Featured
ಉಪಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು: ಜನಪರ ಆಡಳಿತಕ್ಕೆ ಮತದಾರರ ಮನ್ನಣೆ : ಡಿಸಿಎಂ ಗೋವಿಂದ ಕಾರಜೋಳ

ರೈಸಿಂಗ್ ಕನ್ನಡ:
ಬೆಂಗಳೂರು:
ಪ್ರಧಾನಮಂತ್ರಿ ನರೇಂದ್ರ ಮೋದಿಜಿ ಹಾಗೂ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಜನಪರ ಆಡಳಿತ, ಜನಹಿತ ಕಾರ್ಯಕ್ರಮಗಳು ಹಾಗೂ ಸರ್ಕಾರದ ಸಾಧನೆಗಳಿಗೆ ಮತದಾರರು ಮನ್ನಣೆ ನೀಡಿ, ಕರ್ನಾಟಕದ ಎರಡೂ ವಿಧಾನ ಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಅಭೂತಪೂರ್ವವಾಗಿ ಜಯಶೀಲರನ್ನಾಗಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಹೇಳಿದ್ದಾರೆ.
ಶಿರಾ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಾಜೇಶ್ ಗೌಡ ಹಾಗೂ ರಾಜರಾಜೇಶ್ವರಿ ಕ್ಷೇತ್ರದ ಅಭ್ಯರ್ಥಿ ಮುನಿರತ್ನ ಗೆಲುವು ಸಾಧಿಸಿದ್ದಕ್ಕೆ ಸಂತಸ ವ್ಯಕ್ತಪಡಿಸಿದ ಡಿಸಿಎಂ, ಗೆಲುವಿಗೆ ಕಾರಣೀಭೂತರಾದ ಕಾರ್ಯಕರ್ತರಿಗೆ, ಮತದಾರರಿಗೆ ಹಾಗೂ ವಿಜೇತ ಅಭ್ಯರ್ಥಿಗಳನ್ನು ಡಿಸಿಎಂ ಅಭಿನಂದಿಸಿದ್ದಾರೆ.
ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಐತಿಹಾಸಿಕ ಗೆಲವು ದಾಖಲಿಸಿದೆ. ಶಿರಾ ವಿಧಾನ ಸಭಾ ಕ್ಷೇತ್ರದಲ್ಲಿ ಚುನಾವಣಾ ಕಾರ್ಯಕ್ಕೆ ತಮ್ಮನ್ನು ನಿಯೋಜಿಸಿದ್ದರು. ಚುನಾವಣಾ ಕಾರ್ಯಕ್ಕೆ ನಿಯೋಜನೆಗೊಂಡ ನಾವೆಲ್ಲರೂ ಸಂಘಟಿತವಾಗಿ ಚುನಾವಣಾ ಕಾರ್ಯನಿರ್ವಹಿಸಿದೆವು. ಜನತೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳಿಗೆ, ಸಾಧನೆಗೆ ಮನ್ನಣೆ ನೀಡಿ, ಅಧಿಕ ಮತಗಳ ಅಂತರದಿಂದ ಜಯಶೀಲರನ್ನಾಗಿಸಿದ್ದಾರೆ. ಎಲ್ಲಾ ಮತದಾರರಿಗೆ, ಕಾರ್ಯಕರ್ತರಿಗೆ ಅಭಾರಿಯಾಗಿರುವುದಾಗಿ ಉಪಮುಖ್ಯಮಂತ್ರಿ ತಿಳಿಸಿದ್ದಾರೆ.
ಜನತೆ ಅಭಿವೃದ್ಧಿಯ ಪರವಾಗಿದ್ದಾರೆ. ನಮ್ಮ ಸರ್ಕಾರದ ಮೂಲ ಮಂತ್ರವೇ ಅಭಿವೃದ್ಧಿಯಾಗಿದೆ. ಮತದಾರರು ಪ್ರಬುದ್ದರಿದ್ದಾರೆ. ಅಭಿವೃದ್ದಿಯ ಪರವಾಗಿರುವ ನಮ್ಮ ಪಕ್ಷವನ್ನು ಬೆಂಬಲಿಸಿದ್ದಾರೆ ಎಂದು ಡಿಸಿಎಂ ತಿಳಿಸಿದ್ದಾರೆ.
ಕರ್ನಾಟಕ ಮಾತ್ರವಲ್ಲದೇ ಬಿಹಾರ ರಾಜ್ಯದ ವಿಧಾನ ಸಭಾ ಚುನಾವಣೆಯ ಫಲಿತಾಂಶವೂ ಕೂಡಾ ಬಿಜೆಪಿ ಮತ್ತು ಮಿತ್ರಪಕ್ಷಗಳ ಪರ ವ್ಯಕ್ತವಾಗಿದೆ. ಈ ಫಲಿತಾಂವು ಮೋದಿಜಿ ಅವರ ಜನಪ್ರಿಯತೆ ಹಾಗೂ ಜನಪರ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?