ರೈಸಿಂಗ್ ಕನ್ನಡ :
ತುಮಕೂರು:
ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾಗೆ ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದ್ದು ಜಿಲ್ಲೆಯ ಜನರ ಆತಂಕಕ್ಕೆ ಕಾರಣವಾಗಿದೆ. ಜು. 13, ಹಾಗೂ ಜು.16 ರಂದು ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದ ಇಬ್ಬರು ಮಹಿಳೆಯರ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 23 ಜನರಿಗೆ ಕೊರೊನಾ ಪಾಸಿಟಿವ್ ವರದಿ ಬಂದಿದ್ದು ಈವೆರೆಗೆ 653 ಜನರು ಸೋಂಕಿಗೆ ತುತ್ತಾಗಿದ್ದಾರೆ.
ತಾಲ್ಲೂನಿನಲ್ಲಿ ಹೊಸ ಸೋಂಕಿತರ ಸಂಖ್ಯೆ
ತುಮಕೂರು 16
ಕುಣಿಗಲ್: 3
ಕೊರಟಗೆರೆ 2
ಚಿಕ್ಕನಾಯಕನಹಳ್ಳಿ 1
ಗುಬ್ಬಿ 1
ಕೊರೊನಾಗೆ ಇಬ್ಬರು ಮಹಿಳೆಯರು ಸಾವು :
ಕೊರೊನಾ ವೈರಸ್ ಇಬ್ಬರು ಮಹಿಳೆಯರು ಬಲಿಯಾಗಿದ್ದು ಜು13, ಹಾಗೂ 16 ರಂದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದ ಇಬ್ಬರು ಮಹಿಳೆಯರ ಪರೀಕ್ಷಾ ವರದಿ ಇಂದು ಬಂದಿದ್ದು ಕೊರೊನಾ ಪಾಸಿಟಿವ್ ಇರುವುದು ದೃಡಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ದಿಂದ ಮೃತಪಟ್ಟವರ ಸಂಖ್ಯೆ 20 ಕ್ಕೇರಿಕೆಯಾಗಿದೆ.
ತುಮಕೂರು ನಗರದ ಜಯನಗರದ 58 ವರ್ಷದ ಮಹಿಳೆ ಉಸಿರಾಟ ಸಮಸ್ಯೆಯಿಂದ ಜಿಲ್ಲಾಸ್ಙತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೇ 16 ರಂದು ಮೃತಪಟ್ಟಿದ್ದಾರೆ ಇವರ ಕೊವಿಡ್ ಪರೀಕ್ಷಾ ವರದಿ 17 ರಂದು ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ. ಸದಾಶಿವನಗರದ 28 ವರ್ಷದ ಮಹಿಳೆ ಜ್ವರ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ 13 ರಂದು ಮೃತಪಟ್ಟಿದ್ದಾರೆ ಇವರ ಕೋವಿಡ್ ಪರೀಕ್ಷಾ ವರದಿ ಇಂದು ಬಂದಿದ್ದು ಪಾಸಿಟಿವ್ ಇರುವುದು ದೃಢಪಟ್ಟಿದೆ.
20 ಮಂದಿ ಡಿಸ್ಚಾರ್ಜ್
ಸೋಂಕು ಹೆಚ್ಚಾದಂತೆ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದ್ದು ಇಂದು 20 ಜನರು ಬಿಡುಗಡೆಯಾಗಿ ಮನೆ ಸೇರಿದ್ದಾರೆ.
ಜಿಲ್ಲೆಯಲ್ಲಿ ಈವರೆಗೆ ಒಟ್ಟು 653 ಜನರು ಕೊರೊನಾ ಸೊಂಕಿಗೆ ಒಳಗಾಗಿದ್ದು 20 ಜನರು ಬಲಿಯಾಗಿದ್ದಾರೆ. 287 ಜನರು ಗುಣಮುಖರಾಗಿದ್ದು 346 ಜನ ಸೊಂಕಿತರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 1,545 ಜನರನ್ನ ನಿಗಾದಲ್ಲಿ ಇಡಲಾಗಿದೆ ಸೋಂಕಿತರು ಹೆಚ್ಚಾಗುವ ಸಾದ್ಯತೆ ಇದೆ.
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ತುಮಕೂರಲ್ಲಿ ಸವಲತ್ತು ವಿತರಣಾ ಕಾರ್ಯಕ್ರಮ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
ಕರ್ನಾಟಕದಲ್ಲಿ ಒಂದೇ ದಿನ 21,390 ಕೊರೋನಾ.! ಲಾಕ್ಡೌನ್ ಫಿಕ್ಸಾ.?