ರೈಸಿಂಗ್ ಕನ್ನಡ:
ನ್ಯೂಸ್ ಡೆಸ್ಕ್:
ದೇಶದಲ್ಲಿ ಅನ್ಲಾಕ್ ಆದ ನಂತರ ಸಾರ್ವಜನಿಕರು ಹೆಮ್ಮಾರಿ ಕೊರೊನವನ್ನ ನಿರ್ಲಕ್ಷಿಸುತ್ತಲ್ಲೇ ಬಂದಿದ್ದಾರೆ. ಇದರ ಪರಿಣಾಮ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47 ಲಕ್ಷ ದಾಟಿದೆ.
ಕೇಂದ್ರ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಶನಿವಾರ 94,372 ಹೊಸ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 47,54,357ಕ್ಕೆ ಏರಿದೆ.
ಸಾವಿನ ಪ್ರಮಾಣದಲ್ಲಿಯೂ ಕ್ರೂರಿ ಕೊರೊನಾ ಅಟ್ಟಹಾಸ ಮುಂದುವರೆಸಿದ್ದು ಕಳೆದ ಒಂದು ದಿನದಲ್ಲಿ 1,114 ಮಂದಿ ಉಸಿರು ನಿಲ್ಲಿಸಿದ್ದಾರೆ. ಹೆಮ್ಮಾರಿಗೆ ಬಲಿಯಾದವರ ಸಂಖ್ಯೆ 78,586ಕ್ಕೆ ಏರಿದೆ.
ದೇಶದಲ್ಲಿ ಇನ್ನು 9,73,175 ಸಕ್ರಿಯ ಪ್ರಕರಣಗಳಿವೆ.ಈವರೆಗೂ ದೇಶದಲ್ಲಿ 37,02,596 ಮಂದಿ ಚೇತರಿಸಿಕೊಂಡು ಡಿಸ್ಚಾರ್ಜ್ ಆಗಿದ್ದಾರೆ ಎಂದು ಕೇಂದ್ರ ಆರೊಗ್ಯ ಇಲಾಖೆ ಮಾಹಿತಿ ನೀಡಿದೆ.
ಶನಿವಾರ ದೇಶಾದ್ಯಂತ 10,71,702 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ.ಈವರೆಗು 5,62,60,928 ಸ್ಯಾಂಪಲ್ಗಳನ್ನ ಪರೀಕ್ಷಿಸಲಾಗಿದೆ ಎಂದು ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ ಹೇಳಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?