Featured
ಮಹಾಮಾರಿ ಕೊರೊನಾ ಹೆಚ್ಚಳ ಹಿನ್ನೆಲೆ: ಮಾಗಡಿಯಲ್ಲಿ ಸ್ವಯಂ ಲಾಕ್ಡೌನ್ಗೆ ನಿರ್ಧಾರ

ರೈಸಿಂಗ್ ಕನ್ನಡ:
ರಾಮನಗರ :
ಕೆಂಪೇಗೌಡ ನಗರ ಮಾಗಡಿ ಕ್ಷೇತ್ರ ಸೋಮವಾರದಿಂದಲೇ ಸಂಪೂರ್ಣ ಲಾಕ್ ಡೌನ್ ಆಗಲಿದೆ. ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಸ್ವಯಂ ಘೋಷಿತ ಲಾಕ್ಡೌನ್ಗೆ ಮಾಗಡಿ ಕ್ಷೇತ್ರದ ಜನರು ಮುಂದಾಗಿದ್ದಾರೆ. ಕ್ಷೇತ್ರದ ಶಾಸಕ ಎ.ಮಂಜುನಾಥ್ ನೇತೃತ್ವದಲ್ಲಿ ಪಕ್ಷಾತೀತ ಸಭೆ ನಡೆಸಿದ ಬಳಿದ ಸ್ವಯಂ ಘೋಷಿತ ಬಂದ್ ಆಚರಿಸಲು ಮುಂದಾಗಿದ್ದಾರೆ.
ಮಾಗಡಿ ಕ್ಷೇತ್ರದಲ್ಲಿ ಹೆಚ್ಚಿದ ಕೊರೊನಾ
ಸೋಮವಾರದಿಂದ ರಾಮನಗರ ಜಿಲ್ಲೆ ಮಾಗಡಿ ಕ್ಷೇತ್ರ ಸಂಪೂರ್ಣ ಲಾಕ್ ಡೌನ್ ಆಗಿದೆ. ದಿನೇ ದಿನ ಮಾಗಡಿ ಕ್ಷೇತ್ರದಲ್ಲಿ ಕೊರೊನಾ ಪಾಸಿಟಿವ್ ಕೇಸ್ಗಳು ಹೆಚ್ಚಳ ಹಿನ್ನೆಲೆಯಲ್ಲಿ ಸೋಮವಾರದಿಂದ ಜುಲೈ 23 ರವರೆಗೆ ಸ್ವಯಂ ಲಾಕ್ ಡೌನ್ಗೆ ನಿರ್ಧಾರ ಮಾಡಲಾಗಿದೆ. ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಎ.ಮಂಜು ನೇತೃತ್ವದಲ್ಲಿ ಸಭೆ ನಡೆಸಿ ಈ ನಿರ್ಧಾರಕ್ಕೆ ಬರಲಾಗಿದೆ.
ಸಭೆಯಲ್ಲಿ ಅಂಗಡಿ ವರ್ತಕರ ಸಂಘದವರು, ಸಣ್ಣ ವ್ಯಾಪಾರಿಗಳ ಸಂಘದವರು, ಕಾಂಗ್ರೆಸ್, ಬಿಜೆಪಿ ಮುಖಂಡರು ಸೇರಿ ಸಭೆಯಲ್ಲಿ ಭಾಗಿಯಾಗಿದ್ದರು
ಈವರೆಗೂ ಮಾಗಡಿಯಲ್ಲಿ 127 ಕೇಸ್ಗಳು ಪತ್ತೆ ಯಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ಈ ಕಾರಣ ಕೊರೊನಾ ತಡೆಗಟ್ಟುವಲ್ಲಿ ಈ ನಿರ್ಧಾರ ಮಾಡಲಾಗಿದೆ. ಬೆಳಗ್ಗೆ 7 ರಿಂದ 11 ರವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ನೀಡಿ ನಂತ್ರ ಸಂಪೂರ್ಣ ಲಾಕ್ ಡೌನ್ ಮಾಡಲಾಗುವುದು ಎಂದು ಶಾಸಕ ಎ.ಮಂಜುನಾಥ್ ತಿಳಿಸಿದ್ದಾರೆ.
ಒಟ್ಟಾರೆ ಸ್ವಯಂ ಘೋಷಿತ ಲಾಕ್ ಡೌನ್ ಗೆ ಮಾಗಡಿ ಕ್ಷೇತ್ರದ ಜನತೆ ನಿರ್ಧಾರಕ್ಕೆ ಎಲ್ಲೆಡೆ ಶ್ಲಾಘನೆ ವ್ಯಕ್ತವಾಗಿದೆ. ಇದೇ ರೀತಿಯಲ್ಲಿ ಇತರೆ ಕ್ಷೇತ್ರ ಗಳು ನಡೆಸಿದ್ರೆ ಕೊರೊನಾ ತಡೆಗಟ್ಟಲು ಸಾಧ್ಯ.
You may like
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?
ಸಿಎಂ ಬೊಮ್ಮಾಯಿ ಸೇರಿ ಸಂಪುಟದ ಐವರಿಗೆ ಕೊರೋನಾ ಶಾಕ್..!
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್
3 ತಿಂಗಳ ಬಳಿಕ ರಾಜ್ಯದಲ್ಲಿ ಕೊರೋನಾ ಭಾರೀ ಏರಿಕೆ : ಇದೇನಾ 3ನೇ ಅಲೆ.?
ದಾವಣಗೆರೆ ಕೆಎಸ್ಆರ್ಟಿಸಿ ಸಿಬ್ಬಂದಿಗಳಿಗೆ ಉಚಿತ ಮಾಸ್ಕ್ ವಿತರಣೆ