Featured
ಹರಿಹರ ವಿಧಾನ ಸಭಾ ಕ್ಷೇತ್ರದ ಮಾಜಿ ಸಚಿವ ಡಾ. ವೈ. ನಾಗಪ್ಪ ನಿಧನ
ರೈಸಿಂಗ್ ಕನ್ನಡ:
ದಾವಣಗೆರೆ:
ಮಾಜಿ ಸಚಿವ ಡಾ. ವೈ ನಾಗಪ್ಪ (87) ಮಂಗಳವಾರ ಬೆಳಗ್ಗೆ 8.02 ಕ್ಕೆ ನಿಧನ ಹೊಂದಿದ್ದಾರೆ.
ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ನಿಧನ ಹೊಂದಿದ್ದಾರೆ. ಹರಿಹರ ವಿಧಾನ ಸಭಾ ಕ್ಷೇತ್ರದಲ್ಲಿ 1989. 1999 ಹಾಗೂ 2004 ಸೇರಿದಂತೆ ಒಟ್ಟು ಮೂರು ಶಾಸಕರಾಗಿ 2004 ರಲ್ಲಿ ಕಾಂಗ್ರೆಸ್ – ಜೆಡಿಎಸ್ ಧರ್ಮಸಿಂಗ್ ಸಚಿವ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.
2008 ರಲ್ಲಿ ಮತ್ತೆ ಹರಿಹರ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡರು. ನಂತರ ಬದಲಾದ ರಾಜಕೀಯದಿಂದ ಮತ್ತು ಅನಾರೋಗ್ಯದಿಂದ ರಾಜಕಾರಣದಿಂದ ತೆರೆಮರೆಗೆ ಸರಿದ ಡಾ. ವೈ ನಾಗಪ್ಪ ಹರಿಹರ ತಾಲೂಕಿನಲ್ಲಿ ಶೋಷಿತ ಜನಾಂಗಗಳ ನಾಯಕರಾಗಿ ಧ್ವನಿಯಾಗಿದ್ದವರು.
ಡಾ. ವೈ ನಾಗಪ್ಪನವರ ರಾಜಕಾರಣಕ್ಕೆ ಬಂದಿದ್ದು ಒಂದು ಆಕಸ್ಮಿಕ 1980 ರಲ್ಲಿ ಹರಿಹರ ತಾಲ್ಲೂಕು ಆಸ್ಪತ್ರೆಯಲ್ಲಿ ವೈದ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾಗ, ಆಗ ಶಾಸಕರಾಗಿದ್ದ ಎಚ್. ಶಿವಪ್ಪ ಇವರನ್ನು ಪದೇ ಪದೇ ವರ್ಗಾವಣೆ ಮಾಡಿಸಿದಾಗ ಇದಕ್ಕೆ ಬೇಸತ್ತು ಹಾಲಿ ಶಾಸಕನಿಗೆ ಸೆಡ್ಡು ಹೊಡೆದು ನೀನು ಮನಸ್ಸು ಮಾಡಿದರೆ ಡಾಕ್ಟರ್ ಆಗೋದಕ್ಕೆ ಆಗಲ್ಲ. ಆದರೆ ನಾನು ಮನಸ್ಸು ಮಾಡಿದರೆ ಎಂಎಲ್ಎ ಆಗುತ್ತೇನೆ ಎಂದು ರಾಜಕಾರಣಕ್ಕೆ ಧುಮುಕಿ ಅದೇ ಎಚ್. ಶಿವಪ್ಪ ವಿರುದ್ಧ ಮೂರು ಬಾರಿ ಶಾಸಕರಾಗಿ ಮಂತ್ರಿಗಳಾಗಿ ಕಾರ್ಯನಿರ್ವಹಿಸಿ ಹರಿಹರ ವಿಧಾನ ಸಭಾ ಕ್ಷೇತ್ರದ ಅಭಿವೃದ್ದಿ ಪರ್ವದೊಂದಿಗೆ ಶೋಷಿತ ತುಳಿತಕ್ಕೆ ಒಳಗಾದ ಜನರ ಮತ್ತು ಅಲ್ಪಸಂಖ್ಯಾತರ ಮನಸ್ಸುಲ್ಲಿ ಹಚ್ಚಾಗಿ ಉಳಿದಿದ್ದಾರೆ.
ಮೃತರು ಒಬ್ಬ ಪುತ್ರ ಮೂವರು ಹೆಣ್ಣುಮಕ್ಖಳು ಮೊಮ್ಮಕ್ಕಳು ಹಾಗೂ ಅಪಾರ ಅಭಿಮಾನಿ ಬಳಗವನ್ನು ಅಗಲಿದ್ದಾರೆ.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?