ರೈಸಿಂಗ್ ಕನ್ನಡ :
ಕೆ.ಆರ್. ಬಾಬು, ತುಮಕೂರು :
ಬೆಂಗಳೂರಿನಿಂದ ಬಂದವರನ್ನು ಸೇರಿಸಿಕೊಳ್ಳಬೇಡಿ. ಬೆಂಗಳೂರಿನಿಂದ ಬಂದು ಮಾಹಿತಿ ನೀಡದಿದ್ದರೆ ಅಂತಹವರ ಮೇಲೆ ಶಿಸ್ತು ಕ್ರಮಕೈಗೊಳ್ಳಲಾಗುವುದು ಎಂದು ತುಮಕೂರಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
ಕಂಟೈನ್ಮೆಂಟ್ ಝೋನ್ ಗಳನ್ನು ತುಂಬಾ ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದೇವೆ. ಈ ಬಗ್ಗೆ ಸ್ಥಳೀಯರಿಗೆ ಸರಿಯಾದ ರೀತಿಯಲ್ಲಿ ಮಾಹಿತಿ ನೀಡಿ ನಂತರ ಏರಿಯಾ ಸೀಲ್ ಡೌನ್ ಮಾಡ್ತೀವಿ. ನಮಗೆ ತುಂಬಾ ತೊಂದರೆಯಾಗಿರೋದು ಬೆಂಗಳೂರಿನಿಂದ ಬಂದವರಿಂದ, ಅವರನ್ನು ಹಳ್ಳಿಗಳಿಗೆ ಬಿಟ್ಟುಕೊಳ್ಳದಿದ್ದರೆ, ಹಳ್ಳಿಗಳಲ್ಲಿ ಕೊರೊನಾ ಕೇಸ್ ಇರುತ್ತಿರಲಿಲ್ಲ. ಬಂದವರನೆಲ್ಲಾ ಸೇರಿಸಿಕೊಂಡು ನಮಗೆ ಮಾಹಿತಿ ನೀಡಲಿಲ್ಲ. ಪಾಸಿಟಿವ್ ಬಂದಾಗ ಊರಿಗೆ ಊರೇ ಸೀಲ್ ಡೌನ್ ಮಾಡಿದೆವು. ಬೆಂಗಳೂರಿನಿಂದ ಬಂದರೆ ಮಾಹಿತಿ ನೀಡಿ ಅಂತ ಪ್ರಚಾರ ಮಾಡ್ತಿದ್ದೀವಿ.
ಟೆಸ್ಟ್ ಮಾಡಿ 48 ಗಂಟೆ ಒಳಗೆ ರಿಸಲ್ಟ್ ಕೊಡುತ್ತಿದ್ದೇವೆ. ಅಲ್ಲಿವರೆಗೂ ಬೆಂಗಳೂರಿನಿಂದ ಬಂದವರು ಯಾರ ಸಂಪರ್ಕಕ್ಕೆ ಬರಬಾರದು. ಊರಿನ ಹೊರಗೆ ಅಥವಾ ಬೇರೆ ಎಲ್ಲಿಯಾದರೂ ಇರಬೇಕು. ಟೆಸ್ಟ್ ನೆಗೆಟಿವ್ ಬಂದ್ರೆ ಮನೆಗೆ ಹೋಗಲಿ , ಪಾಸಿಟಿವ್ ಬಂದ್ರೆ ಆಸ್ಪತ್ರೆಗೆ ದಾಖಲಿಸುತ್ತೇವೆ. ಈ ವೇಳೆ ಅವರು ಎಲ್ಲಾ ಕಾನೂನು ಮುರಿದ್ದಿದ್ದರೆ ಎಫ್.ಐ.ಆರ್ ದಾಖಲಿಸಲು ಅವಕಾಶವಿದೆ. ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದರು.
ಕಂಟೈನ್ಮೆಂಟ್ ಝೋನ್ ಗಳಿಂದ ಸುಖಾ ಸುಮ್ಮನೆ ಹೊರಗೆ ಬಂದು ಅತಿಯಾಗಿ ವರ್ತಿಸಿದರೆ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ. ನಿಮ್ಮ ಯಾವುದೋ ಚಟಕ್ಕೆ ಅಮಾಯಕರಿಗೆ ಸೋಂಕು ತಗಲಿಸಲು ಆಗಲ್ಲ ಅಂತ ಹೇಳಿದ್ದೀವಿ. ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಅವಕಾಶವಿದೆ. ತುಮಕೂರು ಎಸ್ಪಿ ಕಚೇರಿಯಲ್ಲಿ ಪಿಪಿಇ ಕಿಟ್ ವಿತರಿಸೋ ವೇಳೆ ಸಚಿವ ಮಾಧುಸ್ಚಾಮಿ ಎಚ್ಚರಿಕೆ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?