ರೈಸಿಂಗ್ ಕನ್ನಡ :
ಯಾದಗಿರಿ:
ಕಳೆದ ಹದಿನೈದು ದಿನಗಳಿಂದ ಯಾದಗಿರಿ ಜಿಲ್ಲೆಯಾದ್ಯಂತ ಬಾರಿ ಮಳೆಗೆ ಕೃಷ್ಣಾ ನದಿಯಲ್ಲಿ ಪ್ರವಾಹ ಉಂಟಾಗಿ ಅಪಾರ ಹಾನಿ ಸಂಭವಿಸಿದೆ.
ಪ್ರವಾಹ ಹಾಗೂ ಬೆಳೆ ಹಾನಿ ಪ್ರದೇಶಕ್ಕೆ ಇಂದು ಕಂದಾಯ ಸಚಿವ ಆರ್ ಅಶೋಕ್ ಭೇಟಿ ನೀಡಿ ಬೆಳೆ ಹಾನಿ ವೀಕ್ಷಣೆ ಮಾಡಿದರು. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಾಪುರ ಗ್ರಾಮದಲ್ಲಿ ಕೃಷ್ಣಾ ನದಿ ಹಿನ್ನರಿಗೆ ಜಮೀನುಗಳಿಗೆ ನೀರು ನುಗ್ಗಿದ್ದನು ವೀಕ್ಷಿಸಿದರು.
ಜಿಲ್ಲೆಯಲ್ಲಿ ಬರೋಬ್ಬರಿ 16 ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಹಾನಿ ಸಂಭವಿಸಿದೆ ಎನ್ನಲಾಗಿದೆ. ಈಗಾಗಲೇ ಯಾದಗಿರಿ, ಕಲಬುರಗಿ, ರಾಯಚೂರು, ಬೆಳಗಾವಿಯಲ್ಲಿ ಅಪಾರ ಪ್ರಮಾಣದ ಮಳೆಯಾಗಿದ್ದು ಅಪಾರ ಬೆಳೆ, ಮನೆ ಹಾನಿ ಸಂಭವಿಸಿದ್ದು, ಕೇಂದ್ರ ಸರ್ಕಾರ ಎನ್ ಡಿಆರ್ ಎಫ್ ನಾನ್ಸ್ ಪ್ರಕಾರ ರೈತರಿಗೆ ಪರಿಹಾರ ನೀಡಲಾಗ್ತಿದೆ. ಈಗಾಗಲೇ ಮೊದಲನೇ , ಎರಡನೇ ಕಂತಿನ ಹಣ ಬೀಡುಗಡೆ ಆಗಿದ್ದು ಮೂರನೇ ಕಂತು ಬಿಡುಗಡೆಗೆ ಒತ್ತಾಯಿಸಿದ್ದೇವೆ.
ಒಟ್ಟು 4 ಸಾವಿರ ಕೋಟಿ ಪರಿಹಾರಕ್ಕೆ ಮನವಿ ಸಲ್ಲಿಸಿದ್ದೇವೆ ಕೇಂದ್ರ ಸರ್ಕಾರ ಹಂತ ಹಂತವಾಗಿ ಬಿಡುಗಡೆ ಮಾಡ್ತಿದೆ. ಕಳೆದ ವರ್ಷ ಪ್ರವಾಹದ ಸಂದರ್ಭದಲ್ಲಿ ಬಿಡುಗಡೆ ಮಾಡಿದ ಪರಿಹಾರದಲ್ಲಿ ಸಣ್ಣ ಪುಟ್ಟ ಲೋಪದೋಷವಾಗಿದ್ದು ಅವುಗಳನ್ನು ಸರಿಪಡಿಸಲು ಅಧಿಕಾರಿಗಳಿಗೆ ಹೇಳಿದ್ದೇವೆ. ರೈತರ ಖಾತೆಗೆ ಅಮೌಂಟ್ ಬಂದಿಲ್ಲ ಅವರ ಸಂಬಂಧಿಗಳ ಖಾತೆಗೆ ನೀಡಲಾಗಿದೆ. ಇದ್ರಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ರೆ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.
ಕಳೆದ ಹದಿನೈದು ದಿನಗಳಿಂದ ಸುರಿದ ಮಳೆಗೆ ಅಪಾರ ಹಾನಿ ಸಂಭವಿಸಿದ್ದು ಈ ಬಗ್ಗೆ ವರದಿ ಪಡೆದು ಸೂಕ್ತ ಪರಿಹಾರ ನೀಡಲಾಗುವುದು ಎಂದಿದ್ದಾರೆ ಕಂದಾಯ ಸಚಿವರು.
ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಸ್ಯಾಂಡಲ್ವುಡ್ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!
ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು
ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?
ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?