Featured
ರಾಮನಗದರಲ್ಲಿ ಕೊರೊನಾ ಆರ್ಭಟ : ಮಾಗಡಿಯಲ್ಲಿ 9, ರಾಮನಗರದಲ್ಲಿ 3 ಮಂದಿ ಸಾವು
![](https://risingkannada.com/wp-content/uploads/2020/07/ramnagar-2-2.jpeg)
ರೈಸಿಂಗ್ ಕನ್ನಡ :
ರಾಮನಗರ :
ಜಿಲ್ಲೆಯಲ್ಲಿ ಚನ್ನಪಟ್ಟಣ 4, ಕನಕಪುರ 10 ಮತ್ತು ರಾಮನಗರ 27 ಪ್ರಕರಣಗಳು ಸೇರಿ ಇಂದು ಒಟ್ಟು 41 ಕರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇವರನ್ನು ರಾಮನಗರ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ವಿವಿಧ ಕೋವಿಡ್-19 ಆಸ್ಪತ್ರೆಗಳಿಗೆ ದಾಖಲಿಸಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ಅವರು ತಿಳಿಸಿದ್ದಾರೆ.
ಒಟ್ಟು ಪ್ರಕರಣ: ಇದುವರೆಗೆ ಜಿಲ್ಲೆಯಲ್ಲಿ 666 ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಚನ್ನಪಟ್ಟಣ 147, ಕನಕಪುರ 134, ಮಾಗಡಿ 182 ಮತ್ತು ರಾಮನಗರ 203 ಪ್ರಕರಣಗಳು ಸೇರಿವೆ.
ಗುಣಮುಖ : ಇಂದು ಜಿಲ್ಲೆಯಲ್ಲಿ 19 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 4, ಕನಕಪುರ 2, ಮಾಗಡಿ 4 ಮತ್ತು ರಾಮನಗರ 9 ಜನರು ಸೇರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 329 ಜನರು ಗುಣಮುಖರಾಗಿದ್ದಾರೆ. ಈ ಪೈಕಿ ಚನ್ನಪಟ್ಟಣ 51, ಕನಕಪುರ 94, ಮಾಗಡಿ 98 ಮತ್ತು ರಾಮನಗರ 86 ಜನರು ಸೇರಿದ್ದಾರೆ.
ಸಕ್ರಿಯ ಪ್ರಕರಣ: ಜಿಲ್ಲೆಯಲ್ಲಿ ದಾಖಲಾಗಿರುವ 666 ಪ್ರಕರಣಗಳ ಪೈಕಿ 329 ಜನರು ಗುಣಮುಖರಾಗಿದ್ದಾರೆ, ಇನ್ನೂ 324 ಜನರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಪೈಕಿ ಚನ್ನಪಟ್ಟಣ 96, ಕನಕಪುರ 39, ಮಾಗಡಿ 75 ಮತ್ತು ರಾಮನಗರ 114 ಪ್ರಕರಣಗಳು ಸೇರಿವೆ.
ಸಾವು : ಕನಕಪುರ ತಾಲ್ಲೂಕಿನಲ್ಲಿ ಒಬ್ಬರು, ಮಾಗಡಿ ತಾಲ್ಲೂಕಿನಲ್ಲಿ 9 ಜನ ಹಾಗೂ ರಾಮನಗರ ತಾಲ್ಲೂಕಿನಲ್ಲಿ 3 ಜನ ಸಾವನ್ನಪ್ಪಿದ್ದಾರೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 13 ಮಂದಿ ನಿಧನರಾಗಿದ್ದಾರೆ.
ಜಿಲ್ಲಾ ಆರೋಗ್ಯ ಇಲಾಖೆ ವರದಿ: ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ಶನಿವಾರ (ಜುಲೈ 25) ವರದಿಯಲ್ಲಿ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 14645 (ಹೊಸದಾಗಿ ಇಂದಿನ 180 ಸೇರಿ). ಒಟ್ಟು 6087 ಜನ 14 ದಿನಗಳ ನಿಗಾ ಅವಧಿ ಪೂರೈಸಿದ್ದಾರೆ. 174 ಜನರು ಇಂದು ಹೋಂ ಕ್ವಾರಂಟೈನ್ ಅವಧಿಯನ್ನು ಪೂರೈಸಿದ್ದು, ಇವರ ಒಟ್ಟಾರೆ ಸಂಖ್ಯೆ 4236ಗೆ ಏರಿಕೆಯಾಗಿದೆ.
ಜ್ವರ ತಪಾಸಣೆ: ಜ್ವರ ತಪಾಸಣಾ ಕೇಂದ್ರದಲ್ಲಿ ಇಂದು 8 ಜನರು ತಪಾಸಣೆಗೆ ಒಳಗಾಗಿದ್ದಾರೆ, ಒಟ್ಟಾರೆಯಾಗಿ 3923 ಮಂದಿ ತಪಾಸಣೆಗೆ ಮಾಡಿಸಿಕೊಂಡಿದ್ದಾರೆ.
ಕ್ವಾರಂಟೈನ್: ಒಟ್ಟು 9 ಜನರು ಸೌಲಭ್ಯದೊಂದಿಗೆ ಆಸ್ಪತ್ರೆಯಲ್ಲಿ ಪ್ರತ್ಯೇಕವಾಗಿ ನಿಗಾದಲ್ಲಿದ್ದಾರೆ. ಇನ್ಸಟ್ಯೂಷನಲ್ ಕ್ವಾರಂಟೈನ್ ಗೆ ಇಂದು 4 ಜನರು ಸೇರಿದ್ದಾರೆ. ಒಟ್ಟಾರೆ ಇನ್ಸ್ಟ್ಯೂಷನಲ್ ಕ್ವಾರೆಂಟೈನ್ ಸಂಖ್ಯೆ 158ಕ್ಕೆ ಏರಿಕೆಯಾಗಿದೆ.
![](https://risingkannada.com/wp-content/uploads/2020/07/rising-kannada-add-34-1.png)
ಮಾದರಿ ಸಂಗ್ರಹ: ಇಂದು ಹೊಸದಾಗಿ 180 ಮಾದರಿಗಳನ್ನು ಸೋಂಕಿನ ಪರೀಕ್ಷೆಗಾಗಿ ಸಂಗ್ರಹಿಸಲಾಗಿದೆ. ಇದುವರೆಗೆ ಒಟ್ಟು 15200 ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಒಟ್ಟು 13185 ಪರೀಕ್ಷಾ ವರದಿಯ ಫಲಿತಾಂಶ ನಕಾರಾತ್ಮಕವಾಗಿರುತ್ತದೆ. ಇಂದಿನ 180 ಬಾಕಿ ವರದಿ ಸೇರಿ ಒಟ್ಟು 1088 ಪ್ರಕರಣಗಳ ವರದಿಯನ್ನು ನಿರೀಕ್ಷಿಸಲಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?