ಮೈಸೂರು : ಸದಾನಂದ್ ಅವರು ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಬೆನ್ನಿಗೆ ನಿಂತಿದ್ದರು. ಈ ಹಿನ್ನೆಲೆಯಲ್ಲಿ ಸದಾನಂದ ಅವರನ್ನು ಪಕ್ಷಕ್ಕೆ ಸೆಳೆಯುವಲ್ಲಿ ಸಿಎಂ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ. ಸದಾನಂದ ಅವರು ವೀರಶೈವ ಸಮುದಾಯದ ಮುಖಂಡರಾಗಿದ್ದು, ವೀರಶೈವ ಮತಗಳನ್ನುಕ್ರೂಢಿಕರಣಕ್ಕೆ ತಂತ್ರ ರೂಪಿಸಿದ್ದಾರಂತೆ.
ಎಚ್ವಿ ರಾಜೀವ್ ಹಾಗು ಸದಾನಂದ ಅವರೊಂದಿಗೆ ಮಾಜಿ ಮೇಯರ್ ಎಲ್.ಬೈರಪ್ಪ, ಪಾಲಿಕೆ ಮಾಜಿ ಸದಸ್ಯರುಗಳು ಕೂಡ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಲಿದ್ದಾರಂತೆ. ಮುಡಾ ಮಾಜಿ ಅಧ್ಯಕ್ಷ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತ ಎಚ್.ವಿ ರಾಜೀವ್ ನಾಳೆ ಕೆ.ಆರ್ ಕ್ಷೇತ್ರದಲ್ಲಿ ನಡೆಯೋ ಬೃಹತ್ ಸಮಾವೇಶದಲ್ಲಿ ಸಿಎಂ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆ ಆಗಲಿದ್ದಾರಂತೆ.
ಇನ್ನು, ಎಚ್.ವಿ ರಾಜೀವ್ ಕಾಂಗ್ರೆಸ್ ಸೇರ್ಪಡೆಯಾಗುವ ಕುರಿತಂತೆ ನಾಳೆ ನಡೆಯಲಿರುವ ಕಾರ್ಯಕ್ರಮದ ಫ್ಲೆಕ್ಸ್ಗಳಲ್ಲಿ ಮಾಜಿ ಸಚಿವ ಎಸ್.ಟಿ.ಸೋಮಶೇಖರ್ ಅವರ ಫೋಟೋ ರಾರಾಜಿಸುತ್ತಿದ್ದು, ಇದರೊಂದಿಗೆ ಸೋಮಶೇಖರ್ ಅವರು ಮತ್ತೆ ಮರಳಿ ಕಾಂಗ್ರೆಸ್ ಸೇರ್ತಾರಾ ಅಂತ ಕಾದು ನೋಡಬೇಕಿದೆ.
ಬ್ರಾಹ್ಮಣ ಸಮುದಾಯಕ್ಕೆ ಸೇರಿರುವ ಎಚ್.ವಿ ರಾಜೀವ್ ಅವರ ಕ್ಷೇತ್ರವಾಗಿರುವ ಕೆ.ಆರ್ ಕ್ಷೇತ್ರ ಅವರು ಕಳೆದೆರೆಡು ಚುನಾವಣೆಯಲ್ಲಿ ಬಿಜೆಪಿಗೆ 70 ಸಾವಿರಕ್ಕೂ ಅಧಿಕ ಲೀಡ್ ಲಭ್ಯವಾಗಿತ್ತು. ಬ್ರಾಹ್ಮಣ ಸಮುದಾಯದ 50 ಸಾವಿರಕ್ಕೂ ಹೆಚ್ಚು ಮತಗಳನ್ನ ಕೆ.ಆರ್ ಕ್ಷೇತ್ರದಲ್ಲಿದೆ. ಈ ಹಿನ್ನೆಲೆಯಲ್ಲಿ ರಾಜೀವ್ ಅವರು ನಾಳೆ ಶಕ್ತಿ ಪ್ರದರ್ಶನ ಮಾಡಲಿದ್ದಾರೆ ಎನ್ನಲಾಗಿದೆ.
ಯದುವೀರ್ ಮಣಿಸಲು ಸಿಎಂ ಸಿದ್ದರಾಮಯ್ಯ ಅವರು ಸ್ಥಳೀಯರ ಮುಖಂಡರ ಸಭೆ ನಡೆಸಿದ್ದರು. ಇದರ ನಡುವೆಯೇ ಡಿಸಿಎಂ ಅವರು ಕೂಡ ಮೈಸೂರಿಗೆ ಎಂಟ್ರಿ ಕೊಡುವುದು ಖಚಿತವಾಗಿದೆ. ನಾಳೆ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾಗಲಿದ್ದಾರೆ.
ಅಲ್ಲದೇ ಒಕ್ಕಲಿಗ + ಅಹಿಂದ ಅಸ್ತ್ರವನ್ನ ಪ್ರಬಲವಾಗಿ ಪ್ರಯೋಗ ಮಾಡಲು ಸಿಎಂ ಮುಂದಾಗಿದ್ದಾರಂತೆ. ಇದರ ಜೊತೆ ಬ್ರಾಹ್ಮಣ ಮತ್ತು ಲಿಂಗಾಯತ ಮತಗಳಿಗೆ ಸ್ಥಳೀಯ ಮುಖಂಡರಿಗೆ ಗಾಳ ಹಾಕಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?