Featured
ಮತ್ತೆ ಕೊರೊನಾ ಆರ್ಭಟ: ರಾಜ್ಯದಲ್ಲಿ 7,710 ಹೊಸ ಕೇಸ್: ಬೆಂಗಳೂರಿನಲ್ಲಿ 4,192 ಹೊಸ ಸೋಂಕಿತರು
![](https://risingkannada.com/wp-content/uploads/2020/07/corona-12-1.jpg)
ರೈಸಿಂಗ್ ಕನ್ನಡ:
ಬೆಂಗಳೂರು:
ರಾಜ್ಯದಲ್ಲಿ ಮಹಾಮಾರಿ ಕೊರೊನಾ ಅಬ್ಬರ ಮತ್ತೆ ಜೊರಾಗಿದ್ದು ಕಳೆದ 24 ಗಂಟೆಯಲ್ಲಿ 7,710 ಹೊದ ಕೊರೊನಾ ಪ್ರಕರಣಗಳು ದಾಖಲಾಗಿವೆ.
ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ವರದಿಯಲ್ಲಿ ಗುರುವಾರ 7,710 ಹೊಸ ಕೊರೊನಾ ವೈರಾಣು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 5,48,557ಕ್ಕೆ ಏರಿದೆ.
ಇನ್ನು ಸಾವಿನಲ್ಲೂ ಪ್ರಮಾನ ಹೆಚ್ಚಾಗಿದ್ದು ಗುರುವಾರ ರಾಜ್ಯಾದ್ಯಂತ ಹೆಮ್ಮಾರಿಗೆ 65 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾಗೆ ಬಲಿಯಾದವರ ಒಟ್ಟು ಸಂಖ್ಯೆ 8,331ಕ್ಕೆ ಏರಿದೆ.
ರಾಜ್ಯದಲ್ಲಿ ಒಟ್ಟು 95,549 ಸಕ್ರಿಯ ಪ್ರಕರಣಗಳಿವೆ. ಗುರುವಾರ 6,748 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ರಾಜ್ಯದಲ್ಲಿ 4,44,658 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ದಾಖಲೆಯ 4,192 ಹೊಸ ಸೋಂಕಿತರು ಕಂಡು ಬಂದಿದ್ದಾರೆ. ನಗರದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,08,467ಕ್ಕೆ ಏರಿದೆ.
ಗುರುವಾರ ನಗದರಲ್ಲಿ ಕ್ರೂರಿ ಹೊಡೆತಕ್ಕೆ 24 ಮಂದಿ ಕೊನೆಯುಸಿರೆಳೆದಿದ್ದಾರೆ. ಇದರೊಂದಿಗೆ ನಗರದಲ್ಲಿ ಕೋವಿಡ್ 19ಗೆ ಬಲಿಯಾದವರ ಒಟ್ಟು ಸಂಖ್ಯೆ 2,762 ಕ್ಕೆ ಏರಿದೆ.
ಬೆಂಗಳೂರಿನಲ್ಲಿ ಒಟ್ಟು 40,285 ಸಕ್ರಿಯ ಪ್ರಕರಣಗಳಿವೆ.ಗುರುವಾರ 3,854 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೂಒಟ್ಟು 1,65,419 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?