Featured
ಎಂಟು ಕೊರೊನಾ ಸೋಂಕಿತರ ಸ್ಥಿತಿ ಗಂಭೀರ: ಅಸಹಾಯಕತೆ ಹೊರ ಹಾಕಿದ ಸಚಿವ ಉಸ್ತುವಾರಿ ಸಚಿವ ಮಾಧುಸ್ವಾಮಿ

ರೈಸಿಂಗ್ ಕನ್ನಡ :
ತುಮಕೂರು:
ತುಮಕೂರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರೋ ಎಂಟು ಜನ ಸೋಂಕಿತರ ಸ್ಥಿತಿ ಗಂಭೀರ. ಅವರ ಜೀವದ ಬಗ್ಗೆ ಯಾವುದೇ ಗ್ಯಾರಂಟಿ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಹೇಳಿದ್ದಾರೆ.
ತುಮಕೂರಲ್ಲಿ ಕೊರೋನಾ ಹೆಚ್ಚಳ ವಿಚಾರವಾಗಿ ತುರ್ತು ಪತ್ರಿಕಾಗೋಷ್ಠಿ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ ಮಾಧುಸ್ವಾಮಿ ಈ ವಿಚಾರ ಹೇಳಿದರು.

ಕೊರೋನಾ ಕಮ್ಯುನಿಟಿ ಸ್ಪ್ರೆಡ್ ಆಗೋ ಹಂತಕ್ಕೆ ತಲುಪುತ್ತಿದೆ. ಕೋವಿಡ್ ಪ್ರಕರಣಗಳು ಜಿಲ್ಲೆಯಲ್ಲಿ ವೇಗವಾಗಿ ಬೆಳೆಯುತ್ತಿದೆ. ಜಿಲ್ಲಾಡಳಿತ ಎಷ್ಟೇ ಶ್ರಮಪಟ್ಟರೂ ಕೊರೊನಾ ಕಂಟ್ರೋಲ್ ಮಾಡೋದು ಕಷ್ಟ ಎಂಬ ಸ್ಥಿತಿಗೆ ನಾವು ತಲುಪ್ಪಿದ್ದೇವೆ. ಕಮ್ಯುನಿಟಿ ಲೆವೆಲ್ಗೆ ಹೋಗ್ತಾ ಇರೋದು ಆಘಾತ ತರುತ್ತಿದೆ. ಹೀಗೆ ಆಗಬಾರದು ಅಂತ ಹೋರಾಟ ಮಾಡ್ತಾ ಬಂದ್ವಿ, ಎಲ್ಲೋ ಒಂದ್ಕಡೆ ಪರಿಸ್ಥಿತಿ ನಮ್ಮ ಕೈ ಮೀರುತ್ತಿದೆ. ನಿನ್ನೆಯೂ ಒಬ್ಬರು ಸಾವನ್ನಪ್ಪಿದ್ದಾರೆ. ಅವರನ್ನ ಆಸ್ಪತ್ರೆಗೆ ತರೋ ವೇಳೆಯೇ ಕ್ರಿಟಿಕಲ್ ಆಗಿದ್ರು.
ಉಸಿರಾಟ ಸಮಸ್ಯೆ ಆಗಿದ್ರಿಂದ ಸಾವನ್ನಪ್ಪಿದ್ರು. ಈ ಮೂಲಕ ಜಿಲ್ಲೆಯಲ್ಲಿ ಮತ್ತೊಂದು ಸಾವನ್ನ ದೃಢ ಪಡಿಸಿದ ಸಚಿವರು ಒಟ್ಟು ಸಾವಿನ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಚಿಕಿತ್ಸೆ ಪಡೆಯುತ್ತಿರುವವರಲ್ಲಿ ಎಂಟು ಜನರ ಸ್ಥಿತಿ ಗಂಭೀರವಾಗಿದೆ.ಅವರ ಜೀವದ ಬಗ್ಗೆ ಯಾವುದೇ ಗ್ಯಾರಂಟಿ ಕೊಡೋಕಾಗಲ್ಲ ಎಂದು ಸಚಿವ ಮಾಧುಸ್ವಾಮಿ ಹೇಳಿಕೆ ನೀಡಿದ್ದಾರೆ.
You may like
ಬಿಜೆಪಿ ರಾಜ್ಯಾಧ್ಯಕ್ಷರಿಗೆ ಶಾಸಕ ದೊಡ್ಡನಗೌಡ ಪಾಟೀಲ್ ಪತ್ರ: ಕೊಪ್ಪಳ ಕ್ಷೇತ್ರಕ್ಕೆ ಪ್ರಭಾಕರ್ ಚಿಣಿಗೆ ಟಿಕೆಟ್ ನೀಡುವಂತೆ ಮನವಿ
ಹಣ್ಣುಗಳನ್ನು ತಿನ್ನುವಾಗ ಈ ಟಿಪ್ಸ್ ಫಾಲೋ ಮಾಡೋದನ್ನ ಮರೆಯಬೇಡಿ!
ಬೇಸಿಗೆಯಲ್ಲಿ ಕಾವೇರಿ ನೀರಿಲ್ಲ! ಬೆಂಗಳೂರಿಗೆ ಜಲ ಕ್ಷಾಮ ಫಿಕ್ಸ್
ಫೆ.7 ರಂದು ಮಂಡ್ಯ ನಗರ ಬಂದ್ಗೆ ಕರೆ ಕೊಟ್ಟ ಸಮಾನ ಮನಸ್ಕರ ವೇದಿಕೆ
ದೆಹಲಿ ಮಾದರಿ ಲಾಕ್ ಆಗುತ್ತಾ ಬೆಂಗಳೂರು.? ಯಾಕೆ..? ಏನಾಗ್ತಿದೆ ಬೆಂಗಳೂರಲ್ಲಿ.?
ಬೆಳಗಾವಿ ರಾಜಕಾರಣಿಗಳು ಬದುಕಿದ್ದಾರಾ.? ಜಾರಕಿಹೊಳಿ, ಕತ್ತಿ, ಹುಕ್ಕೇರಿ, ಹೆಬ್ಬಾಳ್ಕರ್ ಏನಾಗಿದ್ದಾರೆ.?