Featured
ಅನರ್ಹರ ಕ್ಷೇತ್ರಕ್ಕೆ ಹೋಗಿಯೇ ಹೇಳ್ತೇನೆ, ಮಂತ್ರಿ ಮಾಡ್ತೀವಿ ಎಂದು : ಸಿದ್ದರಾಮಯ್ಯ ದೂರಿಗೆ ಯಡಿಯೂರಪ್ಪ ಟಾಂಗ್

ಬೆಂಗಳೂರು : ಅನರ್ಹ ಶಾಸಕರು ಭಾವಿ ಸಚಿವರು ಎಂದಿದ್ದ ಸಿಎಂ ಯಡಿಯೂರಪ್ಪ ಹೇಳಿಕೆಗೆ ಕಾಂಗ್ರೆಸ್ ಈಗಾಗಲೇ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಇದೇ ವಿಚಾರವಾಗಿ ಮಾತ್ನಾಡಿರೋ ಯಡಿಯೂರಪ್ಪ, ಕಾಂಗ್ರೆಸ್ ದೂರಿಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದು ಕಿಡಿಕಾರಿದ್ದಾರೆ. ಸಿದ್ದರಾಮಯ್ಯ ಆ್ಯಂಡ್ ಟೀಂಗೆ ಕೆಲಸ ಇಲ್ಲ. ನನ್ನ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ ಎಂದ ಯಡಿಯೂರಪ್ಪ, ಅನರ್ಹರ ಕ್ಷೇತ್ರಕ್ಕೆ ಹೋಗಿ, ಇವರನ್ನು ಗೆಲ್ಲಿಸಿ, ಸಚಿವರನ್ನಾಗಿ ಮಾಡ್ತೇನಿ ಅಂತ ಹೇಳ್ತೇನೆ ಎಂದ ಯಡಿಯೂರಪ್ಪ ಸವಾಲು ಹಾಕಿದ್ರು.
ನಿಮ್ಮ ಕ್ಷೇತ್ರದ ಅಭಿವೃದ್ಧಿಗಾಗಿ ಸಚಿವರನ್ನಾಗಿ ಮಾಡ್ತೇನೆ ಎಂದು ಹೇಳ್ತೇನೆ. ಇದರಲ್ಲಿ ತಪ್ಪೇನಿದೆ ಎಂದು ಯಡಿಯೂರಪ್ಪ ಸವಾಲ್ ಹಾಕಿದ್ರು. ಇದೇ ವೇಳೆ, ಅನರ್ಹರನ್ನು ಸೋಲಿಸುವುದೇ ನಮ್ಮ ಗುರಿ ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ನಾನು ಉತ್ತರಿಸಲ್ಲ ಎಂದು ಬಿಎಸ್ವೈ ಹೇಳಿದ್ರು. ರಾಜ್ಯದ ಜನರು ಯಡಿಯೂರಪ್ಪ ಸಿಎಂ ಆಗಿ ಮುಂದುವರೆಯಲು, ನಮಗೆ ಮಣೆ ಹಾಕ್ತಾರೆ. ನಾವೇ ಅಧಿಕಾರದಲ್ಲಿ ಇರ್ತೇವೆ ಎಂದು ಬಿಎಸ್ವೈ ಟಾಂಗ್ ಕೊಟ್ರು..
ಒಟ್ಟಿನಲ್ಲಿ ಉಪ ಚುನಾವಣಾ ಕಣ ರಂಗೇರಿದೆ. ಒಬ್ಬರ ಮೇಲೊಬ್ಬರು ಕೆಸರೆರಚಾಟ ಜೋರಾಗಿಯೇ ನಡೆಸ್ತಿದ್ದಾರೆ. ಡಿಸೆಂಬರ್ 5ರಂದು ಚುನಾವಣೆ ನಡೆಯಲಿದ್ದು, ಡಿಸೆಂಬರ್ 9ರಂದು ಅಭ್ಯರ್ಥಿ ಹಾಗೂ ಯಡಿಯೂರಪ್ಪ ಸರ್ಕಾರದ ಭವಿಷ್ಯವೂ ನಿರ್ಧಾರ ಆಗಲಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?