ಬೆಂಗಳೂರು : ಶಿಕ್ಷಣ ಇಲಾಖೆ ಎಡವಟ್ಟಿನ ಮೇಲೆ ಎಡವಟ್ಟು ಮಾಡಿಕೊಳ್ಳುತ್ತಲೇ ಇದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ವಸತಿ ಶಾಲೆಗಳ ಪ್ರವೇಶದ್ವಾರದ ಮೇಲೆ ಹಾಕಲಾಗಿದ್ದ ಕೈಮುಗಿದು ಬನ್ನಿ ಘೋಷವಾಕ್ಯದ ಬದಲಾಗಿ ಧೈರ್ಯವಾಗಿ ಪ್ರಶ್ನಿಸಿ ಎಂದು ಬದಲಾವಣೆ ವಿವಾದ ಸೃಷ್ಟಿ ಮಾಡಿದ್ದಾರೆ.
ಸಾರ್ವಜನಿಕರ ಆಕ್ರೋಶ, ಖಂಡನೆ ವ್ಯಕ್ತವಾಗುತ್ತಿದಂತೆ , ಯುಟರ್ನ್ ಹೊಡೆದ ಸರ್ಕಾರ ಹಾಗೆ ಆದೇಶ ನೀಡಿಲ್ಲ ಎಂದು ಸ್ವಷ್ಟಪಡಿಸಿ ಮತ್ತೆ ಯಥಾಸ್ಥಿತಿ ಘೋಷವಾಕ್ಯ ಬರೆಸಿತು. ಅದಾದ ಮೆಲೆ ಮತ್ತೆ ಸರ್ಕಾರ ಖಾಸಗಿ ಶಾಲೆಗಳಲ್ಲಿ ಇನ್ನುಮುಂದೆ ನಾಡಗೀತೆ ಕಡ್ಡಾಯವಲ್ಲ ಎಂಬಂತ ಹೇಳಿಕೆ ನೀಡಿ ಆದೇಶ ಹೊರಡಿಸಿತು. ಇದೀಗ ಹತ್ತನೇ ತರಗತಿ ಪರೀಕ್ಷೇ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆ ತರಬೇಕೆಂದು ಮೌಖಿಕ ಸೂಚನೆ ನೀಡಿ ಶಿಕ್ಷನ ಇಲಾಖೆ ಮತ್ತೊಂದು ಎಡವಟ್ಟು ಮಾಡಿಕೊಂಡಿದೆ.
ಇತ್ತೀಚೆಗೆ ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50ರೂ, ವಸೂಲಿ ಮಾಡಿದ್ದ ಸರ್ಕಾರ, ಪರೀಕ್ಷೆ ಶುಲ್ಕ ವಸೂಲಿ ಮಾಡಿದ್ದಲ್ಲದೇ ಇದೀಗ ಹತ್ತನೇ ತರಗತಿಗೆ ನಡೆಯುವ ಪೂರ್ವಸಿದ್ದತಾ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪತ್ರಿಕೆಗಳನ್ನ ತರುವಂತೆ ಶಾಲೆಯಿಂದ ಮೌಖಿಕ ಸೂಚನೆ ನೀಡಿದೆ. ಈ ಸಂಬಂಧ ಖಾಸಗಿ ಶಾಲೆಗಳ ಒಕ್ಕೂಟ ರುಪ್ಸಾ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಪ್ರತಿಕ್ರಿಯಿಸಿದ್ದು, ಮಕ್ಕಳಿಂದ ಉತ್ತರ ಪತ್ರಿಕೆ ತರುವಂತೆ ಹೇಳಿರುವ ಶಿಕ್ಷಣ ಇಲಾಖೆ ನಡೆಯುನ್ನು ಖಂಡಿಸಿದ್ದಾರೆ.
ಪರೀಕ್ಷೆ ವೆಚ್ಚವೆಂದು ವಿದ್ಯಾರ್ಥಿಗಳಿಂದ 50ರೂ . ವಸೂಲಿ ಮಾಡಿದ್ದಲ್ಲದೆ ಈಗ ಪತ್ರಿಕೆಗಳನ್ನ ವಿದ್ಯಾರ್ಥಿಗಳೇ ತರಬೇಕು ಎಂದಿರುವುದು ಎಷ್ಟು ಸರಿ.? ಎಂದು ಪ್ರಶ್ನಿಸಿದ್ದಾರೆ. ಪರೀಕ್ಷೆ ವೇಳೆ ಲಾಭ ಮಾಡಿಕೊಳ್ಳುವ ಉದ್ದೇಶದಿಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ರೀತಿ ಮಾಡುತ್ತಿದ್ದಾರೆ ಎಂದು ನನಗನಿಸುತ್ತಿದೆ ಅನುಮಾನ ವ್ಯಕ್ತಪಡಿಸಿದ್ದಾರೆ. ಪೂರ್ವಸಿದ್ದತೆ ಪರೀಕ್ಷೆಗೆ ವಿದ್ಯಾರ್ಥಿಗಳೇ ಉತ್ತರ ಪರ್ತಿಕೆ ತರಬೇಕೆಂದು ಶಾಲೆಗಳಿಗೆ ಕೊಟ್ಟಿರುವ ಮೌಖಿಕ ಆದೇಶ ವಾಪಸ್ ಪಡೆಯುವಂತೆ ಒತ್ತಾಯಿಸಿದ್ದಾರೆ.
ಶಿಕ್ಷಣ ಇಲಾಖೆ ಒಂದಾದ ಮೇಲೊಂದು ವಿವಾದ ಮೈಮೇಲೆ ಎಳೆದುಕೊಳ್ಳುತ್ತಿದೆ. ಮೊದಲಿಗೆ ಏನೋ ಮಾಡಲು ಹೋಗುತ್ತೆ. ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿ ಯುಟರ್ನ್ ಹೊಡೆಯುತ್ತೆ. ಇದೀಗ ವಿದ್ಯಾರ್ಥಿಗಳಿಂದ ಉತ್ತರ ಪರ್ತಿಕೆ ತರುವ ಮೌಖಿಕ ಆದೇಶವೂ ಸಹ ಸಾರ್ವಜನಿಕರ ಅಥವಾ ಪೋಕ್ಷಕರ ಆಕ್ರೋಶಕ್ಕೆ ಗುರಿಯಾಗುವ ಸಾಧ್ಯತೆ ಇದೆ.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?