Featured
ಕೊರೊನಾದಿಂದ ಮತ್ತೆ ಐವರು ನಿಧನ : ಸಾವಿನ ಸಂಖ್ಯೆ 43 ಕ್ಕೆ ಏರಿಕೆ

ರೈಸಿಂಗ್ ಕನ್ನಡ :
ಕಲಬುರಗಿ :
ಕೊರೊನಾ ಸೋಂಕಿನಿಂದ ಕಲಬುರಗಿ ಜಿಲ್ಲೆಯ 4 ಮತ್ತು ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ವೃದ್ಧೆಯೊಬ್ಬಳು ಸೇರಿದಂತೆ ಐದು ಮಂದಿ ಮೃತಪಟ್ಟಿದ್ದಾರೆ. ಇದರಿಂದ ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಮೃತರಾದವರ ಸಂಖ್ಯೆ 43ಕ್ಕೆ ಏರಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದರು.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಲೀವರ್ ಸೋಂಕಿನಿಂದ (Hepatitis) ಬಳಲುತ್ತಿದ್ದ ಕಲಬುರಗಿಯ ಖಮರ್ ಕಾಲೋನಿಯ 60 ವರ್ಷದ ವೃದ್ಧ ಜು.12 ರಂದು ಆಸ್ಪತ್ರೆಗೆ ದಾಖಲಾಗಿ ಜು.16 ರಂದು ಹಾಗೂ ಇದೇ ಪ್ರದೇಶದ ತೀವ್ರ ಉಸಿರಾಟ ತೊಂದರೆ ಮತ್ತು ಮಧುಮೇಹದಿಂದ ಬಳಲುತ್ತಿದ್ದ 70 ವರ್ಷದ ವೃದ್ಧ ಜು.14 ರಂದು ಆಸ್ಪತ್ರೆಗೆ ದಾಖಲಾಗಿ ಜು.16 ರಂದು ನಿಧನ ಹೊಂದಿದರು.

ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯೊಂದಿಗೆ ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದ ಬೀದರ ಜಿಲ್ಲೆಯ ಬಸವಕಲ್ಯಾಣ ಪಟ್ಟಣದ 62 ವರ್ಷದ ವೃದ್ಧೆ ಜು.11 ರಂದು ಅಸ್ಪತ್ರೆಗೆ ದಾಖಲಾಗಿ ಜು.13 ರಂದು ಉಸಿರು ನಿಲ್ಲಿಸಿದರು.
ಮತ್ತೊಂದು ಪ್ರಕರಣದಲ್ಲಿ ತೀವ್ರ ಉಸಿರಾಟ ತೊಂದರೆ ಹಿನ್ನೆಲೆ ಜೊತೆಗೆ ಅಸ್ತಮಾದಿಂದ ಬಳಲುತ್ತಿದ್ದ ಕಲಬುರಗಿ ಜಿಲ್ಲೆಯ ಶಹಾಬಾದ ಪಟ್ಟಣದ 50 ವರ್ಷದ ಮಹಿಳೆ ಜು.13 ರಂದು ಅಸ್ಪತ್ರೆಗೆ ದಾಖಲಾಗಿ ಅಂದೇ ನಿಧನ ಹೊಂದಿದ್ದಾರೆ.
ತೀವ್ರ ಉಸಿರಾಟ ತೊಂದರೆ ಹಿನ್ನೆಲೆಯ ಕಲಬುರಗಿಯ ಸಿ.ಐ.ಬಿ. ಕಾಲೋನಿಯ 40 ವರ್ಷದ ಮಹಿಳೆ ಜು.7 ರಂದು ಆಸ್ಪತ್ರೆಗೆ ದಾಖಲಾಗಿ ಜು.13 ರಂದು ನಿಧನ ಹೊಂದಿರುತ್ತಾರೆ ಎಂದು ಡಿ.ಸಿ. ಶರತ್ ಬಿ. ಮಾಹಿತಿ ನೀಡಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?