ರೈಸಿಂಗ್ ಕನ್ನಡ :
ಬೆಂಗಳೂರು :
ಡಿ. ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸುತ್ತಿರೋ ಕಾರ್ಯಕ್ರಮಕ್ಕೆ ಸರ್ವ ರೀತಿಯಲ್ಲೂ ಸಿದ್ಧತೆಗಳು ಪೂರ್ಣಗೊಂಡಿವೆ. ಗುರುವಾರ ಬೆಳಗ್ಗೆ ಸರಿಯಾಗಿ 10.30 ರಿಂದ ಕಾರ್ಯಕ್ರಮದ ಎಲ್ಲ ಚಟುವಟಿಕೆಗಳು ಆರಂಭವಾಗಲಿವೆ. ಪಾಸ್ ಇದ್ದವರಿಗೆ ಮಾತ್ರ ಕಾರ್ಯಕ್ರಮಕ್ಕೆ ಬರೋದಕ್ಕೆ ಅವಕಾಶ. ಉಳಿದ ಕಾರ್ಯಕರ್ಯರು ಸುದ್ದಿವಾಹಿನಿ ಮತ್ತು ಜೂಮ್ ಆ್ಯಪ್ ಮೂಲಕವೇ ಕಾರ್ಯಕ್ರಮವನ್ನ ವೀಕ್ಷಿಸಿ ಆಶೀರ್ವದಿಸಿ ಎಂದು ಡಿಕೆ ಶಿವಕುಮಾರ್ ಮನವಿ ಮಾಡಿದ್ದಾರೆ.
ಇನ್ನೂ ‘ಪ್ರತಿಜ್ಞಾ ದಿನ’ ಕಾರ್ಯಕ್ರಮ ಯಶಸ್ವಿಯಾಗಲೆಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ನೆರವೇರಿದೆ. ಪೂಜೆ ಸಲ್ಲಿಸಿದ ಧರ್ಮಾಧಿಕಾರಿಗಳಾದ ಶ್ರೀ ವೀರೇಂದ್ರ ಹೆಗ್ಗಡೆಯವರು ಕಾರ್ಯದರ್ಶಿ ಕೃಷ್ಣಾ ಸಿಂಗ್ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಪ್ರಸಾದ ತಲುಪಿಸಿದ್ದಾರೆ.
ಮೈಸೂರಿನ ಸುತ್ತೂರು ಮಠದ ಶ್ರೀ ಶಿವರಾತ್ರೀಶ್ವರ ದೇಶಿಕೇಂದ್ರ ಸ್ವಾಮೀಜಿಗಳ ಪರವಾಗಿ ಜೆಎಸ್ ಎಸ್ ಆಡಳಿತಾಧಿಕಾರಿಗಳಾದ ಮಂಜುನಾಥ್ ಅವರು ಬುಧವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ, ಸ್ವಾಮೀಜಿಗಳ ಆಶೀರ್ವಾದ ತಿಳಿಸಿ, ಪ್ರಸಾದ ತಲುಪಿಸಿದ್ದಾರೆ.
ಒಟ್ಟಿನಲ್ಲಿ ಡಿ. ಕೆ. ಶಿವಕುಮಾರ್ ರಾಜ್ಯ ಕಾಂಗ್ರೆಸ್ನ ಸಾರಥಿಯಾಗುತ್ತಿರೋದ್ರೊಂದಿಗೆ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಹುರುಪು ಮತ್ತಷ್ಟು ಹೆಚ್ಚಾಗುತ್ತಿದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?