Featured
ಕರ್ನಾಟಕ ಕಾಂಗ್ರೆಸ್ನಲ್ಲಿ ಹೊಸ ಸಂಚಲನ – ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ ಶಿವಕುಮಾರ್

ರೈಸಿಂಗ್ ಕನ್ನಡ :
ಬೆಂಗಳೂರು :
ಕರ್ನಾಟಕ ಕಾಂಗ್ರೆಸ್ನಲ್ಲೀಗ ಹೊಸ ಅಲೆ. ಅದು ಡಿಕೆ ಶಿವಕುಮಾರ್ ಅನ್ನೋ ಸುನಾಮಿ ಇಡೀ ದೇಶದಲ್ಲಿ ತನ್ನ ಸೃಷ್ಟಿಸಿರೋ ಅಲೆ. ಹೌದು, ರಾಜ್ಯ ಕಾಂಗ್ರೆಸ್ಗೆ ಹೊಸ ಸಾರಥಿಯ ನೇಮಕವಾಗುತ್ತಿದ್ದಂತೆ, ಫುಲ್ ಜೋಷ್ ಬಂದಿದೆ. ರಾಜ್ಯ ಕಾಂಗ್ರೆಸ್ನ ಬಲ ಡಿ.ಕೆ ಶಿವಕುಮಾರ್ ನಾಯಕತ್ವದೊಂದಿಗೆ ಮತ್ತಷ್ಟು ಹೆಚ್ಚಾಗಿದೆ.
ಡಿ.ಕೆ ಶಿವಕುಮಾರ್ ಅವರ ಪ್ರತಿಜ್ಞಾವಿಧಿ ಕಾರ್ಯಕ್ರಮ ಅರ್ಥಪೂರ್ಣವಾಗಿ ನೆರವೇರಿತು. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(ಕೆಪಿಸಿಸಿ) ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸುತ್ತಿದ್ದು, ಪ್ರತಿಜ್ಞಾ ದಿನ ಎಂಬ ವಿಶೇಷ ಕಾರ್ಯಕ್ರಮದ ಮೂಲಕ ಡಿಕೆಶಿ ಕರ್ನಾಟಕ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.
ಇದೇ ವೇಳೆ ರಾಜ್ಯದ ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿಯಾದರು.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಹಾಗೂ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಒಗ್ಗಟ್ಟು ಪ್ರದರ್ಶನಕ್ಕೆ ಈ ವೇದಿಕೆ ಅವಕಾಶ ಕಲ್ಪಿಸಲಿ ಎಂದು ಹಿರಿಯ ಕಾಂಗ್ರೆಸ್ ಮುಖಂಡರು ಆಶಿಸಿದರು.
ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಹಾಗೆ ರಾಜಸ್ತಾನದಿಂದ ರಾಜ್ಯಸಭೆಗೆ ಆಯ್ಕೆಯಾಗಿರೋ ವೇಣುಗೋಪಾಲ್ ಮಾತನಾಡಿದ, ಡಿ.ಕೆ ಶಿವಕುಮಾರ್ರೊಂದಿಗೆ ದೇಶದಲ್ಲಿ ಕಾಂಗ್ರೆಸ್ ಬಲ ಮತ್ತಷ್ಟು ಹೆಚ್ಚಾಗಲಿದೆ ಎಂದರು. ರೈತನ ಮಗನಾಗಿ ಬಂದ ಡಿ.ಕೆ ಶಿವಕುಮಾರ್, ಜನನಾಯಕರಾಗಿ ಬೆಳದ ರೀತಿಯೇ ಅದ್ಭುತ, ಅವರ ಸಾರಥ್ಯದಲ್ಲಿ ಕರ್ನಾಟಕ ಕಾಂಗ್ರೆಸ್ ಯಶಸ್ಸಿನ ಹಾದಿಯಲ್ಲಿ ಸಾಗಲಿದೆ ಎಂದರು. ಅಲ್ಲದೇ ಸಂಕಷ್ಟದ ಪರಿಸ್ಥಿತಿಗಳನ್ನ ಸುಲಲಿತವಾಗಿ ಎದುರಿಸೋ ಜಾಯಮಾನ ಅವರದ್ದು ಎಂದು ಶ್ಲಾಘಿಸಿದರು.

