Connect with us

Featured

ಧೋನಿ ಟೀಮ್ ಇಂಡಿಯಾ ಕಮ್‌ಬ್ಯಾಕ್ – ಡೀನ್ ಜೋನ್ಸ್ ಭವಿಷ್ಯ ಏನು ಗೊತ್ತಾ?

ರೈಸಿಂಗ್ ಕನ್ನಡ :

ಸ್ಪೋರ್ಟ್ಸ್ ಡೆಸ್ಕ್ :

ಐಪಿಎಲ್ ಡೇಟ್ ಫಿಕ್ಸ್‌ ಆಯ್ತು. ಡೇಟ್ ಕೂಡ ಅನೌನ್ಸ್ ಆಯ್ತು. ಸೆಪ್ಟೆಂಬರ್ 19 ರಿಂದ ಟೂರ್ನಿಯೂ ಆರಂಭವಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಯುಎಇ ಆತಿಥ್ಯವಹಿಸಲಿದೆ ಎಂದು ಐಪಿಎಲ್ ಅಧ್ಯಕ್ಷ ಬ್ರಿಜೇಷ್ ಪಟೇಲ್ ತಿಳಿಸಿದ್ದಾರೆ. ಇನ್ನೂ ಖುಷಿ ವಿಷ್ಯ ಅಂದ್ರೆ, ಈ ಬಾರಿಯ ಐಪಿಎಲ್‌ನೊಂದಿಗೆ ಧೋನಿಯ ಟೀಮ್ ಇಂಡಿಯಾ ಕಮ್‌ಬ್ಯಾಕ್ ಭವಿಷ್ಯವೂ ನಿರ್ಧಾರವಾಗಲಿದೆಯಂತೆ.

ಎಂಎಸ್‌ ಧೋನಿ ಭಾರತ ತಂಡದಲ್ಲಿ ಮುಂದುವರಿಯುತ್ತಾರೋ ಅಥವಾ ಇಲ್ಲವೋ ಅನ್ನೋದನ್ನ ಐಪಿಎಲ್ ನಿರ್ಧರಿಸಲಿದೆ ಎಂದು ಆಸ್ಟ್ರೇಲಿಯಾದ ಮಾಜಿ ಆಲ್‌ರೌಂಡರ್‌ ಡೀನ್‌ ಜೋನ್ಸ್‌ ಅಭಿಪ್ರಾಯಪಟ್ಟಿದ್ದಾರೆ. ಕೊರೊನಾದಿಂದಾಗಿ ಐಪಿಎಲ್‌ ಅತಂತ್ರವಾಗಿತ್ತು. ಇದ್ರೊಂದಿಗೆ ಧೋನಿ ಟೀಮ್ ಇಂಡಿಯಾ ಭವಿಷ್ಯ ಕೂಡ ಡೋಲಾಯಮಾನವಾಗಿತ್ತು. ಆದ್ರೀಗ, ಐಪಿಎಲ್ ನಡೆಯೋದು ಪಕ್ಕಾ ಆಗಿದೆ. ಸೋ, ಧೋನಿ ಭವಿಷ್ಯ ಕೂಡ ಇಲ್ಲೇ ನಿರ್ಧಾರವಾಗಲಿದೆ ಎಂದಿದ್ದಾರೆ ಡೀನ್ ಜೋನ್ಸ್.

ಕಳೆದ ವರ್ಷದ ಏಕದಿನ ವಿಶ್ವಕಪ್‌ನ ಸೆಮೀಸ್‌ನಲ್ಲಿ ಟೀಮ್ ಇಂಡಿಯಾ ನ್ಯೂಜಿಲೆಂಡ್ ವಿರುದ್ಧ ಮುಗ್ಗರಿಸಿತ್ತು. ಧೋನಿ ಟೀಮ್ ಇಂಡಿಯಾದಲ್ಲಿ ಕಾಣಿಸಿಕೊಂಡಿದ್ದು ಅದೇ ಕೊನೆ. ಆದ್ರೀಗ ವಿಶ್ವಕಪ್‌ ಟೂರ್ನಿಯನ್ನು 2022ಕ್ಕೆ ಮುಂದೂಡಲಾಗಿದ್ದು ಆ ಅವಧಿಯಲ್ಲಿ ಐಪಿಎಲ್‌ ಟೂರ್ನಿ ನಡೆಯಲಿದೆ. ಹೀಗಾಗಿ 2021ರಲ್ಲಿ ಭಾರತದ ಆತಿಥ್ಯದಲ್ಲಿ ನಡೆಯಲಿರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಟೀಮ್‌ ಇಂಡಿಯಾ ಪರ ಧೋನಿ ಆಡಬೇಕಾದರೆ ಈ ಬಾರಿಯ ಐಪಿಎಲ್‌ ಮತ್ತು 2021ರ ಐಪಿಎಲ್‌ ಟೂರ್ನಿಗಳಲ್ಲಿ ನೀಡುವ ಪ್ರದರ್ಶನ ನಿರ್ಣಾಯಕವಾಗಲಿದೆ ಎಂದಿದ್ದಾರೆ ಡೀನ್ ಜೋನ್ಸ್.

“ಸದ್ಯಕ್ಕೆ ಟೀಮ್‌ ಇಂಡಿಯಾ ಸೆಲೆಕ್ಟರ್ಸ್‌ ರಿಷಭ್‌ ಪಂತ್‌ ಮತ್ತು ಕೆಎಲ್‌ ರಾಹುಲ್‌ ಅವರನ್ನು ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌ ಸ್ಥಾನಕ್ಕೆ ನೆಚ್ಚಿಕೊಂಡಿದ್ದಾರೆ. ಒಂದು ವೇಳೆ ಧೋನಿ ಐಪಿಎಲ್‌ನಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ಮಾತ್ರವೇ ಅವರಿಗೆ ಟೀಮ್‌ ಇಂಡಿಯಾ ಬಾಗಿಲು ತೆರೆಯಲಿದೆ. ಇಲ್ಲವಾದರೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳಲು ಅವರಿಗೆ ಎಲ್ಲ ಬಾಗಿಲು ಮುಚ್ಚಿದಂತೆ. ಎಲ್ಲಕ್ಕಿಂತ ಹೆಚ್ಚಾಗಿ 40ರ ವಯಸ್ಸಿನಲ್ಲಿ ಕಮ್‌ಬ್ಯಾಕ್‌ ಮಾಡುವುದು ಸುಲಭವಲ್ಲ. ಎಂದು ಡೀನ್‌ ಜೋನ್ಸ್‌ ತಿಳಿಸಿದ್ದಾರೆ.

13ನೇ ಆವೃತ್ತಿಯ ಐಪಿಎಲ್‌ ಟೂರ್ನಿಯು ಸೆಪ್ಟೆಂಬರ್‌ 19ರಿಂದ ನವೆಂಬರ್‌ 8ರವರೆಗೆ 51 ದಿನಗಳ ಕಾಲ ಯುಎಇ ಅಂಗಣದಲ್ಲಿ ನಡೆಯುವುದು ಖಾತ್ರಿಯಾಗಿದೆ. ಎಲ್ಲ ಫ್ರಾಂಚೈಸಿ ತಂಡಗಳು ಆಗಸ್ಟ್‌ 20 ರಿಂದ ತಮ್ಮ ಶಿಬಿರ ಆರಂಭಿಸಲಿವೆ.

Advertisement

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