Featured
ರಾಜ್ಯದಲ್ಲಿ ಮುಂದುವರೆದ ಕೊರೊನಾ ಅಟ್ಟಹಾಸ: 5,503 ಕೇಸ್- 92 ಬಲಿ- ಬೆಂಗಳೂರಿನಲ್ಲಿ 50 ಸಾವಿರ ಗಡಿ ದಾಟಿದ ಸೋಂಕಿತರ ಸಂಖ್ಯೆ

ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಬುಧವಾರ 5,503 ಸೋಂಕಿತರು ಸೋಂಕಿತರು ಪತ್ತೆಯಾಗಿದ್ದಾರೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ರಾಜ್ಯಾದ್ಯಂತ 5,503 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1,12,504ಕ್ಕೆ ಏರಿದೆ. ರಾಜ್ಯದಲ್ಲಿ 67,448 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ ಸಾವಿನ ಪ್ರಮಾಣ ಹೆಚ್ಚಾಗಿದ್ದು 92 ಮಂದಿ ಸಾವನಪ್ಪಿದ್ದಾರೆ. ಕೊರೊನಾಗೆ ಮೃತಪಟ್ಟವರ ಒಟ್ಟು ಸಂಖ್ಯೆ 2,147ಕ್ಕೆ ಏರಿದೆ. ಕೊರೊನಾದಿಂದ ಚೇತರಿಸಿಕೊಂಡವರ ಹೆಚ್ಚಾಗಿದೆ ಒಂದೇ ದಿನದಲ್ಲಿ 2397 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 42,901ಕ್ಕೆ ಏರಿದೆ.

ಬೆಂಗಳೂರಿನಲ್ಲಿ 50 ಸಾವರ ಗಡಿ ದಾಟಿದ ಸೋಂಕಿತರ ಸಂಖ್ಯೆ
ಬುಧವಾರ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಸದ್ದು ಮಾಡಿದೆ. ನಗರದಲ್ಲಿ 2,270 ಕೊರೊನಾ ಪ್ರಕರಣಗಳು ದಾಖಲಾಗಿವೆ.ಸೋಂಕಿತರ ಸಂಖ್ಯೆ 50 ಸಾವಿರ ಗಡಿ ದಾಟಿದೆ. ಒಟ್ಟು ಸೋಂಕಿತರ ಸಂಖ್ಯೆ 51,091 ಕ್ಕೇ ಏರಿದೆ. ಮಹಾಮಾರಿಗೆ ನಗರದಲ್ಲಿ 30 ಮಂದಿ ಉಸಿರು ಬಿಟ್ಟಿದ್ದಾರೆ. ನಗರದಲ್ಲಿ ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 987ಕ್ಕೆ ಏರಿಕೆಯಾಗಿದೆ.
ಕೊರೊನಾದಿಂದ ಚೇತರಿಸಿಕೊಂಡ 1,118 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು ಬಿಡುಗಡೆಯಾದವರ ಸಂಖ್ಯೆ 13,879ಕ್ಕೆ ಏರಿಕೆಯಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?