Featured
ಮೊಸಳೆ ದಾಳಿಗೆ ಸಿಲುಕಿ ಎಮ್ಮೆಯ ಕಾಲು ಕಟ್ – ಪಶುವೈದ್ಯರಿಗೆ ಇನ್ನೂ ಕೇಳಿಸದ ಮೂಕರೋಧನೆ..!

ಯಾದಗಿರಿ :
ಪ್ರತಿನಿಧಿ : ದುರ್ಗೇಶ್ ಮಂಗಿಹಾಳ
ಮೊಸಳೆ ದಾಳಿಯಿಂದ ಎಮ್ಮೆಯೊಂದು ಕಾಲು ಕಳೆದುಕೊಂಡು ಎರಡು ದಿನಗಳಿಂದ ಯಾದಗಿರಿಯ ಕೃಷ್ಣಾ ನದಿ ದಡದಲ್ಲಿ ನರಳುತ್ತಿದೆ. ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಕೊಡಲ ಗ್ರಾಮದ ಸಮೀಪದ ಕೃಷ್ಣಾ ನದಿ ತೀರದಲ್ಲಿ ಎಮ್ಮೆಯೊಂದರ ಮೇಲೆ ಮೊಸಳೆ ದಾಳಿ ನಡೆಸಿದೆ.
ಮೊಸಳೆ ಬಾಯಿಗೆ ಸಿಕ್ಕು ಕಾಲು ಕಳೆದುಕೊಂಡ ಎಮ್ಮೆಯೊಂದು ಎಲ್ಲು ಹೋಗಲು ಸಾಧ್ಯವಾಗದೆ ಮೂಕ ರೋಧನೆ ಅನುಭವಿಸುತ್ತಿದೆ. ಈ ವಿಷಯ ಸ್ಥಳೀಯ ಪಶು ಚಿಕಿತ್ಸಾಲಯ ವೈದ್ಯರಿಗೆ ಗೊತ್ತಿದ್ದರೂ, ಪಶು ವೈದ್ಯರು ಮಾತ್ರ ಎಮ್ಮೆಗೆ ಚಿಕಿತ್ಸೆ ಕೊಡುತ್ತಿಲ್ಲ ಅನ್ನೋ ಆರೋಪ ಕೇಳಿ ಬಂದಿದೆ.
ಇದರಿಂದ ಅತೀವ ನೋವಿನಿಂದ ನರಳುತ್ತಿರುವ ಎಮ್ಮೆ ನೋವು ತಗ್ಗಿಸಿಕೊಳ್ಳಲು ನದಿಯ ನೀರಿನಲ್ಲಿ ಕಾಲ ಕಳೆಯುತ್ತಿದೆ. ಎಮ್ಮೆ ನೀರು ಕುಡಿಯಲು ನದಿ ತೀರಕ್ಕೆ ತೆರಳಿತ್ತು. ಈ ಸಮಯದಲ್ಲಿ ಮೊಸಳೆಯೊಂದು ಎಮ್ಮೆಯ ಮೇಲೆ ಏಕಾಏಕಿ ದಾಳಿ ಮಾಡಿದೆ. ದಾಳಿಯಲ್ಲಿ ಎಮ್ಮೆಯ ಕಾಲು ಕಟ್ ಆಗಿದ್ದ್ರು, ಮೊಸಳೆ ಬಾಯಿಂದ ತಪ್ಪಿಸಿಕೊಂಡು ಎಮ್ಮೆ ಜೀವ ಉಳಿಸಿಕೊಂಡಿದೆ. ತೀವ್ರವಾಗಿ ಗಾಯಗೊಂಡಿರುವ ಎಮ್ಮೆಯ ರಕ್ಷಣೆ ಯಾರು ಧಾವಿಸದ ಹಿನ್ನೆಲೆ, ಕಳೆದ ಎರಡು ದಿನಗಳಿಂದ ನದಿಯ ನೀರಿನಲ್ಲಿ ಎಮ್ಮೆ ಕುಳಿತಿದೆ.
ಇನ್ನೂ ಎಮ್ಮೆ ಮಾಲೀಕ ಕೂಡ ನದಿಯಲ್ಲಿ ನಾಪತ್ತೆಯಾಗಿದ್ದು ಮೊಸಳೆ ದಾಳಿ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎರಡು ದಿನಗಳಿಂದ ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದರು ಎಮ್ಮೆ ಮಾಲಿಕ ಪತ್ತೆಯಾಗಿಲ್ಲ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?