Featured
ಅನರ್ಹರನ್ನು ಅಮಿತ್ ಶಾ ಬಾಂಬೆಯಲ್ಲಿ ಇಟ್ಟಿದ್ರು : ಯಡಿಯೂರಪ್ಪ ಸ್ಫೋಟಕ ಆಡಿಯೋ ಬಹಿರಂಗ

ಹುಬ್ಬಳ್ಳಿ : ಮುಖ್ಯಮಂತ್ರಿ ಯಡಿಯೂರಪ್ಪ ಕೊನೆಗೂ ಅತೃಪ್ತರ ವಿಚಾರವಾಗಿ ಸ್ಫೋಟಕ ಸತ್ಯವನ್ನು ಬಯಲು ಮಾಡಿದ್ದಾರೆ. 17 ಅನರ್ಹರ ಬಗ್ಗೆ ಯಡಿಯೂರಪ್ಪ ತೀರ್ಮಾನ ತೆಗೆದುಕೊಂಡಿಲ್ಲ. ರಾಷ್ಟ್ರೀಯ ಅಧ್ಯಕ್ಷರೇ, ಅನರ್ಹ ಶಾಸಕರನ್ನ ಎರಡೂವರೆ ತಿಂಗಳು ಮುಂಬೈನಲ್ಲಿ ಇಟ್ಟಿದ್ರು. ಇದೆಲ್ಲ ನಿಮಗೆ ಗೊತ್ತಿದೆ ತಾನೆ ಎಂದು ಗುಡುಗು ಬಿಜೆಪಿ ಮುಖಂಡರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಇತ್ತೀಚೆಗಷ್ಟೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಬಿಜೆಪಿ ಮುಖಂಡರ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಈ ಕುರಿತು ಮಾತ್ನಾಡಿದ್ದು, ಅವರು ಮಾತ್ನಾಡಿರೋ ಸ್ಫೋಟಕ ಆಡಿಯೋ ಈಗ ಬಿಡುಗಡೆ ಆಗಿದೆ. 17 ಅನರ್ಹ ಶಾಸಕರು, ಎರಡೂವರೆ ಮೂರು ತಿಂಗಳು ಅವರ ಕ್ಷೇತ್ರಕ್ಕೆ ಹೋಗಿಲ್ಲ. ಹೆಂಡತಿ, ಮಕ್ಕಳ ಮುಖ ನೋಡಿಲ್ಲ. ಉಪ ಚುನಾವಣೆ ಏನಾಗುತ್ತೋ ಗೊತ್ತಿಲ್ಲ. ವಿರೋಧ ಪಕ್ಷದಲ್ಲಿ ಬೇಸರಿಂದ ನಮ್ಮನ್ನ ಆಡಳಿತಕ್ಕೆ ತಂದಿದ್ದಾರೆ. ಈಗ ನಅವು ಅವರ ಪರವಾಗಿ ಗಟ್ಟಿಯಾಗಿ ನಿಲ್ಲಬೇಕು ಎಂದು ಅನರ್ಹರ ಬಗ್ಗೆ ಸಹಾನುಭೂತಿ ವ್ಯಕ್ತಪಡಿಸಿದ್ದಾರೆ ಯಡಿಯೂರಪ್ಪ.
ಒಂದು ವೇಳೆ, ನೀವೇ ಅವರ ಜಾಗದಲ್ಲಿ ಇದ್ದಿದ್ರೆ ಹೇಗೆ..? ಇವತ್ತು ನೀವು ಮಾತಾಡಿದ್ದು ನಾಲ್ಕು ಗೋಡೆಗಳ ಮಧ್ಯೆಯೇ ಇರಲಿ. ಲಕ್ಷ್ಮಣ ಸವದಿ ಕೇವಲ 3 ಸಾವಿರ ಮತದಿಂದ ಸೋತಿದ್ದಾರೆ. ಅದರೂ ರಾಜು ಕಾಗೇ ಹೆಸರನ್ನೇ ಹೇಳ್ತೀರಿ..? ಇದು ಎಷ್ಟರ ಮಟ್ಟಿಗೆ ಸರಿ. ನಾನು ಇದನ್ನು ನಿಮ್ಮಿಂದ ನಿರೀಕ್ಷೆ ಮಾಡಿರಲಿಲ್ಲ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.
ನನಗೇನು ಮುಖ್ಯಮಂತ್ರಿಗಿರಿ ಬೇಕಾಗಿಲ್ಲ. ಒಳ್ಳೆಯ ಉದ್ದೇಶಕ್ಕೆ ಬೆಲೆಯ ಇಲ್ಲ. ವಾಸ್ತವ ಸ್ಥಿತಿ ತಿಳಿಯದೇ ನೀವು ಮಾತನಾಡಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಟ್ಟಿನಲ್ಲಿ ಬಿಜೆಪಿ ಮುಖಂಡರ ಸಭೆಯಲ್ಲಿ, ಅತೃಪ್ತ ಬಿಜೆಪಿ ಮುಖಂಡರಿಗೆ ಸರಿಯಾಗಿಯೇ ಕ್ಲಾಸ್ ತೆಗೆದುಕೊಂಡಿರೋ ಯಡಿಯೂರಪ್ಪ, ಅನರ್ಹ ಶಾಸಕರ ಪರ ನಿಂತಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?