Featured
ಕೊರೊನಾ ಹಾಟ್ಸ್ಪಾಟ್ ಆಗ್ತಿದೆ ಬೀದರ್: 15 ದಿನಗಳ ಕಾಲ ರಾಜ್ಯ ಲಾಕ್ಡೌನ್ಗೆ ಜನಪ್ರತಿನಿಧಿಗಳ ಒತ್ತಾಯ

ರೈಸಿಂಗ್ ಕನ್ನಡ:
ಬೀದರ್:
ಬೀದರ್ನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದ್ದು ಹಾಟ್ ಸ್ಪಾಟ್ ಕೇಂದ್ರವಾಗುತ್ತಿದೆ. ರಾಜ್ಯದಲ್ಲಿ ಇನ್ನು 15 ದಿನಗಳಕಾಲ ಲಾಕ್ ಡೌನ ಘೋಷಣೆ ಮಾಡ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಮಹಾರಾಷ್ಟ್ರ ಹಾಗೂ ತೆಲಂಗಾಣ ರಾಜ್ಯಗಳ ಸಂಪರ್ಕ ಕೇಂದ್ರವಾಗಿರುವ ಬೀದರ್ ಜಿಲ್ಲೆಯಲ್ಲಿ ಕೋರೊನಾ ಸೊಂಕಿತರ ಸಂಖ್ಯೆ ಸಾವಿರಕ್ಕೆ ಏರಿಕೆಯಾಗಿದೆ.ಅಷ್ಟೆ ಅಲ್ಲಾ ಸಾವಿನ ಸಂಖ್ಯೆಯಲ್ಲೂ ಅರ್ಧಶತಕ ಬಾರಿಸಿದೆ.

ದಿನೇ ದಿನೇ ಇನ್ನೂ ಹೆಚ್ಚಿನ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುತ್ತಿವೆ.ಹೀಗಾಗಿ ಜನರ ಹಿತ ದೃಷ್ಠಿಯಿಂದ ರಾಜ್ಯದಲ್ಲಿ ಮತ್ತೆ 15 ದಿನ ಲಾಕ್ ಡೌನ್ ಘೋಷಣೆ ಮಾಡಿದರೆ ಸ್ವಲ್ಪವಾದರೂ ಕೊರೊನಾ ನಿಯಂತ್ರಣ ಬರುವ ಸಾದ್ಯತೆ ಇದೆ ಎಂದು ಕೆಪಿಸಿಸಿ ಕಾರ್ಯಾದ್ಯಕ್ಷ ಈಶ್ವರ್ ಖಂಡ್ರೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ.
ಇತ್ತ ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹಾಣ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು ಜಿಲ್ಲೆಯ ಜನತೆಯ ಹಿತ ಕಾಪಾಡಲು ನಾವು ಪಕ್ಷ ಭೇದ ಮರೆತು ಒಗ್ಗಟ್ಟಾಗಿ ನಡೆಯುತ್ತಿದ್ದೇವೆ. ಬೀದರ್ ಜನತೆಯ ಹಿತದೃಷ್ಟಿಯಿಂದ ಜಿಲ್ಲೆ ಲಾಕ್ ಡೌನ್ ಮಾಡಲು ಮುಖ್ಯಮಂತ್ರಿಗಳಿಗೆ ಈಗಾಗಲೆ ಮನವಿ ಮಾಡಲಾಗಿದೆ ಎಂದಿದ್ದಾರೆ.
ಒಟ್ಟಿನಲ್ಲಿ ರಾಜ್ಯದ ಹಲವು ಜಿಲ್ಲೆಗಳಂತೆ ಬೀದರ್ ಜಿಲ್ಲೆಯೂ ಸಂಪೂರ್ಣ ಲಾಕ್ ಡೌನ್ ಆಗುತ್ತಾ ಅನ್ನೋದನ್ನ ಕಾದು ನೋಡಬೇಕಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?