Featured
ತಿಮ್ಮಪ್ಪನ ಸನ್ನಿಧಿಯಲ್ಲಿ ಕೊರೊನಾ ರಣಕೇಕೆ : 743 ಸಿಬ್ಬಂದಿಗಳಿಗೆ ಕೊರೊನಾ ಸೋಂಕು

ರೈಸಿಂಗ್ ಕನ್ನಡ :
ನ್ಯೂಸ್ ಡೆಸ್ಕ್:
ಪ್ರಸಿದ್ಧ ಪೊಣ್ಯ ಕ್ಷೇತ್ರ ವೆಂಕಟೇಶ್ವರನ ದೇಗುಲದಲ್ಲಿ ಕೆಲೆವು ದಿನಗಳ ಹಿಂದೆಯಷ್ಟೆ ಮಾಜಿ ಪ್ರಧಾನ ಅರ್ಚಕರು ಕೋವಿಡ್ನಿಂದಾಗಿ ಸಾವನಪ್ಪಿದ ಬೆನ್ನಲ್ಲೆ ಇದೀಗ ದೇವಸ್ಥಾನದ 743 ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ತಿರುಪತಿ ತಿರುಮಲ ದೇವಸ್ಥಾನದಲ್ಲಿ (ಟಿಟಿಡಿ)ಯಲ್ಲಿ ಸೋಂಕು ಹರಡುತ್ತಿರುವ ಕುರಿತು ಅಲ್ಲಿನ ಸಿಬ್ಬಂದಿಗಳು ಆತಂಕ ವ್ಯಕ್ತಪಡಿಸಿದ್ದರು.

ಜೂ.11ರ ಬಳಿಕ ದೇವಾಲಯವನ್ನ ತೆರೆದ ನಂತರ 743 ಮಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇವರಲ್ಲಿ 402 ಮಂದಿ ಚಿಕಿತ್ಸೆ ಪಡೆದ ನಂತರ ಚೇತರಿಸಿಕೊಂಡು ಮತ್ತೆ ಕೆಲಸ್ಕೆ ಮರಳಿದ್ದಾರೆ. 338 ಮಂದಿ ಮಂದಿ ಚಿಕತ್ಸೆ ಪಡೆಯುತ್ತಿದ್ದಾರೆ.
ಕೊರೊನಾಗೆ ಟಿಟಿಡಿಯಲ್ಲಿ ಇದುವರೆಗೂ ಮೂವರು ಬಲಿಯಾಗಿದ್ದಾರೆ. ನಮ್ಮ ಉದ್ಯೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡುತ್ತಿದ್ದೇವೆ.
ಭಕ್ತರ ಕೋರಿಕೆಯಂತೆ ದೇವಸ್ಥಾನವನ್ನ ತೆರೆದಿದ್ದೇವೆ ಎಂದು ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಮಾಹಿತಿ ನೀಡಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?