ರಾಜಕೀಯ
ಯದುವೀರ್ ರೇಡಿಯೋ ಕಾರ್ಯಕ್ರಮ ನಿಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು

ರಾಜಕೀಯ : ಯದುವೀರ್ ಅವರು ರೇಡಿಯೋದಲ್ಲಿ ಮಾತನಾಡುವ ಬಗ್ಗೆ ಕ್ಷಣ ಕ್ಷಣಕ್ಕೂ ರೇಡಿಯೋದಲ್ಲಿ ಜಾಹೀರಾತು ಪ್ರಸಾರ ಆಗ್ತಿದೆ. ಒಬ್ಬ ವ್ಯಕ್ತಿಯಾಗಿ ರಾಜರ ಬಗ್ಗೆ ಮಾತನಾಡುವುದರಲ್ಲಿ ತಪ್ಪಿಲ್ಲ, ಆದರೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಇದು ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆಗುತ್ತದೆ. ಯದುವೀರ್ ಅವರ ಮಾತುಗಳು ಮತದಾರರ ಮೇಲೆ ಪರಿಣಾಮ ಬೀರುತ್ತದೆ. ಈ ಕೂಡಲೇ ರೇಡಿಯೋದಲ್ಲಿ ಕಾರ್ಯಕ್ರಮ ಪ್ರಸಾರವಾಗದಂತೆ ನಿರ್ಬಂಧನೆ ವಿಧಿಸಬೇಕು ಎಂದು ಕೆಪಿಸಿಸಿ ವಕ್ತಾರ ಚುನಾವಣಾ ಆಯುಕ್ತರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರಿನ ನಗರತ್ಪೇಟೆಯಲ್ಲಿ ಹನುಮಾನ್ ಚಾಲೀಸಾ ಗಲಾಟೆ ಸಂಬಂಧ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆಂದು ಆರೋಪಿಸಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಮುಖ್ಯ ಚುನಾವಣಾಧಿಕಾರಿಗೆ ಕಾಂಗ್ರೆಸ್ ದೂರು ನೀಡಿದೆ. ಹನುಮಾನ್ ಚಾಲೀಸಾ ಬಗ್ಗೆ ಸುಳ್ಳು ಹೇಳಿಕೆ ನೀಡಿ ಧರ್ಮಗಳ ನಡುವೆ ಶಾಂತಿ ಕದಡಲು ಯತ್ನಿಸಿದ್ದಾರೆ ಅಂತ ದೂರು ನೀಡಲಾಗಿದೆ.
ಮೋದಿ ಮೋದಿ ಎನ್ನುವಂತ ಯುವಕರ ಕಪಾಳಕ್ಕೆ ಹೊಡೆಯಿರಿ ಎಂಬುದಾಗಿ ಹೇಳಿಕೆ ನೀಡಿದ ಸಚಿವ ಶಿವರಾಜ ತಂಗಡಗಿ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್, ವಿಧಾನ ಪರಿಷತ್ ಸದಸ್ಯ ಡಿ.ಎಸ್ ಅರುಣ್, ರಾಜ್ಯ ವಕ್ತಾರ ವೆಂಕಟೇಶ್ ದೊಡ್ಡೇರಿ, ರಾಜ್ಯ ಸಂಚಾಲಕ ವಸಂತ್ ಕುಮಾರ್ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಇಂತಹ ಹೇಳಿಕೆಗಳಿಂದ ಯುವ ಮತದಾರರು ಆಂತಕಕ್ಕೆ ಒಳಗಾಗುವ ಸಾಧ್ಯತೆ ಇರುತ್ತದೆ ಮತ್ತು ಮತದಾನದಿಂದ ದೂರ ಉಳಿಯುವ ಸಂಭವವು ಹೆಚ್ಚಿರುತ್ತದೆ. ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಆಗಿರುತ್ತದೆ ಎಂದು ಆರೋಪಿಸಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?