ರೈಸಿಂಗ್ ಕನ್ನಡ :
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಮಹಾ ಸ್ಫೋಟ ಆಗಿದೆ. ಒಂದೇ ದಿನ ಬರೋಬ್ಬರಿ 6,128 ಕೊರೊನಾ ಪಾಸಿಟಿವ್ ಕೇಸ್ ದಾಖಲಾಗಿದೆ.
ರಾಜ್ಯ ಆರೊಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಗುರುವಾರ ಸೋಂಕಿತರ ಸಂಖ್ಯೆ 6 ಸಾವಿರ ಗಡಿ ದಾಟಿ ದಾಖಲೆ ಬರೆದಿದೆ. ಕಳೆದ 7 ದಿನಗಳಿಂದ 5 ಸಾವಿರ ಗಡಿ ದಾಟುತ್ತಿತ್ತು. ರಾಜ್ಯದಲ್ಲಿ 6,128 ಹೊಸ ಕೇಸ್ ದಾಖಲಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,18,632ಕ್ಕೆ ಏರಿದೆ. ರಾಜ್ಯದಲ್ಲಿ 69,700 ಪ್ರಕರಣಗಳು ಸಕ್ರಿಯವಾಗಿವೆ.
ರಾಜ್ಯದಲ್ಲಿಂದು 83 ಮಂದಿ ಸಾವನಪ್ಪಿದ್ದಾರೆ.ಕೋವಿಡ್ನಿಂದ ಮೃತಪಟ್ಟವರ ಸಂಖ್ಯೆ 2,280ಕ್ಕೆ ಏರಿದೆ.
ಹೆಮ್ಮಾರಿಯಿಂದ ಚೇತರಿಸಿಕೊಮಡವರ ಸಂಖ್ಯೆ ಕೂಡ ಹೆಚ್ಚಾಗಿದೆ. ಜು.30ರಂದು 3,793 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ 46,694 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಜೋರಾಗಿದೆ. ನಗದರಲ್ಲಿ 2233 ಹೊಸ ಕೇಸ್ ದಾಖಲಾಗಿದೆ.ಒಟ್ಟು ಸೋಂಕಿತರ ಸಂಖ್ಯೆ 53,324ಕ್ಕೆ ಏರಿದೆ.
ನಗರದಲ್ಲಿ 36, 523 ಪ್ರಕರಣಗಳು ಸಕ್ರಿಯವಾಗಿವೆ. ಗುರುವಾರ 22 ಮಂದಿ ಉಸಿರುಬಿಟ್ಟಿದ್ದಾರೆ. ಬೆಂಗಳೂರಿನಲ್ಲಿ ಇದುವರೆಗೂ 1009 ಮಂದಿ ಬಲಿಯಾಗಿದ್ದಾರೆ. ನಗದರಲ್ಲಿ ಕೊರೊನಾದಿಂದ ಚೇತರಿಸಿಕೊಂಡ 1,912 ಮಂದಿ ಬಿಡುಗಡೆಯಾಗಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?