Featured
ಐದು ತಿಂಗಳ ಬಳಿಕ ಅಣ್ಣಾಮಲೈ ರಾಜೀನಾಮೆ ಅಂಗೀಕಾರ. ರಾಜಕೀಯ ಸೇರ್ತಾರಾ..?

ಬೆಂಗಳೂರು : ಖಡಕ್ ಐಪಿಎಸ್ ಅಧಿಕಾರಿ ಅಂತಲೇ ಖ್ಯಾತಿ ಗಳಿಸಿದ್ದ ಅಣ್ಣಾಮಲೈ ರಾಜೀನಾಮೆ ಕೊನೆಗೂ ಅಂಗೀಕಾರವಾಗಿದೆ. ಮೇ 28ರಂದು ಐಪಿಎಸ್ ಹುದ್ದೆಗೆ ಅಣ್ಣಾಮಲೈ ರಾಜೀನಾಮೆ ಸಲ್ಲಿಸಿದ್ದರು. ಬುಧವಾರ ಕೇಂದ್ರ ಗೃಹ ಇಲಾಖೆಯಿಂದ ರಾಜೀನಾಮೆ ಅಂಗೀಕಾರ ಆಗಿದೆ.
ಬೆಂಗಳೂರಿನ ದಕ್ಷಿಣ ವಿಭಾಗದ ಡಿಸಿಪಿಯಾಗಿ ಕರ್ತವ್ಯ ನಿರ್ವಹಿಸಿದ್ದ ಅಣ್ಣಾಮಲೈ ದಿಢೀರ್ ಅಂತ ಮೇ 28ರಂದು ರಾಜೀನಾಮೆ ನೀಡಿದ್ರು. ಅಣ್ಣಾಮಲೈ ರಾಜೀನಾಮೆಯಿಂದ ಹಲವು ಊಹಾಪೋಹಗಳು, ಅನುಮಾನಗಳು ತಲೆ ಎತ್ತಿದ್ದವು. ರಾಜ್ಯ ಅಥವಾ ಕೇಂದ್ರ ಸರ್ಕಾರ ವಿರುದ್ಧ ಬೇಸತ್ತು ಅಣ್ಣಾಮಲೈ ರಾಜೀನಾಮೆ ನೀಡಿದ್ದಾರೆ ಅಂತ ಕೆಲವರು ವಾದ ಮಾಡಿದ್ರು. ಇದಾದ್ಮೇಲೆ ಅಣ್ಣಾಮಲೈ ಬಿಜೆಪಿ ಸೇರ್ತಾರೆ. ತಮಿಳುನಾಡಿನಲ್ಲಿ ಬಿಜೆಪಿಯ ಯುವ ನೇತಾರನಾಗಿ ಹೊರ ಬರ್ತಾರೆ ಅನ್ನೋ ಮಾತು ಕೇಳಿ ಬರ್ತಿದೆ.
ಈಗಲೂ ಕೂಡ ಅಣ್ಣಾಮಲೈ ಮುಂದೇನು ಮಾಡ್ತಾರೆ ಅನ್ನೋದರ ಬಗ್ಗೆ ಕ್ಲಾರಿಟಿ ಇಲ್ಲ. ಈ ಹಿಂದೆ ಸಂದರ್ಶನವೊಂದರಲ್ಲಿ ಕೃಷಿ ಮಾಡೋದಾಗಿ ಅಣ್ಣಾಮಲೈ ಹೇಳಿದ್ರು. ಆದ್ರೆ, ಬಲ್ಲ ಮೂಲಗಳ ಪ್ರಕಾರ ಡಿಎಂಕೆ ಪಕ್ಷ ಸೇರ್ತಾರೆ ಎನ್ನಲಾಗಿದೆ. ಕೆಲವು ಮೂಲಗಳು ಹೇಳುವ ಪ್ರಕಾರ ಆರ್ಎಸ್ಎಸ್ ಜೊತೆ ಸೇರಿ ತಮಿಳುನಾಡಿನಲ್ಲಿ ಬಿಜೆಪಿ ಸ್ಟ್ರಾಂಗ್ ಮಾಡುವತ್ತ ಅಣ್ಣಾಮಲೈ ಸಹಾಯ ಮಾಡ್ತಾರೆ ಎನ್ನಲಾಗಿದೆ. ಆದ್ರೆ, ಈವರೆಗೆ ಅಣ್ಣಾಮಲೈ ಮುಂದೇನು ಮಾಡ್ತಾರೆ ಅನ್ನೋದು ಸಸ್ಪೆನ್ಸ್ ಆಗಿಯೇ ಉಳಿದಿದೆ.
ಅಣ್ಣಾಮಲೈ 2011 ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿದ್ದರು. ಮಂಗಳೂರು, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕ ಹಲವೆಡೆ ಕೆಲಸ ಮಾಡಿದ್ದ ಅಣ್ಣಾಮಲೈ, ಖಡಕ್ ಅಧಿಕಾರಿಯಂತಲೇ ಫೇಮಸ್ ಪಡೆದಿದ್ರು.
You may like
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?