ಟಾಪ್ ನ್ಯೂಸ್
ಪತಂಜಲಿ ಆಯುರ್ವೇದ ಸಂಸ್ಥೆಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ

ತಪ್ಪು ಜಾಹಿರಾತುಗಳನ್ನು ನೀಡುವ ಮೂಲಕ ಗ್ರಾಹಕರ ದಾರಿ ತಪ್ಪಿಸುತ್ತಿರುವ ಪ್ರಕರಣದಲ್ಲಿ ಪತಂಜಲಿ ಆಯುರ್ವೇದ ಸಂಸ್ಥೆ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ತಪ್ಪಾದ ಜಾಹಿರಾತನ್ನು ಪ್ರಚಾರ ಮಾಡುವ ಮೂಲಕ ಇಡೀ ದೇಶವನ್ನೇ ದಾರಿ ತಪ್ಪಿಸುವ ಕೆಲಸ ಮಾಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಕಂಪನಿ ವಿರುದ್ಧ ಹರಿಹಾಯ್ದಿದೆ.
ಪತಂಜಲಿ ಆಯುರ್ವೇದ ಸಂಸ್ಥೆಯ ವಿರುದ್ಧ ಭಾರತೀಯ ವೈದ್ಯಕೀಯ ಮಂಡಳಿ ದಾರಿ ತಪ್ಪಿಸುವ ಜಾಹಿರಾತು ನೀಡುವ ವಿರುದ್ಧ ಸುಪ್ರೀಂ ಕೋರ್ಟ್ ದಾವೆ ಹೂಡಿತ್ತು. ಮಂಗಳವಾರ ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಪತಂಜಲಿ ಆಯುರ್ವೇದ ಸಂಸ್ಥೆ ಮತ್ತು ಆಚಾರ್ಯ ಬಾಲಕೃಷ್ಣಗೆ ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ನೋಟಿಸ್ ಉತ್ತರಿಸಲು ಮೂರು ವಾರಗಳ ಸಮಯಾವಕಾಶ ನೀಡಲಾಗಿದೆ.
ಸುಪ್ರೀಂ ಕೋರ್ಟ್ ಹೇಳಿದ್ದೇನು..?
ದಾರಿ ತಪ್ಪಿಸುವ ಜಾಹಿರಾತುಗಳನ್ನು ನೀಡದಂತೆ ಪತಂಜಲಿ ಆಯುರ್ವೇದ ಸಂಸ್ಥೆಗೆ ಕಳೆದ ವರ್ಷ ಸುಪ್ರೀಂ ಕೋರ್ಟ್ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿ ಪತಂಜಲಿ ಸಂಸ್ಥೆ ಜಾಹಿರಾತುಗಳನ್ನು ನೀಡುತ್ತಿರುವುದಕ್ಕೆ ನ್ಯಾಯಮೂರ್ತಿಗಳ ಹಿಮಾ ಕೊಹ್ಲಿ ಮತ್ತು ಎ.ಅಮಾನುಲ್ಲಾ ಅವರಿದ್ದ ದ್ವಿಸದಸ್ಯ ಪೀಠ ಖಂಡಿಸಿದೆ.
ನವೆಂಬರ್ 2023ರಲ್ಲಿ ಪತಂಜಲಿ ಸಂಸ್ಥೆ ಕೆಲವು ಕಾಯಿಲೆಗಳನ್ನು ಗುಣಪಡಿಸುವ ಕುರಿತು ತಪ್ಪು ಜಾಹಿರಾತುಗಳನ್ನು ನೀಡಿದರೆ 1ಕೋಟಿ ರೂಪಾಯಿ ದಂಡ ವಿಧಿಸುವ ಎಚ್ಚರಿಕೆ ನೀಡಿತ್ತು. ತನ್ನ ಹಿಂದಿನ ಆದೇಶಗಳನ್ನು ಉಲ್ಲಂಘಿಸಿದ ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ, ‘‘ನಾವು ಎಚ್ಚರಿಕೆ ನೀಡಿದ ಬಳಿಕವೂ ರಾಸಾಯನಿಕ ಆಧಾರಿತ ಔಷಧಿಗಳಿಗಿಂತಾ ನಮ್ಮ ಔಷಧಗಳು ಉತ್ತಮ ಎಂದು ಹೇಗೆ ಹೇಳುತ್ತೀರಿ’’, ಎಂದು ಪ್ರಶ್ನಿಸಿದೆ.

You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?