ರೈಸಿಂಗ್ ಕನ್ನಡ :
ತುಮಕೂರು:
ಜಿಲ್ಲೆಯಲ್ಲಿ ಕೊರೊನ ಅಬ್ಬರ ಜೋರಾಗಿದ್ದು ಮಂಗಳವಾರ ನಾಲ್ವರನ್ನ ಬಲಿ ಪಡೆದಿದೆ.ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಸಾಗುತ್ತಲೇ ಇದೆ. ದಿನನಿತ್ಯ ನೂರರ ಗಡಿ ದಾಟುತ್ತಲೇ ಇದೆ.
ತುಮಕೂರು ನಗರವೊಂದರಲ್ಲೇ ಮಂಗಳವಾರ 60 ಕೊರೊನ ಸೋಂಕು ಪ್ರಕರಣಗಳು ದೃಢಪಟ್ಟಿವೆ. ಪ್ರತಿಯೊಂದು ಬಡಾವಣೆಗಳಲ್ಲೂ ಸೋಂಕಿತರು ಕಂಡುಬರುತ್ತಿದ್ದು ಸೀಲ್ ಡೌನ್ ಏರಿಯಾಗಳು ಹೆಚ್ಚುತ್ತಲೇ ಇವೆ.
ತಾಲ್ಲೂಕುವಾರು ಸೋಂಕಿತರ ವಿವರ
ಮಧುಗಿರಿ-7, ಗುಬ್ಬಿ-7, ತಿಪಟೂರು-8, ಕುಣಿಗಲ್ 13, ಸಿರಾ-6, ತುರುವೇಕೆರೆ-9, ಪಾವಗಡ-10 ಮತ್ತು ಕೊರಟಗೆರೆ ತಾಲೂಕಿನಲ್ಲಿ 6 ಪ್ರಕರಣಗಳು ಪತ್ತೆಯಾಗಿವೆ.
ಇಂದು ಇಬ್ಬರು ಮಹಿಳೆಯರು, ಇಬ್ಬರು ಪುರುಷರು ಮೃತಪಟ್ಟಿದ್ದಾರೆ ಎಂದು ಆರೋಗ್ಯಾಧಿಕಾರಿ ನಾಗೇಂದ್ರ ತಿಳಿಸಿದ್ದಾರೆ.
ಸೋಂಕಿತರು ಮತ್ತು ಸಾವಿನ ಸಂಖ್ಯೆ ಏರುತ್ತಿರುವುದು ಜನರನ್ನು ಭಯಭೀತರನ್ನಾಗಿ ಮಾಡಿದೆ. ಮಾಸ್ಕ ಧರಿಸುವುದು ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ಹರಡುವುದನ್ನು ತಡೆಯಲು ಸಾಧ್ಯ ಎಂದು ಅವರು ಹೇಳಿದ್ದಾರೆ.
ಇದುವರೆಗೆ ಸೋಂಕಿತರ ಸಂಖ್ಯೆ 1,473ಕ್ಕೆ ಏರಿಕೆಯಾಗಿದ್ದರೆ, ಸಾವಿನ ಸಂಖ್ಯೆ 49ಕ್ಕೆ ತಲುಪಿದೆ.
ಪಿಡಿಓ ಮತ್ತು ಲೆಕ್ಕಾಧಿಕಾರಿಯೊಬ್ಬರಿಗೆ ಕೊರೊನ ಸೋಂಕು ಇರುವುದು ದೃಢಪಟ್ಟಿರುವುದರಿಂದ ಹೆಬ್ಬೂರು ಗ್ರಾಮ ಪಂಚಾಯಿತಿ ಕಚೇರಿಯನ್ನು ಸೀಲ್ ಡೌನ್ ಮಾಡಲಾಗಿದೆ.
ತುಮಕೂರು ನಗರದಲ್ಲಿ ಪೌರಕಾರ್ಮಿಕರೊಬ್ಬರಿಗೆ ಸೋಂಕು ತಗುಲಿದೆ. ಹಾಗಾಗಿ ಈತನ ಸಂಪರ್ಕದಲ್ಲಿದ್ದ 15 ಮಂದಿ ಪೌರಕಾರ್ಮಿಕರನ್ನು ಕ್ವಾರಂಟೈನ್ ಮಾಡಲಾಗಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?