Connect with us

ಬೆಂಗಳೂರು

ಭೂ ವಿಜ್ಞಾನಿ ಪ್ರತಿಮಾ ಕೊಲೆ ಕೇಸ್ : 600 ಪುಟಗಳ ಚಾರ್ಜ್ ಶೀಟ್ ನಲ್ಲಿ ಏನಿದೆ?

ಬೆಂಗಳೂರು : ಅವತ್ತು ಎಲ್ಲವೂ ಸರಿ ಇದ್ದಿದ್ರೆ, ಆ ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಬದುಕಿರುತ್ತಿದ್ದರು.. ಆದ್ರೆ, ಅವನೊಬ್ಬ ಸೇಡಿನ ಹಪಾಹಪಿಗೆ ಬಿದ್ದು, ಜಸ್ಟ್ ಎಂಟು ನಿಮಿಷದಲ್ಲಿ ಕೊಂದು 5 ಲಕ್ಷ ರೂಪಾಯಿ ಜೊತೆ ಪರಾರಿಯಾಗಿದ್ದ.. ಹೌದು… ಕರ್ನಾಟಕವನ್ನು ಬೆಚ್ಚಿ ಬೀಳಿಸಿದ್ದ ಗಣಿ ಭೂ ವಿಜ್ಞಾನ ಇಲಾಖೆ ಅಧಿಕಾರಿ ಪ್ರತಿಮಾ ಹತ್ಯೆ ಪ್ರಕರಣದ ಕುರಿತು ಪೊಲೀಸರು ತನಿಖೆ ಪೂರ್ಣಗೊಳಿಸಿದ್ದಾರೆ. ಹತ್ಯೆ ಪ್ರಕರಣದ ಕುರಿತು ಬೆಂಗಳೂರು ಪೊಲೀಸರು ಆರೋಪಿ ಕಿರಣ್ ಬಂಧಿಸಿದ್ದು, ಕೋರ್ಟ್‌ಗೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.

2023ರ ನವೆಂಬರ್ 4ರಂದು ಪ್ರತಿಮಾ ಬಳಿ ಹಿಂದೆ ಕಾರು ಚಾಲಕನಾಗಿ ಕಾರ್ಯ ನಿರ್ವಹಣೆ ಮಾಡುತ್ತಿದ್ದ ಕಿರಣ್ ಹತ್ಯೆ ಮಾಡಿದ್ದ. ಬೆಂಗಳೂರಿನ ದೊಡ್ಡಕಲ್ಲಸಂದ್ರದ ಕುವೆಂಪು ನಗರದ ನಿವಾಸದಲ್ಲಿ ಪ್ರತಿಮಾ ಹತ್ಯೆ ನಡೆದಿತ್ತು. ಸುಬ್ರಮಣ್ಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇನ್ಸ್‌ಪೆಕ್ಟರ್ ಎನ್. ಜಗದೀಶ್ ತನಿಖಾಧಿಕಾರಿಯಾಗಿ ನೇಮಕಗೊಂಡಿದ್ದರು. ಕೊಲೆ ನಡೆದ ಮರುದಿನವೇ ಆರೋಪಿ ಕಿರಣ್ ಬಂಧಿಸಲಾಗಿತ್ತು. ಆತ ಸಹ ತಪ್ಪೊಪ್ಪಿಕೊಂಡಿದ್ದ. ಪ್ರಕರಣದ ತನಿಖೆ ಪೂರ್ಣಗೊಂಡಿದ್ದು, ನಗರದ 2ನೇ ಎಸಿಎಂಎಂ ನ್ಯಾಯಾಲಯಕ್ಕೆ 600 ಪುಟಗಳ ಚಾರ್ಜ್‌ ಶೀಟ್ ಸಲ್ಲಿಕೆ ಮಾಡಿದ್ದಾರೆ.

