ ಒಕ್ಕೂಟ (ರಿ) ಬೆಂಗಳೂರು ಇವರ ನೇತೃತ್ವದಲ್ಲಿ ನಮ್ಮ ಕರಾವಳಿ ಉತ್ಸವ 2024 ಆಯೋಜಿಸಲಾಗಿದೆ. ಈ ಉತ್ಸವದಲ್ಲಿ ಕರಾವಳಿಯ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು , ಮನು ಹಂದಾಡಿ ಯವರಿಂದ ನಗೆ ಹಬ್ಬ , ಕಾಮಿಡಿ ಕಿಲಾಡಿ ಗಳು ಖ್ಯಾತಿಯ ರಾಕೇಶ್ ಪೂಜಾರಿ ಮೂಡಬಿದ್ರೆ ಇವರ ನಗೆ ಬುಗ್ಗೆ , ಅಂಭಾ ಭವಾನಿ ಮರಾಠಿ ಸಾಂಸ್ಕ್ರತಿಕ ಕಲಾ ವೇದಿಕೆ (ರಿ) ಪರ್ಕಳ ಇವರಿಂದ ಕರಾವಳಿ ಕಲಾ ವೈಭವ , ಹುಲಿ ಕುಣಿತ, ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು ಮಂದಾರ್ತಿ ಇವರಿಂದ ಶಿವದೂತ ಪಂಜುರ್ಲಿ ಯಕ್ಷಗಾನ, ಗ್ರಾಮೀಣ ಕ್ರೀಡೆಗಳಾದ ಹಗ್ಗ ಜಗ್ಗಾಟ, ಮಡಿಕೆ ಒಡೆಯುವ ಸ್ಪರ್ಧೆ, ಚುಕ್ಕಿ ರಂಗೋಲಿ, ಚಿತ್ರಕಲೆ, ಕೊಟ್ಟೆ ಕಟ್ಟುವ ಸ್ಪರ್ಧೆ ಹಾಗೂ ಇನ್ನೂ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.
ಕರಾವಳಿಯ ಸ್ವಾದಿಷ್ಟ ಖಾದ್ಯಗಳ ಆಹಾರ ಮೇಳ ದಲ್ಲಿ ರುಚಿ ರುಚಿಯ ಕರಾವಳಿ ಖಾದ್ಯಗಳ ಅನಾವರಣ ನಡೆಯಲಿದ್ದು ಸುಮಾರು ಎಂಬತ್ತು ಸಾವಿರದಿಂದ 1 ಲಕ್ಷ ಜನ ಸೇರುವ ನಿರೀಕ್ಷೆಯಿದೆ.
ನಮ್ಮ ಕರಾವಳಿ ಉತ್ಸವ
ಸ್ಥಳ : ಬಿಬಿಎಂಪಿ ಆಟದ ಮೈದಾನ, ಆರ್ ಬಿ ಐ ಲೇಔಟ್, ಜೆಪಿ ನಗರ
ಸಮಯ- ಭಾನುವಾರ ಬೆಳಿಗ್ಗೆ 9 ರಿಂದ ರಾತ್ರಿ 9ರವರೆಗೆ..
ಕಾಫಿ ಜೊತೆ 1 ಸ್ಪೂನ್ ತುಪ್ಪ ಸೇರಿಸಿ ಕುಡಿರಿ, ಸೊಂಟ ಸುತ್ತ ಇರೋ ಬೊಜ್ಜು ಅದ್ರಂತೆ ಕರಗಿಹೋಗುತ್ತೆ!
ಶ್ರೀರಾಮನ 500 ವರ್ಷಗಳ ವನವಾಸಕ್ಕೆ ಮುಕ್ತಿ, ಪ್ರಧಾನಿ ನರೇಂದ್ರ ಮೋದಿಯಿಂದ ರಾಮರಾಜ್ಯ ನಿರ್ಮಾಣ
ಹೆಂಡತಿ ಗರ್ಭಿಣಿಯಾಗಿದ್ದಾಗ ಪ್ರತಿಯೊಬ್ಬ ಗಂಡಂದಿರು ಮಾಡಲೇಬೇಕಾದ ಕೆಲಸಗಳಿವು!
ಚಾಮರಾಜಪೇಟೆ ರುದ್ರಭೂಮಿಯಲ್ಲಿ ಅಂತ್ಯ ಸಂಸ್ಕಾರ, ಪಂಚಭೂತಗಳಲ್ಲಿ ಪ್ರಚಂಡ ಕುಳ್ಳ ಲೀನ
ದ್ವಾರಕೀಶ್ ಅಂತಿಮ ದರ್ಶನಕ್ಕೆ ಬಂದ ಯಶ್ ದಂಪತಿ
ಮಂತ್ರಾಲಯ ಭಕ್ತರಿಗೆ ಒಂದೊಳ್ಳೆ ಗಿಫ್ಟ್ ಕೊಟ್ಟಿದ್ರು ಈ ಹಾಸ್ಯನಟ!