ಬೆಂಗಳೂರು : ಬೆಂಗಳೂರಿನ ಶಾಂತಿನಗರದಲ್ಲಿ ವಾಸವಿರುವ ರಾಜ್ ಕುಮಾರ್ ಎಂಬುವವರ ಮನೆಗೆ ಹಾಡಹಗಲೇ ನುಗ್ಗಿದ ಕಿಡಿಗೇಡಿಗಳು ಮನೆಯ ಕಿಟಕಿ, ಬಾಗಿಲು ಗೋಡೆಗಳನ್ನ ಕಡೆವಿರುವ ಘಟನೆ ನಡೆದಿದೆ. ಮಾಜಿ ಕಾರ್ಪೋರೇಟರ್ ಸೌಮ್ಯ ಶಿವಕುಮಾರ್ ಎಂಬುವವರ ತಂದೆಯವರ ಕಡೆಯಿಂದಲೇ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.
ರಾಜ್ ಕುಮಾರ್ ಕಳೆದ ಕೆಲವು ವರ್ಷಗಳ ಹಿಂದೆ ಒಂದು ಕೋಟಿ 40ಲಕ್ಷಕ್ಕೆ ಮನೆ ಮಾರಾಟ ಮಾಡಿದ್ರು. ಹಣ ಪಾಲುದಾರಿಕೆ ವಿಚಾರದಲ್ಲಿ ಸಂಬಂಧಿಗಳ ನಡುವೆಯೂ ಗಲಾಟೆಯಾಗಿ ಕೇಸ್ ಕೂಡ ದಾಖಲಾಗಿತ್ತು. ಮನೆ ಮಾರಾಟ ಮಾಡಿದ ಮೊತ್ತದಲ್ಲಿ 40 ಲಕ್ಷ ಮಾತ್ರ ಅಡ್ವಾನ್ಸ್ ಆಗಿ ಪಡೆದುಕೊಂಡಿದ್ದರು.
ಬಾಕಿ ಹಣವನ್ನ ಖರೀದಿ ಮಾಡಿದ್ದ ಪಾರ್ಥಸಾರಥಿ ಬಳಿ ಕೇಳಿದಾಗ, ಮನೆ ಮೇಲೆ ಕೇಸಿದೆ ಮೊದಲು ಅದನ್ನ ಕ್ಲಿಯರ್ ಮಾಡಿಕೊಟ್ಟು ನಂತ್ರ ಉಳಿಕೆ ಹಣ ಪಡೆದುಕೊಳ್ಳಿ ಎಂದಿದ್ದರು. ಈ ಪಾರ್ಥಸಾರಥಿ ಮಾಜಿ ಕಾರ್ಪೋರೇಟರ್ ಸೌಮ್ಯ ಶಿವಕುಮಾರ್ ರ ತಂದೆಯಾಗಿದ್ದು, ಇದೀಗ ಏಕಾಏಕಿ ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ಕುರಿತು ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸ್ರು ತನಿಖೆ ನಡೆಸುತ್ತಿದ್ದಾರೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?