8 ನಿಮಿಷದಲ್ಲಿ ಹತ್ಯೆ, 5 ಲಕ್ಷ ಹಣ ಕದ್ದು ಪರಾರಿ; ಪ್ರತಿಮಾ ಹತ್ಯೆ ಪ್ರಕರಣದ ತನಿಖೆ ನಡೆಸಿರುವ ಪೊಲೀಸರು 600 ಪುಟಗಳ ಚಾರ್ಜ್‌ ಶೀಟ್‌ನಲ್ಲಿ ಆರೋಪಿ ಕಿರಣ್ ಹೇಳಿಕೆ, 70 ಸಾಕ್ಷಿದಾರರ ಹೇಳಿಕೆ, ಸಿಸಿಟಿವಿ ದೃಶ್ಯಾವಳಿಗಳ, ಸಾಂದರ್ಭಿಕ ಸಾಕ್ಷ್ಯಗಳು, ಡಿಜಿಟಲ್ ಸಾಕ್ಷ್ಯಗಳನ್ನು ಸೇರಿಸಿದ್ದಾರೆ.
ಆರೋಪಿ ಗುತ್ತಿಗೆ ಆಧಾರದ ಮೇಲೆ ಪ್ರತಿಮಾ ಬಳಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಆತನಿಗೆ ಕ್ರಿಮಿನಲ್ ಹಿನ್ನಲೆ ಇರುವ ಕಾರಣಕ್ಕೆ ಆತನನ್ನು ಕೆಲಸದಿಂದ ತೆಗೆದು ಹಾಕಿ ಬೇರೆ ಚಾಲಕನನ್ನು ನೇಮಿಸಿದ್ದರು. ಆದರೆ ಕಿರಣ್ ಪದೇ ಪದೇ ಕೆಲಸಕ್ಕೆ ತೆಗೆದುಕೊಳ್ಳುವಂತೆ ಪ್ರತಿಮಾರನ್ನು ಪೀಡಿಸುತ್ತಿದ್ದ. ಇದಕ್ಕೆ ನಿರಾಕರಿಸಿದ ಕಾರಣ ಕೊಲೆಗೆ ಸಂಚು ರೂಪಿಸಿದ್ದ.

ಚಾರ್ಜ್‌ ಶೀಟ್‌ನಲ್ಲಿ ಪೊಲೀಸರು ಕಿರಣ್‌ಗೆ ಪ್ರತಿಮಾ ಮನೆಯಲ್ಲಿ ಒಂಟಿಯಾಗಿರುವುದು ತಿಳಿದಿತ್ತು. ಆದ್ದರಿಂದ ಅವರನ್ನು ಹತ್ಯೆ ಮಾಡಲು ನವೆಂಬರ್ 3ರಂದು ಮನೆಗೆ ಆಗಮಿಸಿದ್ದ. ಆದರೆ ಅವರು ಸಿಗದೇ ವಾಪಸ್ ತೆರಳಿದ್ದ. ನವೆಂಬರ್ 4ರಂದು ರಾತ್ರಿ 8 ಗಂಟೆ ಸುಮಾರಿಗೆ ಮತ್ತೆ ಪ್ರತಿಮಾ ಮನೆ ಬಳಿ ಬಂದು ಟೆರಸ್‌ನಲ್ಲಿ ಅವಿತು ಕುಳಿತಿದ್ದ.

ರಾತ್ರಿ 8.30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಪ್ರತಿಮಾ ಮನೆಗೆ ಬಂದಿದ್ದರು. ಅವರು ಮನೆಯ ಬಾಗಿಲು ತೆರೆಯುತ್ತಿದ್ದಂತೆ ಅವರನ್ನು ಹಿಂಬಾಲಿಸಿ, ಬಾಯಿ ಮುಚ್ಚಿದ್ದ. ಬಳಿಕ ವೇಲ್‌ನಿಂದ ಅವರ ಕುತ್ತಿಗೆ ಬಿಗಿದಿದ್ದ. ಬಳಿಕ ಚಿನ್ನದ ಬಳೆ, ಚಿನ್ನದ ಸರ, ಕಬೋಡ್‌ನಲ್ಲಿ ಸಿಕ್ಕ 5 ಲಕ್ಷ ರೂ. ತೆಗೆದುಕೊಂಡು ಪರಾರಿಯಾಗಿದ್ದ.

