ರೈಸಿಂಗ್ ಕನ್ನಡ :
ಬೆಂಗಳೂರು :
ಕೊರೊನಾ ನಡುವೆಯೂ ಜನಜೀವನ ಮಾತ್ರ ನಿಲ್ಲುತ್ತಿಲ್ಲ. ಈ ಮಧ್ಯೆ ಜುಲೈ 1 ರಿಂದ ರಾಜ್ಯದ ಎಲ್ಲಾ ನೃತ್ಯ ಶಾಲೆಗಳನ್ನೂ ತೆರೆಯಲು ಅಧಿಕೃತವಾಗಿ ಪ್ರಕಟಣೆ ಹೊರಡಿಸಬೇಕಾಗಿ ಸರ್ಕಾರಕ್ಕೆ ವಿನಂತಿ ಸಲ್ಲಿಸಲಾಯ್ತು. ಕರ್ನಾಟಕ ರಾಜ್ಯ ನೃತ್ಯ ಶಾಲಾ ಮಾಲೀಕರ ಅಧ್ಯಕ್ಷರಾದ ಬಿ. ಕೆ. ದಿನಕರ್, ಮುಖ್ಯಮಂತ್ರಿಗಳು ಮತ್ತು ಉಪ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ, ನೃತ್ಯ ಶಾಲಾ ಮಾಲೀಕರು ಮತ್ತು ನೃತ್ಯಗಾರರ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.
ನೃತ್ಯಕ್ಕೆ ವೈರಸ್ ವಿರುದ್ಧ ಹೊರಡುವ ಶಕ್ತಿ ಇದೆ. ದೈಹಿಕವಾಗಿ, ಮಾನಸಿಕವಾಗಿ ಮತ್ತು ರೋಗ ನಿರೋಧಕ ಶಕ್ತಿ ಇದರಿಂದ ಹೆಚ್ಚಾಗುತ್ತದೆ, ಅದಕ್ಕಾಗಿ ನೃತ್ಯ ಶಾಲೆಗಳ ಬಳಕೆಗೆ ಎಲ್ಲರಿಗೂ ಅವಕಾಶ ಕೊಡಬೇಕೆಂದು ವಿನಂತಿಸಿಕೊಳ್ಳಲಾಗಿದೆ. ಕೊರೊನಾದಿಂದಾಗಿ ರಾಜ್ಯದಲ್ಲಿ ಸಾವಿರಾರು ನೃತ್ಯ ಶಾಲೆಗಳು ಬಾಡಿಗೆಯನ್ನು ಕಟ್ಟಲಾಗದೆ ಮುಚ್ಚಿಹೋಗಿವೆ, ಮತ್ತು ಇನ್ನು ಆನೇಕ ಶಾಲೆಗಳು ಮುಚ್ಚುವ ಸ್ಥಿತಿಗೆ ಬಂದಿರುವ ಕಾರಣ ಸರ್ಕಾರ ಈ ಕೂಡಲೇ ನಮ್ಮ ನೆರವಿಗೆ ನಿಲ್ಲಬೇಕು ಎಂದು ಮನವಿ ಮಾಡಿದ್ರು. ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಕೂಡ ಈ ನಿಟ್ಟಿನಲ್ಲಿ ಸೂಕ್ತ ಭರವಸೆ ನೀಡಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?