ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕೊರೊನಾ ಕಡಿಮೆಯಾಗುತ್ತಿದೆ ಎಂದು ನಿಟ್ಟುಸಿರು ಬಿಡುವ ಹೊತ್ತಿಗೆ ಬುಧವಾರದ ಶಾಕ್ ಮತ್ತೆ ಎಚ್ಚರಿಕೆಯನ್ನು ಕೊಟ್ಟಿದೆ. ಬುಧವಾರ ಒಂದೇ ದಿನ ಭಾತದಲ್ಲಿ 64,251 ಹೊಸ ಪಾಸಿಟಿವ್ ಕೇಸ್ಗಳು ಪತ್ತೆಯಾಗಿದೆ. ಭಾರತದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 27,67,274 ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲು ಮಾಹಿತಿ ನೀಡಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 1092 ಮಂದಿ ಕೊರೊನಾಕ್ಕೆ ಬಲಿಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 52,889ಕ್ಕೆ ಏರಿಕೆಯಾಗಿದೆ. 27,67,274 ಮಂದಿ ಸೋಂಕಿತರ ಪೈಕಿ ಒಂದೇ ದಿನ 59,903 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ದೇಶದಲ್ಲಿ ಒಟ್ಟಾರೆ ಗುಣಮುಖರ ಸಂಖ್ಯೆ 20,37,871ಕ್ಕೆ ತಲುಪಿದೆ. ಭಾರತದಲ್ಲಿ ಇನ್ನೂ 6,76,514 ಸಕ್ರಿಯ ಪ್ರಕರಣಗಳು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಹಾರಾಷ್ಟ್ರದಲ್ಲಿ ಬುಧವಾರ ಒಂದೇ ದಿನ 11,119 ಮಂದಿಗೆ ಸೋಂಕು ತಗುಲಿರುವುದಾಗಿ ತಿಳಿದುಬಂದಿದೆ. ಆಂಧ್ರಪ್ರದೇಶದಲ್ಲಿ 9652, ಕರ್ನಾಟಕದಲ್ಲಿ 7665 ಮಂದಿ, ಉತ್ತರಪ್ರದೇಶದಲ್ಲಿ 4218 ಮಂದಿ ಹಾಗೂ ಪಶ್ಚಿಮ ಬಂಗಾಳದಲ್ಲಿ 3175 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ.
ಇನ್ನು ದೇಶದಲ್ಲಿ 24 ಗಂಟೆಗಳಲ್ಲಿ ಬರೋಬ್ಬರಿ ದಾಖಲೆಯ 8,01,518 ಮಂದಿಗೆ ಕೊರೋನಾ ಪರೀಕ್ಷೆ ನಡೆಸಲಾಗಿದ್ದು, ಇದರೊಂದಿಗೆ ಈವರೆಗೂ ಅಂದರೆ ಆಗಸ್ಟ್ 18ರವರೆಗೂ 3,17,42,782 ಸ್ಯಾಂಪಲ್ ಪರೀಕ್ಷೆ ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಮಾಹಿತಿ ನೀಡಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?