Featured
ರಾಜ್ಯದಲ್ಲಿ 2 ಲಕ್ಷ ದಾಟಿದ ಕೊರೊನಾ ಸೋಂಕು: ಸಾವಿನಲ್ಲಿ ಮತ್ತೆ ಶತಕ ಬಾರಿಸಿದ ಕಿಲ್ಲರ್: 8,609 ಮಂದಿ ಡಿಸ್ಚಾರ್ಜ್

ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿದೆ. ಇನ್ನು ಸಾವಿನಲ್ಲೂ ಕೊರೊನಾ ಆರ್ಭಟ ಮುಂದುವರೆದಿದ್ದು ಕೊರೊನಾ ಮತ್ತೆ ಶತಕ ಬಾರಿಸಿದೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ದಾಖಲಯ 6,706 ಕೊರೊನಾ ಕೇಸ್ ಪತ್ತೆಯಾಗಿದೆ.ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 2 ಲಕ್ಷ ಗಡಿ ದಾಟಿ ಒಟ್ಟು ಸೋಂಕಿತರ ಸಂಖ್ಯೆ 2,03,200ಕ್ಕೆ ಏರಿದೆ.
ಇನ್ನು ಕಳೆದ ಕೆಲವು ದಿನಗಳಿಂದ ಸಾವಿನಲ್ಲಿ ಕೊರೊನಾ ಮರಣ ಮೃದಂಗ ಮುಂದುವರೆದಿದ್ದು ಗುರುವಾರ 103 ಮಂದಿ ಕೊನೆಯುಸಿರೆಳೆದಿದ್ದಾರೆ. ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 3,613ಕ್ಕೆ ಏರಿದೆ. ರಾಜ್ಯದಲ್ಲಿ ಒಟ್ಟು 78,337 ಸಕ್ರಿಯ ಪ್ರಕರಣಗಳಿವೆ.
ಸಮಾಧಾನಕರ ವಿಚಾರವೆಂದರೆ ಕೊರೊನಾದಿಂದ ಚೇತರಿಕೆ ಪ್ರಮಾಣವು ಹೆಚ್ಚಾಗಿದ್ದು ಕಳೆದ 24 ಗಂಟೆಯಲ್ಲಿ 8,609 ಮಂದಿ ಗುಣಮುಖರಾಗಿದ್ದಾರೆ. 1,21,242 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಸೋಂಕು ಪ್ರಕರಣ ಕಮ್ಮಿಯಾಗಿದ್ದು ಗುರುವಾರ 1,893 ಹೊಸ ಕೇಸ್ ಪತ್ತೆಯಾಗಿದೆ.ನಗದರಲ್ಲಿ ಸೋಂಕಿತರ ಸಂಖ್ಯೆ 81,733ಕ್ಕೆ ಎರಿದೆ. 22 ಮಂದಿ ಕ್ರೂರಿ ಹೊಡೆತಕ್ಕೆ ಸಾವನಪ್ಪಿದ್ದಾರೆ. ನಗರದಲ್ಲಿ ಕೋವಿಡ್ಗೆ ಬಲಿಯಾದವರ ಸಂಖ್ಯೆ 1,338ಕ್ಕೆ ಏರಿದೆ. ಬೆಂಗಳೂರಲ್ಲಿ ಒಟ್ಟು 33,148 ಸಕ್ರಿಯ ಪ್ರಕರಣಗಳಿವೆ. 2,212 ಮಂದಿ ಬಿಡುಗಡೆಯಾಗಿದ್ದು ಒಟ್ಟು 47,246 ಮಂದಿ ಬಿಡುಗಡೆಯಾಗಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?