Connect with us

Featured

ಸಿದ್ದರಾಮಯ್ಯ ಕನ್ನಡ ಪ್ರೇಮ ನೋಡಿ : ಕನ್ನಡಿಗರಿಗೆ ಸಿದ್ದು ಸಂದೇಶ ಇಲ್ಲಿದೆ ನೋಡಿ..

ರೈಸಿಂಗ್ ಕನ್ನಡ : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯಗೆ ಕನ್ನಡದ ಮೇಲೆ ಇನ್ನಿಲ್ಲದ ಪ್ರೀತಿ. ಸಿಎಂ ಆಗಿದ್ದಾಗಲು ಕನ್ನಡ, ಕನ್ನಡ ಭಾಷೆ, ನಾಡು ನುಡಿ ಅಂದ್ರೆ, ಎಲ್ಲಿಲ್ಲದ ಪ್ರೀತಿ, ಪ್ರೇಮ.. ಹೀಗಾಗಿಯೇ, ಎಲ್ಲವೇ ಹೋದ್ರೂ ತಾವು ಕನ್ನಡದಲ್ಲೇ ಮಾತನಾಡ್ತಿದ್ರು. ಕನ್ನಡ ಬರಲ್ಲ ಅಂದ್ರೆ, ಕನ್ನಡ ಕಲೀರಿ ಎಂದು ಧೈರ್ಯವಾಗಿ ಯಾವುದೇ ಅಂಜಿಕೆ ಇಲ್ಲದೇ ಪತ್ರಕರ್ತರು ಸೇರಿದಂತೆ ಎಲ್ಲರಿಗೂ ಹೇಳ್ತಿದ್ರು.

ಇದೀಗ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ನಾಡಜನತೆಗೆ ಸಿದ್ದು ಕನ್ನಡ ಸಂದೇಶವನ್ನ ರವಾನಿಸಿದ್ದಾರೆ. ಸಿದ್ದರಾಮಯ್ಯ ಸಂದೇಶ ಏನಿದೆ ಅಂತ ನೀವೇ ನೋಡಿ..

  • ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕರ್ನಾಟಕದ ಸಮಸ್ತ ಕನ್ನಡ ಬಂಧುಗಳಿಗೆ ತುಂಬು ಹೃದಯದ ಶುಭಾಶಯಗಳು.
  • ಹರಿದು ಹಂಚಿಹೋಗಿರುವ ಕನ್ನಡಿಗರು ಕನ್ನಡ ಎಂಬ ಕರುಳಬಳ್ಳಿಯ ಮೂಲಕ ಒಗ್ಗೂಡಿದ ಹೆಮ್ಮೆಯ ದಿನ ಇಂದು.
  • ಕನ್ನಡದ ಕನಸು ಸಾಕಾರಗೊಳ್ಳಲು  ಶ್ರಮಿಸಿದ ಲಕ್ಷಾಂತರ ಕನ್ನಡ ಹೋರಾಟಗಾರರು,ಸಾಹಿತಿಗಳು, ಕಲಾವಿದರ ಶ್ರಮ, ತ್ಯಾಗ,ಬಲಿದಾನಗಳನ್ನು ಸ್ಮರಿಸುವ ದಿನ ಕೂಡಾ ಹೌದು.
  • ಇದು ನಾಡು-ನುಡಿಯ ಬಗ್ಗೆ ನಮಗಿರುವ ಬದ್ದತೆಯ ಆತ್ಮಾವಲೋಕನ ಮಾಡಿಕೊಳ್ಳುವ ಕಾಲವೂ ಹೌದು.
  • ನಮ್ಮ ಕನ್ನಡ ಪ್ರೇಮ, ಕನ್ನಡ ರಾಜ್ಯೋತ್ಸವ ಆಚರಣೆಯ ನವಂಬರ್ ತಿಂಗಳಿಗೆ ಸೀಮಿತವಾಗಬಾರದು. ಕನ್ನಡವನ್ನು ಕಟ್ಟುವ,ಬೆಳೆಸುವ ಉಳಿಸುವ ಕಾಯಕ ನಿತ್ಯ ನಿರಂತರವಾದುದು.
  • ಕನ್ನಡ ಸೇವೆಯನ್ನು ಸರಕಾರವೋ, ಇನ್ನಾರೋ ಮಾಡಲಿ ಎಂಬ ಮನೋಭಾವ ಬೇಡ. ನಾನೇ ಕನ್ನಡದ ಕೆಲಸ ಮಾಡಬೇಕು, ಕನ್ನಡದ ಭಾಷೆ, ಸಂಸ್ಕøತಿ, ನೆಲ,ಜಲದ ಹಿತವನ್ನು ಕಾಯಬೇಕು ಎಂಬ ಸಂಕಲ್ಪವನ್ನು ಇಂದಿನ ದಿನ ನಾವೆಲ್ಲರೂ ಕೈಕೊಳ್ಳಬೇಕಾಗುತ್ತದೆ.
  • ಕನ್ನಡದ ಭಾಷೆಗೆ ತನ್ನದೇ ಆಗಿರುವ ಅಸ್ಮಿತೆಯಿದೆ. ಅದು ಬಹುತ್ವವನ್ನು ಗೌರವಿಸುವ ಮತ್ತು ಒಕ್ಕೂಟದ ಹಿತವನ್ನು ಕಾಯುವ ಆಶಯವನ್ನು ಹೊಂದಿದೆ.
  • ಇದು ಪಂಪನಿಂದ ಕುವೆಂಪು ವರೆಗೆ ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಬೆಳೆದುಬಂದಿರುವ ಜೀವನದರ್ಶನ. ಇದನ್ನೇ ಪಂಪ ‘’ಮಾನವ ಕುಲ ತಾನೊಂದೇ ವಲಂ’’ ಎಂದು ಹೇಳಿದ್ದು.
  • ನಮ್ಮದು ಬಹುತ್ವದ ವ್ಯವಸ್ಥೆ. ಇಲ್ಲಿ ಬಹುಭಾಷೆಗಳಿವೆ, ಬಹುಸಂಸ್ಕøತಿಗಳಿವೆ. ಈ ಎಲ್ಲಾ ಸಮುದಾಯಗಳು ತಮ್ಮ  ಅನನ್ಯತೆಯನ್ನು ಉಳಿಸಿಕೊಂಡೇ ಸಂವಿಧಾನಬದ್ಧವಾದ ಗಣತಂತ್ರ ವ್ಯವಸ್ಥೆಯನ್ನು ಗೌರವಿಸುತ್ತಾ ಬದುಕನ್ನು ಕಟ್ಟಿಕೊಂಡಿವೆ.
  • ಭಾಷೆಯ ಅಳಿವು ಎಂದರೆ ಸಂಸ್ಕøತಿ ಮತ್ತು ಸಮುದಾಯದ ಅಳಿವು ಕೂಡಾ ಆಗಿರುತ್ತದೆ. ಇಂಗ್ಲೀಷ್, ಹಿಂದಿ ಇರಲಿ, ಇಲ್ಲವೇ ಬೇರೆ ಯಾವುದೇ ಭಾಷೆ ಇರಲಿ. ನಮ್ಮ ಮೇಲೆ ಆಧಿಪತ್ಯವನ್ನು ಮೆರೆಯುವುದನ್ನು ಸಹಿಸಲಾಗದು.
  • ಇಲ್ಲಿ ಕನ್ನಡವೇ ಸಾರ್ವಭೌಮ ಭಾಷೆ.
  • ನಾನು ಮುಖ್ಯಮಂತ್ರಿಯಾಗಿದ್ದಾಗ ಕನ್ನಡಿಗರೆಲ್ಲರೂ ಧಾರೆಯೆರೆದ ಬೆಂಬಲದ ಬಲದಿಂದ ನೆಲ-ಜಲ-ಭಾಷೆಯ ರಕ್ಷಣೆ-ಪೋಷಣೆಯ ವಿಚಾರದಲ್ಲಿ ದಿಟ್ಟ ನಿರ್ಧಾರಗಳನ್ನು ಕೈಗೊಳ್ಳಲು ಸಾಧ್ಯವಾಯಿತು.
  • ಕನ್ನಡ ಶಾಲೆಗಳ ರಕ್ಷಣೆ, ಹಿಂದಿ ಹೇರಿಕೆಗೆ ವಿರೋಧ, ನಾಡಧ್ವಜದ ಬಗೆಗಿನ ಒಕ್ಕೊರಲಿನ ಬೇಡಿಕೆ…. ಹೀಗೆ ಕನ್ನಡಿಗರೆಲ್ಲರ ದನಿಗೆ ನಾನು ದನಿಗೂಡಿಸಿದ ತೃಪ್ತಿ ನನಗಿದೆ.
  • ಉದ್ಯೋಗ ಎನ್ನುವುದು ಇತ್ತೀಚಿನ ದಿನಗಳಲ್ಲಿ ಕನ್ನಡಿಗ ಯುವಕ-ಯುವತಿಯರು ಎದುರಿಸುವ ಮುಖ್ಯ ಸಮಸ್ಯೆಯಾಗಿದೆ.
  • ಖಾಸಗಿ ಕ್ಷೇತ್ರಗಳಲ್ಲಿನ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಸಿಗಬೇಕಾದ ನ್ಯಾಯದ ಪಾಲು ಸಿಗುತ್ತಿಲ್ಲ ಎನ್ನುವ ಅಸಮಾಧಾನ ಕನ್ನಡಿಗರಲ್ಲಿದೆ.
  • ರಾಜ್ಯದಲ್ಲಿ ಸ್ಥಾಪಿತವಾಗುವ ಕೇಂದ್ರದ ಉದ್ಯಮಗಳಲ್ಲಿ ಕೂಡಾ ಇದೇ ಸ್ಥಿತಿ ಇದೆ. ಒಂದು ಹಂತದವರೆಗಿನ ನೇಮಕಾತಿಯಲ್ಲಿ ಸ್ಥಳೀಯರನ್ನೇ ಪರಿಗಣಿಸಬೇಕಾದ ಅಗತ್ಯ ಇದೆ.
  • ನಮ್ಮ ಯುವಜನರ ಭವಿಷ್ಯ ರೂಪಿಸುವ ದೃಷ್ಟಿಯಿಂದ ಈ ಹೋರಾಟವನ್ನು ಪಕ್ಷಭೇಧ ಮರೆತು ಎಲ್ಲರೂ ಒಗ್ಗೂಡಿ ನಡೆಸಬೇಕಾದ ಅಗತ್ಯ ಇದೆ.
  • ಇಂತಹದ್ದೊಂದು ಸಂಕಲ್ಪದ ಮೂಲಕವೇ ಈ ಬಾರಿಯ ರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲು ಮುಂದಾಗೋಣ.
  • ಮತ್ತೊಮ್ಮೆ ನಾಡ ಬಾಂಧವರಿಗೆಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

ಜೈ ಹಿಂದ್, ಜೈ ಕರ್ನಾಟಕ.

ಬೆಂಗಳೂರು8 months ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್8 months ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು8 months ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು8 months ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು8 months ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು8 months ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು8 months ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು8 months ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು8 months ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured4 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured5 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured4 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured2 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ6 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured5 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured5 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured5 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured11 months ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured2 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