Featured
ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್ ಕೇರ್ ಪ್ರಾರಂಭಕ್ಕೆ ವ್ಯವಸ್ಥೆ – ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ಹೇಳಿಕೆ

ರೈಸಿಂಗ್ ಕನ್ನಡ :
ರಾಮನಗರ :
ಚನ್ನಪಟ್ಟಣದಲ್ಲಿ 500 ಜನರಿಗಾಗುವಷ್ಟು ಕೋವಿಡ್ ಕೇರ್ಅನ್ನು ಪ್ರಾರಂಭಿಸಲು ಎಲ್ಲಾ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಅಶ್ವತ್ಥ ನಾರಾಯಣ್ ತಿಳಿಸಿದ್ದಾರೆ. ಚನ್ನಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿಗಳು, ಜಿಲ್ಲೆಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾದರು ಅದನ್ನು ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ. ಚನ್ನಪಟ್ಟಣದ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನು ಹೆಚ್ಚಿನ ಸೌಲಭ್ಯಗಳನ್ನು ಕಲ್ಪಿಸಿ ಉನ್ನತ ದರ್ಜೆಗೆ ಏರಿಸಲಾಗುವುದು ಎಂದರು.
ಖಾಸಗಿ ಆಸ್ಪತ್ರೆಗೆ ನೇರವಾಗಿ ದಾಖಲಾಗುವವರು, ಅವರೇ ಆಸ್ಪತ್ರೆಯ ಖರ್ಚು ವೆಚ್ಚವನ್ನು ಭರಿಸಬೇಕಾಗುತ್ತದೆ ಎಂದರು, ಆದ್ರೆ, ಸರ್ಕಾರದ ಮೀಸಲು ಖೋಟಾದ ಹಾಸಿಗೆಗಳನ್ನು ಹೊರತು ಪಡಿಸಿ ಅನ್ನೋದನ್ನ ಸ್ಪಷ್ಟಪಡಿಸಿದ್ರು. ಖಾಸಗಿ ಆಸ್ಪತ್ರೆಯ ವೆಚ್ಚದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ ಎಂದರು.

ಕೋವಿಡ್-19 ರೋಗ ಲಕ್ಷಣವಿಲ್ಲದವರಿಗೆ ಆಸ್ಪತ್ರೆಯ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ ಇಂತಹವರು ಅವರ ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳಬಹುದು ಅನ್ನೋದನ್ನ ತಿಳಿಹೇಳಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?