Advertisement

ಒಟ್ಟು 8 ನಿಮಿಷದಲ್ಲಿಯೇ ಪ್ರತಿಮಾರನ್ನು ಕೊಲೆ ಮಾಡಿ, ಹಣ ತೆಗೆದುಕೊಂಡು ಆರೋಪಿ ಕಿರಣ್ ಅಲ್ಲಿಂದ ಪರಾರಿಯಾಗಿದ್ದ. ಬಳಿಕ ಮನೆಯಿಂದ ಹೊರ ಬಂದು ಕೊಂಚ ದೂರ ಹೋದ ಮೇಲೆ ಸ್ನೇಹಿತರಿಗೆ ಕರೆ ಮಾಡಿದ್ದ. ಬಳಿಕ ಅಲ್ಲಿಂದ ಸ್ನೇಹಿತರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳಿದ್ದ.
ಪ್ರತಿಮಾ ಮನೆಯಲ್ಲಿ 5 ಲಕ್ಷ ರೂ. ಹಣವನ್ನು ಶಿವ ಎಂಬ ಸ್ನೇಹಿತನಿಗೆ ಕಿರಣ್ ಕೊಟ್ಟಿದ್ದ. ಹಣ ಮನೆಯಲ್ಲಿ ಇಟ್ಟುಕೊಂಡಿರು, ಮಲೆ ಮಹದೇಶ್ವರ ಬೆಟ್ಟದಿಂದ ಬಂದ ಬಳಿಕ ವಾಪಸ್ ಕೊಡು ಎಂದು ತಿಳಿಸಿದ್ದ. ಹಣದ ಮೂಲದ ಕುರಿತು ಕೇಳದ ಶಿವ ಹಣವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ.

ಆರೋಪಿ ಕಿರಣ್ ಮಲೆ ಮಹದೇಶ್ವರ ಬೆಟ್ಟದಲ್ಲಿದ್ದಾಗಲೇ ಪ್ರತಿಮಾ ಹತ್ಯೆ ಬಗ್ಗೆ ಮಾಧ್ಯಮಗಳಲ್ಲಿ ವರದಿ ಬಂದಿತ್ತು. ಅದನ್ನು ನೋಡಿ ಸ್ನೇಹಿತರ ಬಳಿ ಆಶ್ಚರ್ಯ ವ್ಯಕ್ತಪಡಿಸಿದ್ದ. ಆತ ಬೆಟ್ಟದಲ್ಲಿ ಮೊಬೈಲ್ ಫೋನ್ ಆನ್ ಮಾಡಿದಾಗ ಪೊಲೀಸರು ಕಿರಣ್ ಜಾಡು ಹಿಡಿದು ಬಂಧಿಸಿದ್ದರು.

ಬೆಂಗಳೂರು2 years ago

ನಾನೇನು ಮಾಡಿಲ್ಲ ಅಂತಿದ್ದ ದರ್ಶನ್ , ಸಾಕ್ಷಿ ನೋಡ್ತಿದ್ದಂತೆ ಸೈಲೆಂಟ್ಆಗಿ ಬಿಟ್ರಾ ಚಾಲೆಂಜಿಂಗ್ ಸ್ಟಾರ್..?

ಬೆಂಗಳೂರು2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಟಾಪ್ ನ್ಯೂಸ್2 years ago

ಸ್ಯಾಂಡಲ್ವುಡ್​ಗೆ ಶಾಕಿಂಗ್ ನ್ಯೂಸ್ .! ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್..!

ಬೆಂಗಳೂರು2 years ago

ಗ್ಯಾರಂಟಿ ಶಕ್ತಿ ಯೋಜನೆ ಎಫೆಕ್ಟ್: ಟಿಕೆಟ್ ರೇಟ್ ದುಪ್ಪಟ್ಟು

ಬೆಂಗಳೂರು2 years ago

ಚಂದನ್ – ನಿವೇದಿತಾ ಜೋಡಿಯನ್ನು ಒಂದು ಮಾಡ್ತಾರಾ ನಟ ಧ್ರುವ ಸರ್ಜಾ.?

ಬೆಂಗಳೂರು2 years ago

ವಿಚ್ಛೇದನ ಪಡೆದು ವಿದೇಶಕ್ಕೆ ಹರ್ತಿದ್ದಾರಾ ನಿವೇದಿತಾ ಗೌಡ..? ಚಂದನ್ ಶೆಟ್ಟಿ ಹೇಳಿದ್ದೇನು..?

