ರೈಸಿಂಗ್ ಕನ್ನಡ:
ಮಂಜುನಾಥ ತಳವಾರ, ಬಾಗಲಕೋಟೆ:
ಹೂತಿದ್ದ ಶವವೊಂದನ್ನು ದುಷ್ಕರ್ಮಿಗಳು ಹೊತ್ತೊಯ್ದಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕಿನ ರೂಗಿ ಗ್ರಾಮದಲ್ಲಿ ನಡೆದಿದೆ. ರಾಮಣ್ಣ ತುಮ್ಮರಮಟ್ಟಿ ಐದು ತಿಂಗಳ ಹಿಂದೆ ಶಿವರಾತ್ರಿ ಶಿವಯೋಗದ ದಿನ ಮೃತಪಟ್ಟಿದ್ದರು. ಪೆಬ್ರುವರಿ 21ರಂದು ಮೃತಪಟ್ಟಿದ್ದರು, ಪೆಬ್ರುವರಿ 22 ರಂದು ಅಂತ್ಯಸಂಸ್ಕಾರ ಮಾಡಲಾಗಿತ್ತು. ಮೃತ ವ್ಯಕ್ತಿ ಕ್ಯಾನ್ಸರ್ ನಿಂದ ಬಳಲಿ ಸಾವನ್ನಪ್ಪಿದ್ದರು.
ನಾಗರ(ಭೀಮನ) ಅಮವಾಸ್ಯೆ ದಿನ ದುಷ್ಕರ್ಮಿಗಳು ಶವ ಹೊತ್ತೊಯ್ದಿದ್ದು ವಾಮಾಚಾರ ,ನಿಧಿಗಾಗಿ ಶವ ಹೊತ್ತೊಯ್ದಿರುವ ಶಂಕೆ ವ್ಯಕ್ತವಾಗಿದೆ. ರಾಮಣ್ಣ ತುಮ್ಮರಮಟ್ಟಿ ಅವರ ಹೊಲದಲ್ಲೇ ಶವ ಹೂಳಲಾಗಿತ್ತು. ಐದು ತಿಂಗಳ ಹಿನ್ನೆಲೆ ಶವ ಅಸ್ಥಿಪಂಜರವಾಗಿರುವ ಸಾಧ್ಯತೆ ಇದೆ. ದುಷ್ಕರ್ಮಿಗಳು ಅಮವಾಸ್ಯೆ ರಾತ್ರಿ ಹೊತ್ತೊಯ್ದಿರುವ ರಹಸ್ಯವೇನು? ವಾಮಾಚಾರ,ನಿಧಿಗಾಗಿ ಹೊತ್ತೊಯ್ದಿರಬಹುದೆಂದು ಅನುಮಾನ ಸ್ಥಳೀಯರಲ್ಲಿ ಮೂಡಿದೆ. ರೂಗಿ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ಲೋಕಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?