ಬೆಂಗಳೂರು
ಚುನಾವಣಾ ಪ್ರಚಾರಕ್ಕೆ ಹೆಲಿಕಾಪ್ಟರ್ಗಳಿಗೆ ಬೇಡಿಕೆ: ಬಾಡಿಗೆ ಎಷ್ಟು ಲಕ್ಷ..?

Bengalore : ಸ್ಟಾರ್ ಪ್ರಚಾರಕರ ಓಡಾಟಕ್ಕಾಗಿ ಹೆಲಿಕಾಪ್ಟರ್, ಚಾರ್ಟರ್ಡ್ ವಿಮಾನಗಳಿಗೆ ಬೇಡಿಕೆ ಹೆಚ್ಚಾಗಿದೆ. ಲೋಕಾಸಭೆ ಚುನಾವಣೆ ಸಮೀಪಿಸುತ್ತಿದ್ದಂತೆಯೇ ರಾಜಕೀಯ ಪಕ್ಷಗಳ ಚಟುವಟಿಕೆಗಳು ಗರಿಗೆದರಿವೆ. ರಾಜಕೀಯ ಪಕ್ಷಗಳು ಸ್ಟಾರ್ ಪ್ರಚಾರಕರಿಗೆ ಪ್ರಚಾರದ ಓಡಾಟಕ್ಕೆ ಹೆಚ್ಚಿನ ಹೆಲಿಕಾಪ್ಟರ್ಗಳನ್ನು ಒದಗಿಸಲು ಸಿದ್ಧವಾಗುತ್ತಿವೆ. ಒಂದೆಡೆ, ನೆರೆ ರಾಜ್ಯ ತೆಲಂಗಾಣದಲ್ಲಿ ಪ್ರಚಾರದ ಕಾವು ಏರತೊಡಗಿದ್ದರೆ .
ಮುಂದಿನ ಕೆಲವೇ ದಿನಗಳಲ್ಲಿ ಕರ್ನಾಟಕದಲ್ಲಿ ಸಹ ಪ್ರಧಾನಿ ಮೋದಿ ಅವರ ರ್ಯಾಲಿಯೊಂದಿಗೆ ಪ್ರಚಾರದ ಕಾವು ಹೆಚ್ಚಾಗಲಿದೆ. ಸದ್ಯ ತೆಲಂಗಾಣದಲ್ಲಿ ಮುಂಬೈ ಮೂಲದ ವಿಮಾನಯಾನ ಸಂಸ್ಥೆ ಫ್ಲೈಯಿಂಗ್ ಬರ್ಡ್ಸ್ಗೆ ಬೇಡಿಕೆ ಹೆಚ್ಚಿದೆ. ಈ ಸಂಸ್ಥೆಯು 2019 ರಲ್ಲಿ ಅವಳಿ ಎಂಜಿನ್ ಹೆಲಿಕಾಪ್ಟರ್ಗಳಿಗೆ ಗಂಟೆಗೆ 55,000 ರೂ.ನಿಂದ 1.3 ಲಕ್ಷ ರೂ. ವರೆಗೆ ಬಾಡಿಗೆ ನಿಗದಿಪಡಿಸಿತ್ತು. ಸಿಂಗಲ್ ಇಂಜಿನ್ ಹೆಲಿಕಾಪ್ಟರ್ಗಳಿಗೆ ಗಂಟೆಗೆ 1.50 ಲಕ್ಷ ರೂ.ನಿಂದ 1.75 ಲಕ್ಷ ರೂ. ಬೆಲೆ ನಿಗದಿಪಡಿಸಿತ್ತು.
ಗಂಟೆಗೆ ಹೆಲಿಕಾಪ್ಟರ್ ಬಾಡಿಗೆ ಎಷ್ಟು ಗೊತ್ತಾ?
ಈ ಬಾರಿ ಲೋಕಸಭೆ ಚುನಾವಣೆ ಸಂದರ್ಭದಲ್ಲಿ ಬಾಡಿಗೆ ವಿಮಾನ ಮತ್ತು ಹೆಲಿಕಾಪ್ಟರ್ಗಳ ಬೇಡಿಕೆ ಶೇ 40ರಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಹೆಲಿಕಾಪ್ಟರ್ಗಳು ಗ್ರಾಮೀಣ ಪ್ರದೇಶಗಳಿಗೆ ತ್ವರಿತವಾಗಿ ತಲುಪುವ ಸಾಮರ್ಥ್ಯದಿಂದಾಗಿ ಹೆಚ್ಚು ಜನಪ್ರಿಯವಾಗುವ ನಿರೀಕ್ಷೆಯಿದೆ. ಚಾರ್ಟರ್ಡ್ ವಿಮಾನ ಮತ್ತು ಹೆಲಿಕಾಪ್ಟರ್ ಸೇವೆಗಳಿಗೆ ಗಂಟೆಯ ಬಾಡಿಗೆಯಲ್ಲಿ ವ್ಯತ್ಯಾಸವಿದೆ. ಚಾರ್ಟರ್ಡ್ ಏರ್ಕ್ರಾಫ್ಟ್ಗಳಿಗೆ ಗಂಟೆಗೆ 4.5 ಲಕ್ಷದಿಂದ 5.25 ಲಕ್ಷ ರೂಪಾಯಿ ವೆಚ್ಚವಾಗಲಿದ್ದು, ಹೆಲಿಕಾಪ್ಟರ್ಗಳಿಗೆ ಗಂಟೆಗೆ 1.5 ಲಕ್ಷ ರೂಪಾಯಿ ವೆಚ್ಚವಾಗಲಿದೆ ಎಂದು ಉದ್ಯಮ ತಜ್ಞರು ಅಂದಾಜಿಸಿದ್ದಾರೆ.
1.20 ಲಕ್ಷ ಕೋಟಿ ಬಿಸಿನೆಸ್ ನಿರೀಕ್ಷೆ ಈ ಬೇಡಿಕೆಯಿಂದಾಗಿ, ಅನೇಕರು ಈಗಾಗಲೇ ಚಾರ್ಟರ್ಡ್ ವಿಮಾನಗಳು ಮತ್ತು ಹೆಲಿಕಾಪ್ಟರ್ಗಳನ್ನು ಬಾಡಿಗೆಗೆ ಪಡೆದಿದ್ದಾರೆ. ಸದ್ಯ ನಾನ್ ಶೆಡ್ಯೂಲ್ಡ್ ಆಪರೇಟರ್ಸ್ ಪರ್ಮಿಟ್ ಹೊಂದಿರುವ ಸಂಸ್ಥೆಗಳು 3 ರಿಂದ 37 ಆಸನ ಸಾಮರ್ಥ್ಯದೊಂದಿಗೆ 450 ವಿಮಾನಗಳು ಮತ್ತು ಹೆಲಿಕಾಪ್ಟರ್ಗಳನ್ನು ನಿರ್ವಹಿಸುತ್ತವೆ. ಮುಂಬರುವ ಚುನಾವಣೆಯಲ್ಲಿ ಹೆಲಿಕಾಪ್ಟರ್ / ಚಾರ್ಟರ್ಡ್ ವಿಮಾನ ವಹಿವಾಟು 1.20 ಲಕ್ಷ ಕೋಟಿ ರೂ.ಗೆ ತಲುಪುವ ನಿರೀಕ್ಷೆಯಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?