ಬೆಂಗಳೂರು2 years ago

ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ನಿಧನ

ಬೆಂಗಳೂರು2 years ago

ಚಂದನ್ ಶೆಟ್ಟಿ – ನಿವೇದಿತಾ ಗೌಡ ದಾಂಪತ್ಯ ಬಿರುಕು: ಕೋರ್ಟ್​ನಲ್ಲಿ ಆಗಿದ್ದೇನು..?

ಬೆಂಗಳೂರು2 years ago

ಕೈ ಕೈ ಹಿಡಿದು ಕೋರ್ಟ್ ಗೆ ಬಂದ ಡಿವೋರ್ಸ್ ಜೋಡಿ

ಬೆಂಗಳೂರು2 years ago

ನ್ಯಾಯಾದೀಶರ ಆದೇಶಕ್ಕಾಗಿ ಕಾಯುತ್ತಿರುವ ಬಿಗ್​ಬಾಸ್ ಜೋಡಿ

Featured5 years ago

ಮಂಗಳವಾರವೇ ಡಿಸಿಎಂ, ಸಚಿವರ ಪಟ್ಟಿ ರಿಲೀಸ್​ : ಹೈಕಮಾಂಡ್​​ ಲಿಸ್ಟ್​ ಬಿಡುಗಡೆ ಮಾಡುತ್ತೆ : ಸಿಎಂ ಬೊಮ್ಮಾಯಿ

Featured7 years ago

ಸೆಕ್ಸ್​ ಸಾಮರ್ಥ್ಯ ಕಡಿಮೆ ಆಗಿದೆಯಾ..? ಹಾಗಿದ್ರೆ, ಈ ಟಿಪ್ಸ್​ ಟ್ರೈ ಮಾಡಿ..

Featured5 years ago

ಕೇಂದ್ರ ಸಚಿವರ ಜೊತೆ ಪ್ರಧಾನಿ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ : ಮೋದಿ ಹೇಳಿದ್ದೇನು.?

Featured3 years ago

ಜಲಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಡಿಸಿಎಂ ಆಪ್ತ ಕಾರ್ಯದರ್ಶಿ ಡಾ ರಾಜೇಂದ್ರ ಪ್ರಸಾದ್

ಜ್ಯೋತಿಷ್ಯ7 years ago

ಕೆಲವರಿಗೆ ಚಿತ್ರ-ವಿಚಿತ್ರವಾದ ಕನಸುಗಳು ಬರುತ್ತವೆ

Ayurveda
Featured6 years ago

ಲೈಂಗಿಕ ಪ್ರಾಬ್ಲಂಗೆ ಮನೆಯಲ್ಲೇ ಮದ್ದು – ಖರ್ಚಿಲ್ಲದೆ ಸಮಸ್ಯೆ ಪರಿಹಾರ..!

Featured7 years ago

ಮಹಿಳೆಯರು ಎಷ್ಟೊತ್ತು ಸೆಕ್ಸ್​ ಮಾಡಿದರೆ ಖುಷಿಯಾಗ್ತಾರೆ..? ಸ್ತ್ರೀಯರ ಊಹೆ ಹೇಗಿರುತ್ತೆ..?

Featured2 years ago

Rameshwaram Cafe | ರಾಮೇಶ್ವರಂ ಕೆಫೆನಲ್ಲಿ ಆಗಿದ್ದೇನು.?

Featured7 years ago

ನಾಲಿಗೆ ಹುಣ್ಣು (ಪೋಟು) ಸಮಸ್ಯೆಗೆ ಪರಿಹಾರ ಹೇಗೆ ಗೊತ್ತಾ..? ನಿಮಗೂ ಕಷ್ಟ ಆಗುತ್ತಿದೆಯಾ..?

Featured3 years ago

ಅಗಲಿದ ಗಣ್ಯರಿಗೆ ಬಸವರಾಜ ಬೊಮ್ಮಾಯಿ ಸಂತಾಪ
ವ್ಯಕ್ತಿಯ ನಡೆ ನುಡಿಯಿಂದ ನಾಯಕತ್ವ ದೊರೆಯುತ್ತದೆ: ಬಸವರಾಜ ಬೊಮ್ಮಾಯಿ