ಟಾಪ್ ನ್ಯೂಸ್
ಬೆಂಗಳೂರಿನಲ್ಲಿ ಕುಡಿಯುವ ನೀರಿಗೆ ಭರ

ಬೆಂಗಳೂರು: ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಶಾಸಕರು ಆದ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಶ್ರೀ ಬಿ.ಎಸ್. ಸುರೇಶ(ಬೈರತಿ) ಅವರ ಅಧ್ಯಕ್ಷತೆಯಲ್ಲಿ ಆರ್.ಟಿ.ನಗರದ ಹೆಚ್.ಎಂ.ಟಿ ಮೈದಾನದಲ್ಲಿ ಹೆಬ್ಬಾಳ ವಿಧಾನ ಸಭಾ ಕ್ಷೇತ್ರದ ಜನಸ್ಪಂದನ ಕಾರ್ಯಕ್ರಮ ಜರುಗಿತು.
ರಾಜ್ಯ ಸರ್ಕಾರದ ಪಂಚ ಖಾತ್ರಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲಾಗಿದೆ. ಅದರ ಸದುಪಯೋಗ ಪಡಿಸಿಕೊಳ್ಳಲು ನೆರೆದಿದ್ದ ಜನರಿಗೆ ಸಚಿವರಾದ ಶ್ರೀ ಬೈರತಿ ಸುರೇಶ ಅವರು ಕರೆ ನೀಡಿದರು.
ಅಲ್ಲದೇ ಕ್ಷೇತ್ರದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಹವಾಲು ಬಂದಾಗ, ಬೇಸಿಗೆ ಮುಗಿಯುವ ವರೆಗೂ ಕ್ಷೇತ್ರದಾದ್ಯಂತ 8 ಟ್ಯಾಂಕರ್ ಗಳನ್ನು ಒದಗಿಸಲಾಗಿದೆ. ಕಡಿಮೆ ಬಂದಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಒದಗಿಸಲಾಗುತ್ತದೆ ಎಂದು ಸಚಿವರಾದ ಶ್ರೀ ಬೈರತಿ ಸುರೇಶ ಅವರು ತಿಳಿಸಿದರು.
ಬೆಂಗಳೂರು ಜಲ ಮಂಡಲಿ ಅಧ್ಯಕ್ಷರಾದ ರಾಮ್ ಪ್ರಸಾದ್, ಬಿಬಿಎಂಪಿ ಅಪರ ಆಯುಕ್ತರಾದ ಆರ್.ಸ್ನೇಹಾಲ್, ಬಿಬಿಎಂಪಿ ಜಂಟಿ ಆಯುಕ್ತರಾದ ಪಲ್ಲವಿ, ಉಪ ಪೋಲಿಸ್ ಆಯುಕ್ತರು, ಆರೋಗ್ಯ ವೈದ್ಯಾಧಿಕಾರಿ, ಬೆಸ್ಕಾಂ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಬಿಎಂಟಿಸಿ, ಆಹಾರ ಇಲಾಖೆ ಸೇರಿದಂತೆ ಕೆಲ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?