Featured
ಕ್ಷಮೆ ಕೋರಿದ ಹೆಚ್.ಡಿ. ಕುಮಾರಸ್ವಾಮಿ : ಭಾವುಕರಾಗಿ ಕಣ್ಣೀರು ಹಾಕಿದ ದೇವೇಗೌಡ, ಜೆಡಿಎಸ್ ಭಿನ್ನಮತ ಶಮನ..!

ಬೆಂಗಳೂರು : ನನ್ನಿಂದ ತಪ್ಪಾಗಿದ್ದರೆ. ನಿಮ್ಮ ಮನಸ್ಸು ನೊಂದಿದ್ದರೆ ನಾನು ಕ್ಷಮೆ ಕೋರುತ್ತೇನೆ. ಹೀಗೆಂದವರು ಮಾಜಿ ಸಿಎಂ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ. ಕಳೆದ ವಾರವಷ್ಟೇ ಮಾಧ್ಯಮ ಸಂವಾದದಲ್ಲಿ ತಮ್ಮ ರೋಗ ಏನು ಅಂದ್ರೆ, ಚಿಕಿತ್ಸೆ ಕೊಡಬಹುದು ಎಂದು ಅವಮಾನಿಸಿದ್ದ ಹೆಚ್ಡಿಕೆ, ಈಗ ಕ್ಷಮೆ ಕೋರಿದ್ದಾರೆ.
ಎಚ್ಡಿ ಕುಮಾರಸ್ವಾಮಿ ಹಾಗೂ ದೇವೇಗೌಡ ಸಮ್ಮುಖದಲ್ಲಿ ಮಂಗಳವಾರ ಬರೋಬ್ಬರಿ ನಾಲ್ಕು ಗಂಟೆಗಳ ಕಾಲ ಸುದೀರ್ಘ ಸಭೆ ನಡೀತು. ಈ ವೇಳೆ, ನಾನು ಸಿಎಂ ಆಗಿದ್ದಾಗ ೨೪ ಗಂಟೆಯೂ ಒತ್ತಡದಲ್ಲಿ ಇರುತ್ತಿದ್ದೆ. ಶಾಸಕರು, ಸಚಿವರು ಮತ್ತು ಅಧಿಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡಬೇಕಿತ್ತು. ಈ ಸಂದರ್ಭದಲ್ಲಿ ನಿಮ್ಮನ್ನು ಕಡೆಗಣನೆ ಮಾಡಿದ್ದರೆ ಇದಕ್ಕೆ ಕ್ಷಮೆ ಕೋರುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇಷ್ಟೇ ಅಲ್ಲದೆ, ಇನ್ಮುಂದೆ ಹೆಚ್.ಡಿ. ದೇವೇಗೌಡರ ಅಣತಿಯಂತೆ ಎಲ್ಲರೂ ಒಟ್ಟಾಗಿ ಕೆಲಸ ಮಾಡೋಣ ಎಂದು ಹೆಚ್ಡಿಕೆ ಹೇಲಿದ್ದಾರೆ. ಈ ವೇಳೆ, ಮಧ್ಯೆ ಪ್ರವೇಶ ಮಾಡಿ ಎಲ್ಲರನ್ನೂ ಕೈ ಮುಗಿದು ಕೇಳಿಕೊಂಡ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಸಣ್ಣ ಮನಸ್ತಾಪದಿಂದ ನಾವು ಪ್ರಾದೇಶಿಕ ಪಕ್ಷವನ್ನು ಹಾಳು ಮಾಡುವುದು ಬೇಡ. ನಮ್ಮನ್ನು ನಂಬಿ ಸಾವಿರಾರು ಕಾರ್ಯಕರ್ತರು ಇದ್ದಾರೆ. ಕುಮಾರಸ್ವಾಮಿಗೆ ನಾನು ಬುದ್ಧಿ ಹೇಳುತ್ತೇನೆ. ಮುಂದೆ ಹೀಗೆ ಆಗದಂತೆ ನಾನು ಭಾಷೆ ಕೊಡ್ತೀನಿ ಎಂದು ಸಭೆಯಲ್ಲಿ ಭಾವುಕರಾದ್ರು.
ಬೆಂಗಳೂರಿನ ಪದ್ಮನಾಭನಗರದ ಮನೆಯಲ್ಲಿ ನಡೆದ ಸಭೆಯಲ್ಲಿ ಬಸವರಾಜ್ ಹೊರಟ್ಟಿ, ಮರಿತಿಬ್ಬೇಗೌಡ ಸೇರಿದಂತೆ 15 ಪರಿಷತ್ ಸದಸ್ಯರು ಉಪಸ್ಥಿತರಿದ್ರು. ಆದ್ರೆ, ರಮೇಶ್ ಗೌಡ ಮತ್ತು ಬಿ.ಎಂ.ಫಾರೂಕ್ ಗೈರಾಗಿದ್ರು. ದೊಡ್ಡಗೌಡರ ಮಾತಿಗೆ, ಎಚ್ಡಿಕೆ ಕ್ಷಮೆಗೆ ಬೆಲೆ ನೀಡಿ ಪಕ್ಷದ ಸಂಘಟನೆಗೆ ಮುಂದಾಗುತ್ತೇವೆ ಎಂದು ಮೇಲ್ಮನೆ ಸದಸ್ಯರು ಪ್ರಮಾಣ ಮಾಡಿದ್ರು. ಅಲ್ಲಿಗೆ ಜೆಡಿಎಸ್ ಭಿನ್ನಮತ ಒಂದು ಹಂತಕ್ಕೆ ಶಮನವಾಗಿದೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?