ಪ್ರತಿಜ್ಞಾ ಕಾರ್ಯಕ್ರಮದ ಮುಖ್ಯಾಂಶಗಳು
- ಭಾರತ-ಚೀನಾ ಗಡಿಯಲ್ಲಿ ಸಂಭವಿಸಿದ ಘರ್ಷಣೆಯಲ್ಲಿ ಹುತಾತ್ಮರಾದ 20 ಭಾರತೀಯ ಸೈನಿಕರಿಗೆ ಶ್ರದ್ಧಾಂಜಲಿ.
- ರಾಜ್ಯದಾದ್ಯಂತ ಎಲ್ಲಾ ಕೇಂದ್ರಗಳಲ್ಲಿ ಕೆಪಿಸಿಸಿ ಕಾರ್ಯಕರ್ತರು ಹಾಗೂ ಮುಖಂಡರು ಹುತಾತ್ಮ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
- ವಂದೇ ಮಾತರಂ ಗೀತೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ.
- ಸಂವಿಧಾನದ ಪೂರ್ವ ಪೀಠಿಕೆಯನ್ನು ಒಕ್ಕೊರಲಿನಿಂದ ಪಠಿಸಲಾಯಿತು.
- ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಅಧಿಕೃತವಾಗಿ ಚಾಲನೆ ನೀಡಲಾಯಿತು.
- ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ. ಮಾಜಿ ಕೇಂದ್ರ ಸಚಿವ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಪ್ರಮುಖರಿಂದ ಜ್ಯೋತಿ ಬೆಳಗಿಸುವ ಕಾರ್ಯಕ್ರಮ.
- ಜ್ಯೋತಿ ಬೆಳಗುವಾಗ ಸಾಧುಕೋಕಿಲ ಅವರಿಂದ ಸುಮಧುರ ಹಿನ್ನಲೆ ಸಂಗೀತ
- ಈ ಮೊದಲ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಂದ ಕಾಂಗ್ರೆಸ್ ಧ್ವಜ ಪಡೆದ ಡಿಕೆ ಶಿವಕುಮಾರ್
- ನಂತರದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ ವೇಣುಗೋಪಾಲ್ ಅವರಿಂದ ಭಾಷಣ
You may like
ಪಾಕಿಸ್ತಾನದ ಪರ ಘೋಷಣೆ ಕೂಗಿಲ್ಲ, ಕೂಗಿದ್ದರೆ ಪೊಲೀಸರು ಕ್ರಮ ತಗೋತಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಆತ್ಮ ಸಾಕ್ಷಿ ಮತ ಕೇಳಿದವರೇ ಆತ್ಮ ಸಾಕ್ಷಿ ಮತ ಕೊಟ್ಟಿದ್ದಾರೆ: ಡಿಸಿಎಂ ಡಿ.ಕೆ. ಶಿವಕುಮಾರ್
ಡಿಕೆಶಿ ಮನೆಯಲ್ಲಿ ವಿಶೇಷ ಸಭೆ- ಪಕ್ಷ ಸಂಘಟನೆ ಕುರಿತು ಚರ್ಚೆ
ಕೆಪಿಸಿಸಿ ಅಧ್ಯಕ್ಷರಿಗೆ ಶುಭ ಕೋರಿದ ಮುಖಂಡರು- ಅಭಿಮಾನಕ್ಕಾಗಿ ಬಿಸಿಲಿನಲ್ಲೆ ಕುಳಿತು ಪದಗ್ರಹಣ ವೀಕ್ಷಣೆ
ಕೆಪಿಸಿಸಿಗೆ ನೂತನ ಸಾರಥಿ- ಪದಗ್ರಹಣ ಕಾರ್ಯಕ್ರಮ ಬೀದರ್ನಲ್ಲಿ ಲೈವ್ ವೀಕ್ಷಣೆ
ಸೋನಿಯಾ ಗಾಂಧಿ ತುಂಬಿದ ಧೈರ್ಯದಿಂದ ಆತ್ಮವಿಶ್ವಾಸ ಇಮ್ಮಡಿಯಾಯ್ತು – ಭಾಷಣದಲ್ಲಿ ಭಾವುಕರಾದ ಡಿಕೆಶಿ