Featured
22 ರಾಜ್ಯಗಳಿಗೆ ಕೋವಿಡ್ ಪರಿಹಾರ ಪ್ಯಾಕೇಜ್- ಕರ್ನಾಟಕಕ್ಕೆ ಸಿಕ್ಕಿದ್ದೇನು..?

ರೈಸಿಂಗ್ ಕನ್ನಡ ನ್ಯೂಸ್ ಡೆಸ್ಕ್:
ಕರ್ನಾಟಕದ ಸೇರಿದಂತೆ 22 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ 890. 32 ಕೋಟಿ ರೂ. ಮೊತ್ತದ ಎರಡನೇ ಹಂತದ ಕೋವಿಡ್-19 ತುರ್ತು ಪರಿಹಾರದ ಪ್ಯಾಕೇಜ್ ನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.
ಪ್ರಧಾನಿ ಮೋದಿ 15 ಸಾವಿರ ಕೋಟಿ ಮೊತ್ತದ ಪ್ಯಾಕೇಜ್ ನ್ನು ಕೊರೊನಾ ನಿರ್ವಹಣೆಗಾಗಿ ಘೋಷಿಸಿದ್ದಾರೆ. ಆರ್-ಟಿ-ಪಿಸಿಆರ್ ಯಂತ್ರೋಪಕರಣಗಳು ಅಳವಡಿಕೆ, ಸಿಬಿ-ನ್ಯಾಟ್ ಯಂತ್ರಗಳು, ಆರ್ ಎನ್ ಎ ಕಿಟ್ಸ್ ಗಳು, ಐಸಿಯು ಹಾಸಿಗೆಗಳ ಅಭಿವೃದ್ಧಿ, ಆಕ್ಸಿಜನ್ ಪೂರಿತ ಬೆಡ್ ಗಳು ಸೇರಿದಂತೆ ಕೋವಿಡ್ -19 ಪರೀಕ್ಷೆಯಲ್ಲಿ ಸಾರ್ವಜನಿಕ ಆರೋಗ್ಯ ಮೂಲಸೌಕರ್ಯವನ್ನು ಸದೃಢಗೊಳಿಸಲು ಎರಡನೇ ಹಂತದ ಆರ್ಥಿಕ ನೆರವನ್ನು ಬಳಸಿಕೊಳ್ಳಬಹುದಾಗಿದೆ.
ಛತ್ತೀಸ್ ಗಢ, ಜಾರ್ಖಾಂಡ್, ಮಧ್ಯಪ್ರದೇಶ, ಒಡಿಶಾ, ರಾಜಸ್ಥಾನ, ತೆಲಂಗಾಣ, ಆಂಧ್ರಪ್ರದೇಶ, ಗೋವಾ, ಗುಜರಾತ್, ಕರ್ನಾಟಕ, ಕೇರಳ, ಪಂಜಾಬ್, ತಮಿಳುನಾಡು, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಸಿಕ್ಕಿಂ, ಮೀಜೋರಾಂ ರಾಜ್ಯಗಳಿಗೆ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.
You may like

ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ

ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!

ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್

ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ

ಕರ್ನಾಟಕದಲ್ಲಿ ಕೆಆರ್ ಕೆ ಸಂಸ್ಥೆಯಿಂದ ಪ್ರಭಾಸ್ ಆದಿಪುರುಷ್ ಬಿಡುಗಡೆ

ಸಿಎಂ ಬಸವರಾಜ್ ಬೊಮ್ಮಾಯಿಗೆ ಕೊರೋನಾ ಪಾಸಿಟಿವ್






















